ಮೈಸೂರು: ಗ್ರಾಮೀಣ ಪ್ರದೇಶಗಳಲ್ಲಿ ಬ್ಯಾಂಕ್ ಬ್ಯಾಂಕ್ ವ್ಯವಹಾರಗಳ ಕುರಿತು ಹೆಚ್ಚು ಜಾಗೃತಿ ಮೂಡಿಸಿ ಸೈಬರ್ ಕ್ರೈಂ ನಂತಹ ಕೃತ್ಯಗಳ ಬಗ್ಗೆ ಪ್ರತಿಯೊಂದು ಬ್ಯಾಂಕ್ಗಳು ಗಮನ ಹರಿಸಬೇಕು ಎಂದು ಅಧಿಕಾರಿಗಳಿಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು(ಫೆಬ್ರವರಿ.21) ಡಿಸಿಸಿ ಮತ್ತು ಡಿಎಲ್ಆರ್ಸಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರತಿಯೊಂದು ಬ್ಯಾಂಕ್ಗಳು ಪ್ರತಿ ಕೇಂದ್ರಗಳಲ್ಲೂ ಕ್ಯಾಂಪೇನ್ಗಳನ್ನು ನಡೆಸಬೇಕು. ನೂತನ ಯೋಜನೆಗಳ ಮೂಲಕ ಸಾರ್ವಜನಿಕ ಕನಸುಗಳಿಗೆ ಜೀವವನ್ನು ತುಂಬಬೇಕು. ಅಲ್ಲದೇ ಅಧಿಕ ಸಮಯವನ್ನು ಬ್ಯಾಂಕ್ ವ್ಯವಹಾರಗಳನ್ನು ನೀಡುವ ಜೊತೆಗೆ ಹೆಚ್ಚು ಅಂಕಿ ಸಂಖ್ಯೆಗಳ ಡೇಟಾವನ್ನೂ ಸಂಗ್ರಹ ಮಾಡಬೇಕು ಎಂದು ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದರು.
ಇದೇ ವೇಳೆ ಜಿಲ್ಲಾ ಬ್ಯಾಂಕ್ವಾರು ಯಾವ ಯಾವ ಬ್ಯಾಂಕ್ಗಳು ಕೃಷಿಗೆ, ವಸತಿಗಳಿಗೆ, ಶಿಕ್ಷಣ, ವೈಯಕ್ತಿಕ ಲೋನ್ ಮತ್ತು ಇತರ ಲೋನ್ಗಳನ್ನು ನೀಡುವುದರ ಮೂಲಕ ಬ್ಯಾಂಕ್ಗಳು ಎಷ್ಟು ಗುರಿ ತಲುಪಿದೆ ಎಂಬುದನ್ನು ವಿವಿಧ ಜಿಲ್ಲಾ ಬ್ಯಾಂಕ್ಗಳ ಪ್ರಕಾರ ಮಾಹಿತಿ ಪಡೆದುಕೊಂಡಿದ್ದಾರೆ.
ಇನ್ನು ಶಿಕ್ಷಣ ಸಾಲಗಳ ಅಡಿಯಲ್ಲಿ ಕಾರ್ಯಕ್ಷಮತೆಯ ಬಗ್ಗೆ, ಜನ ಸುರಕ್ಷಾ ಯೋಜನೆಗಳ ಅಡಿಯಲ್ಲಿ ಪ್ರಗತಿ ಪರಿಶೀಲನೆ ನಡೆಸುವುದರ ಕುರಿತು ಜಿಲ್ಲೆಗಾಗಿ ಸಂಭಾವ್ಯ ಲಿಂಕ್ಡ್ ಯೋಜನೆ ಹಾಗೂ ಹಣಕಾಸು ಸೇರ್ಪಡೆ ಯೋಜನೆಯನ್ನು ಆರಂಭಿಸುವುದರ ಕುರಿತು ಸಭೆಯಲ್ಲಿ ಸಮಾಲೋಚನೆ ಮಾಡಲಾಗಿದೆ.
ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…
ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…
ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…
ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…
ಟೆಹ್ರಾನ್ : ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…
ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…