ಮೈಸೂರು

ಬಂಡೀಪುರದಲ್ಲಿ ರಾತ್ರಿ ಪ್ರಯಾಣ ನಿರ್ಬಂಧ ಮಾಡುವ ಬಗ್ಗೆ ಕಾಂಗ್ರೆಸ್‌ ದ್ವಿಮುಖ ನಿಲುವು: ಯದುವೀರ್‌ ಒಡೆಯರ್

ಮೈಸೂರು: ಸಂಸದೆ ಪ್ರಿಯಾಂಕಾ ಗಾಂಧಿ ಅವರು ನೀಡಿರುವ ಹೇಳಿಕೆಯಿಂದ ಬಂಡೀಪುರದಲ್ಲಿ ರಾತ್ರಿ ಪ್ರಯಾಣ ನಿರ್ಬಂಧ ಮಾಡುವ ಬಗ್ಗೆ ಕಾಂಗ್ರೆಸ್‌ ನಾಯಕರು ತೋರುತ್ತಿರುವ ದ್ವಿಮುಖ ನಿಲುವು ಪರಿಸರ ಸಂರಕ್ಷಣೆಗೆ ಅಪಾಯಕಾರಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಇಂದು(ಡಿ.4) ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಬಂಡೀಪುರದ ಮೂಲಕ ರಾತ್ರಿ ಪ್ರಯಾಣ ನಿರ್ಬಂಧವನ್ನು ನಿಷೇದಿಸುವ ವಿಚಾರದ ಬಗ್ಗೆ ನೀಡಿರುವ ಇತ್ತೀಚಿನ ಹೇಳಿಕೆ ಕಾಂಗ್ರೆಸ್ ನಾಯಕತ್ವದಲ್ಲಿನ ಭಿನ್ನಾಭಿಪ್ರಾಯವನ್ನು ತೋರುತ್ತದೆ ಎಂದಿದ್ದಾರೆ.

ಒಂದು ಕಡೆ, ನಮ್ಮ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದಿಷ್ಟವಾಗಿ ಅಂತಹ ಯಾವುದೇ ಪ್ರಸ್ತಾಪವಿಲ್ಲ ಎಂದು ನಿರಾಕರಿಸುತ್ತಾರೆ. ಇನ್ನೊಂದು ಕಡೆ, ಪಕ್ಷದ ರಾಷ್ಟೀಯ ನಾಯಕರು ಅದಕ್ಕೆ ವಿರುದ್ಧವಾಗಿ ಸೂಚನೆ ನೀಡುತ್ತಿದ್ದಾರೆ. ಈ ಅಸಮನ್ವಯತೆ ಅವರ ಆಡಳಿತದ ಪ್ರಾಮಾಣಿಕತೆಯ ಬಗ್ಗೆ ಸಂದೇಹಗಳನ್ನು ಹುಟ್ಟುಹಾಕುತ್ತದೆ ಎಂದು ಹೇಳಿದ್ದಾರೆ.

ಮೇಲಾಗಿ, ಈ ಪ್ರಸ್ತಾಪಗಳು ನಮ್ಮ ದೇಶದ ಪರಿಸರ ವ್ಯವಸ್ಥೆಗಳ ಸಂರಕ್ಷಣೆಯ ಬಗ್ಗೆ ಚಿಂತೆಯನ್ನೂ ತೋರುತ್ತವೆ. ಬಂಡೀಪುರವು ಕೇವಲ ಒಂದು ರಸ್ತೆ ಅಲ್ಲ—ಇದು ಅನೇಕ ವನ್ಯಜೀವಿ ಪ್ರಭೇಧಗಳ ವಾಸಸ್ಥಳವಾಗಿದೆ. ಅವುಗಳನ್ನು ಮಾನವ ಚಟುವಟಿಕೆಗಳಿಂದ ರಕ್ಷಿಸಲು, ವಿಶೇಷವಾಗಿ ರಾತ್ರಿ ಸಮಯದಲ್ಲಿ, ಸೂಕ್ಷ್ಮ ಅವಧಿಯಲ್ಲಿ ಅವುಗಳಿಗೆ ರಕ್ಷಣೆ ನೀಡಬೇಕಾದ ಅಗತ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಾಜಕೀಯ ನಾಯಕರು ಈ ದೇಶದ ಪ್ರಕೃತಿ ಸಂರಕ್ಷಣೆಗೆ ಪ್ರಜ್ಞಾಪೂರ್ವಕವಾಗಿರುವುದನ್ನು ನಿರ್ಧರಿಸಬೇಕೇ ಹೊರತು, ತಮ್ಮ ಪ್ರಣಾಳಿಕೆಯು ಕೆಲವೊಬ್ಬರಿಗೆ ಲಾಭವನ್ನು ತರುವಂತೆ ಮಾಡಿರುವುದರಿಂದ ಈ ರೀತಿಯ ನಿರ್ಭಂಧವನ್ನು ಹಿಂಪಡೆದು ಪರಿಸರ ಹಾಗೂ ವನ್ಯಜೀವಿಗಳ ಸರ್ವನಾಶ ಮಾಡುವುದು ಸರಿಯಲ್ಲ. ಇದರಿಂದ ಸಂಭವಿಸಬಹುದಾದ ಹಾನಿಯ ಬಗ್ಗೆಯು ಸಹ ಚಿಂತಿಸಬೇಕಾಗಿದೆ. ಒಟ್ಟಾರೆ ಕರ್ನಾಟಕಕ್ಕೆ ಅವಶ್ಯಕವಾದದ್ದು ಏನೆಂದರೆ, ಒಂದೇ ಧ್ವನಿಯಲ್ಲಿ ಮಾತನಾಡುವ, ನಾಡಿನ ಜನತೆ ಮತ್ತು ಪರಿಸರದ ಹಿತದೃಷ್ಠಿಯಿಂದ ಕ್ರಮಗಳನ್ನೂ ತೆಗೆದುಕೊಳ್ಳುವ ಬಲಿಷ್ಠ ಸರ್ಕಾರ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮೂರು ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ ; ಉಭಯ ಸದನಗಳು ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…

2 hours ago

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

5 hours ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

7 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

12 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

12 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

13 hours ago