ಮೈಸೂರು

ಬಂಡೀಪುರದಲ್ಲಿ ರಾತ್ರಿ ಪ್ರಯಾಣ ನಿರ್ಬಂಧ ಮಾಡುವ ಬಗ್ಗೆ ಕಾಂಗ್ರೆಸ್‌ ದ್ವಿಮುಖ ನಿಲುವು: ಯದುವೀರ್‌ ಒಡೆಯರ್

ಮೈಸೂರು: ಸಂಸದೆ ಪ್ರಿಯಾಂಕಾ ಗಾಂಧಿ ಅವರು ನೀಡಿರುವ ಹೇಳಿಕೆಯಿಂದ ಬಂಡೀಪುರದಲ್ಲಿ ರಾತ್ರಿ ಪ್ರಯಾಣ ನಿರ್ಬಂಧ ಮಾಡುವ ಬಗ್ಗೆ ಕಾಂಗ್ರೆಸ್‌ ನಾಯಕರು ತೋರುತ್ತಿರುವ ದ್ವಿಮುಖ ನಿಲುವು ಪರಿಸರ ಸಂರಕ್ಷಣೆಗೆ ಅಪಾಯಕಾರಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಇಂದು(ಡಿ.4) ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಬಂಡೀಪುರದ ಮೂಲಕ ರಾತ್ರಿ ಪ್ರಯಾಣ ನಿರ್ಬಂಧವನ್ನು ನಿಷೇದಿಸುವ ವಿಚಾರದ ಬಗ್ಗೆ ನೀಡಿರುವ ಇತ್ತೀಚಿನ ಹೇಳಿಕೆ ಕಾಂಗ್ರೆಸ್ ನಾಯಕತ್ವದಲ್ಲಿನ ಭಿನ್ನಾಭಿಪ್ರಾಯವನ್ನು ತೋರುತ್ತದೆ ಎಂದಿದ್ದಾರೆ.

ಒಂದು ಕಡೆ, ನಮ್ಮ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದಿಷ್ಟವಾಗಿ ಅಂತಹ ಯಾವುದೇ ಪ್ರಸ್ತಾಪವಿಲ್ಲ ಎಂದು ನಿರಾಕರಿಸುತ್ತಾರೆ. ಇನ್ನೊಂದು ಕಡೆ, ಪಕ್ಷದ ರಾಷ್ಟೀಯ ನಾಯಕರು ಅದಕ್ಕೆ ವಿರುದ್ಧವಾಗಿ ಸೂಚನೆ ನೀಡುತ್ತಿದ್ದಾರೆ. ಈ ಅಸಮನ್ವಯತೆ ಅವರ ಆಡಳಿತದ ಪ್ರಾಮಾಣಿಕತೆಯ ಬಗ್ಗೆ ಸಂದೇಹಗಳನ್ನು ಹುಟ್ಟುಹಾಕುತ್ತದೆ ಎಂದು ಹೇಳಿದ್ದಾರೆ.

ಮೇಲಾಗಿ, ಈ ಪ್ರಸ್ತಾಪಗಳು ನಮ್ಮ ದೇಶದ ಪರಿಸರ ವ್ಯವಸ್ಥೆಗಳ ಸಂರಕ್ಷಣೆಯ ಬಗ್ಗೆ ಚಿಂತೆಯನ್ನೂ ತೋರುತ್ತವೆ. ಬಂಡೀಪುರವು ಕೇವಲ ಒಂದು ರಸ್ತೆ ಅಲ್ಲ—ಇದು ಅನೇಕ ವನ್ಯಜೀವಿ ಪ್ರಭೇಧಗಳ ವಾಸಸ್ಥಳವಾಗಿದೆ. ಅವುಗಳನ್ನು ಮಾನವ ಚಟುವಟಿಕೆಗಳಿಂದ ರಕ್ಷಿಸಲು, ವಿಶೇಷವಾಗಿ ರಾತ್ರಿ ಸಮಯದಲ್ಲಿ, ಸೂಕ್ಷ್ಮ ಅವಧಿಯಲ್ಲಿ ಅವುಗಳಿಗೆ ರಕ್ಷಣೆ ನೀಡಬೇಕಾದ ಅಗತ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಾಜಕೀಯ ನಾಯಕರು ಈ ದೇಶದ ಪ್ರಕೃತಿ ಸಂರಕ್ಷಣೆಗೆ ಪ್ರಜ್ಞಾಪೂರ್ವಕವಾಗಿರುವುದನ್ನು ನಿರ್ಧರಿಸಬೇಕೇ ಹೊರತು, ತಮ್ಮ ಪ್ರಣಾಳಿಕೆಯು ಕೆಲವೊಬ್ಬರಿಗೆ ಲಾಭವನ್ನು ತರುವಂತೆ ಮಾಡಿರುವುದರಿಂದ ಈ ರೀತಿಯ ನಿರ್ಭಂಧವನ್ನು ಹಿಂಪಡೆದು ಪರಿಸರ ಹಾಗೂ ವನ್ಯಜೀವಿಗಳ ಸರ್ವನಾಶ ಮಾಡುವುದು ಸರಿಯಲ್ಲ. ಇದರಿಂದ ಸಂಭವಿಸಬಹುದಾದ ಹಾನಿಯ ಬಗ್ಗೆಯು ಸಹ ಚಿಂತಿಸಬೇಕಾಗಿದೆ. ಒಟ್ಟಾರೆ ಕರ್ನಾಟಕಕ್ಕೆ ಅವಶ್ಯಕವಾದದ್ದು ಏನೆಂದರೆ, ಒಂದೇ ಧ್ವನಿಯಲ್ಲಿ ಮಾತನಾಡುವ, ನಾಡಿನ ಜನತೆ ಮತ್ತು ಪರಿಸರದ ಹಿತದೃಷ್ಠಿಯಿಂದ ಕ್ರಮಗಳನ್ನೂ ತೆಗೆದುಕೊಳ್ಳುವ ಬಲಿಷ್ಠ ಸರ್ಕಾರ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅ.11ಕ್ಕೆ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…

52 seconds ago

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

1 hour ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

2 hours ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

3 hours ago

​ಮೈಸೂರು ವಿ.ವಿ | ಸಂಶೋಧಕರ ಶಿಷ್ಯವೇತನ ಬಿಕ್ಕಟ್ಟು ಬಗೆಹರಿಸಿದ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2026-27ನೇ ಸಾಲಿನಲ್ಲಿ ಸಂಶೋಧನೆ ಕೈಗೊಂಡಿರುವ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST)…

3 hours ago

ಮೈಸೂರು | ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ ; ಫುಟ್‌ಪಾತ್ ಆಕ್ರಮಿಸಿದ್ದ 30 ಅಂಗಡಿಗಳಿಗೆ ಶಾಕ್‌

ಮೈಸೂರು : ಫುಟ್‌ಪಾತ್‌ಗಳನ್ನು ಅತಿಕ್ರಮಿಸಿದ್ದ ಅನಧಿಕೃತ ವ್ಯಾಪಾರಿಗಳ ವಿರುದ್ಧ ಮೈಸೂರು ಮಹಾನಗರ ಪಾಲಿಕೆ ಶುಕ್ರವಾರ ಖಡಕ್ಕಾಗಿ ಕಾರ್ಯಾಚರಣೆ ನಡೆಸಿತು. ವಲಯ-5…

5 hours ago