ಮೈಸೂರು

ಬಂಡೀಪುರದಲ್ಲಿ ರಾತ್ರಿ ಪ್ರಯಾಣ ನಿರ್ಬಂಧ ಮಾಡುವ ಬಗ್ಗೆ ಕಾಂಗ್ರೆಸ್‌ ದ್ವಿಮುಖ ನಿಲುವು: ಯದುವೀರ್‌ ಒಡೆಯರ್

ಮೈಸೂರು: ಸಂಸದೆ ಪ್ರಿಯಾಂಕಾ ಗಾಂಧಿ ಅವರು ನೀಡಿರುವ ಹೇಳಿಕೆಯಿಂದ ಬಂಡೀಪುರದಲ್ಲಿ ರಾತ್ರಿ ಪ್ರಯಾಣ ನಿರ್ಬಂಧ ಮಾಡುವ ಬಗ್ಗೆ ಕಾಂಗ್ರೆಸ್‌ ನಾಯಕರು ತೋರುತ್ತಿರುವ ದ್ವಿಮುಖ ನಿಲುವು ಪರಿಸರ ಸಂರಕ್ಷಣೆಗೆ ಅಪಾಯಕಾರಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಇಂದು(ಡಿ.4) ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಬಂಡೀಪುರದ ಮೂಲಕ ರಾತ್ರಿ ಪ್ರಯಾಣ ನಿರ್ಬಂಧವನ್ನು ನಿಷೇದಿಸುವ ವಿಚಾರದ ಬಗ್ಗೆ ನೀಡಿರುವ ಇತ್ತೀಚಿನ ಹೇಳಿಕೆ ಕಾಂಗ್ರೆಸ್ ನಾಯಕತ್ವದಲ್ಲಿನ ಭಿನ್ನಾಭಿಪ್ರಾಯವನ್ನು ತೋರುತ್ತದೆ ಎಂದಿದ್ದಾರೆ.

ಒಂದು ಕಡೆ, ನಮ್ಮ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದಿಷ್ಟವಾಗಿ ಅಂತಹ ಯಾವುದೇ ಪ್ರಸ್ತಾಪವಿಲ್ಲ ಎಂದು ನಿರಾಕರಿಸುತ್ತಾರೆ. ಇನ್ನೊಂದು ಕಡೆ, ಪಕ್ಷದ ರಾಷ್ಟೀಯ ನಾಯಕರು ಅದಕ್ಕೆ ವಿರುದ್ಧವಾಗಿ ಸೂಚನೆ ನೀಡುತ್ತಿದ್ದಾರೆ. ಈ ಅಸಮನ್ವಯತೆ ಅವರ ಆಡಳಿತದ ಪ್ರಾಮಾಣಿಕತೆಯ ಬಗ್ಗೆ ಸಂದೇಹಗಳನ್ನು ಹುಟ್ಟುಹಾಕುತ್ತದೆ ಎಂದು ಹೇಳಿದ್ದಾರೆ.

ಮೇಲಾಗಿ, ಈ ಪ್ರಸ್ತಾಪಗಳು ನಮ್ಮ ದೇಶದ ಪರಿಸರ ವ್ಯವಸ್ಥೆಗಳ ಸಂರಕ್ಷಣೆಯ ಬಗ್ಗೆ ಚಿಂತೆಯನ್ನೂ ತೋರುತ್ತವೆ. ಬಂಡೀಪುರವು ಕೇವಲ ಒಂದು ರಸ್ತೆ ಅಲ್ಲ—ಇದು ಅನೇಕ ವನ್ಯಜೀವಿ ಪ್ರಭೇಧಗಳ ವಾಸಸ್ಥಳವಾಗಿದೆ. ಅವುಗಳನ್ನು ಮಾನವ ಚಟುವಟಿಕೆಗಳಿಂದ ರಕ್ಷಿಸಲು, ವಿಶೇಷವಾಗಿ ರಾತ್ರಿ ಸಮಯದಲ್ಲಿ, ಸೂಕ್ಷ್ಮ ಅವಧಿಯಲ್ಲಿ ಅವುಗಳಿಗೆ ರಕ್ಷಣೆ ನೀಡಬೇಕಾದ ಅಗತ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಾಜಕೀಯ ನಾಯಕರು ಈ ದೇಶದ ಪ್ರಕೃತಿ ಸಂರಕ್ಷಣೆಗೆ ಪ್ರಜ್ಞಾಪೂರ್ವಕವಾಗಿರುವುದನ್ನು ನಿರ್ಧರಿಸಬೇಕೇ ಹೊರತು, ತಮ್ಮ ಪ್ರಣಾಳಿಕೆಯು ಕೆಲವೊಬ್ಬರಿಗೆ ಲಾಭವನ್ನು ತರುವಂತೆ ಮಾಡಿರುವುದರಿಂದ ಈ ರೀತಿಯ ನಿರ್ಭಂಧವನ್ನು ಹಿಂಪಡೆದು ಪರಿಸರ ಹಾಗೂ ವನ್ಯಜೀವಿಗಳ ಸರ್ವನಾಶ ಮಾಡುವುದು ಸರಿಯಲ್ಲ. ಇದರಿಂದ ಸಂಭವಿಸಬಹುದಾದ ಹಾನಿಯ ಬಗ್ಗೆಯು ಸಹ ಚಿಂತಿಸಬೇಕಾಗಿದೆ. ಒಟ್ಟಾರೆ ಕರ್ನಾಟಕಕ್ಕೆ ಅವಶ್ಯಕವಾದದ್ದು ಏನೆಂದರೆ, ಒಂದೇ ಧ್ವನಿಯಲ್ಲಿ ಮಾತನಾಡುವ, ನಾಡಿನ ಜನತೆ ಮತ್ತು ಪರಿಸರದ ಹಿತದೃಷ್ಠಿಯಿಂದ ಕ್ರಮಗಳನ್ನೂ ತೆಗೆದುಕೊಳ್ಳುವ ಬಲಿಷ್ಠ ಸರ್ಕಾರ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

3 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

5 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

6 hours ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

8 hours ago

ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ…

11 hours ago

ಯಳಂದೂರು: ಬೋನಿಗೆ ಬಿದ್ದ ಚಿರತೆ

ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…

12 hours ago