ಮೈಸೂರು

ಸೈಬರ್‌ ಕ್ರೈಂ ಕೃತ್ಯಗಳ ಬಗ್ಗೆ ಪ್ರತಿಯೊಂದು ಬ್ಯಾಂಕ್‌ಗಳು ಗಮನ ಹರಿಸಬೇಕು: ಸಂಸದ ಯದುವೀರ್‌

ಮೈಸೂರು: ಗ್ರಾಮೀಣ ಪ್ರದೇಶಗಳಲ್ಲಿ ಬ್ಯಾಂಕ್‌ ಬ್ಯಾಂಕ್ ವ್ಯವಹಾರಗಳ ಕುರಿತು ಹೆಚ್ಚು ಜಾಗೃತಿ ಮೂಡಿಸಿ ಸೈಬರ್ ಕ್ರೈಂ ನಂತಹ ಕೃತ್ಯಗಳ ಬಗ್ಗೆ ಪ್ರತಿಯೊಂದು ಬ್ಯಾಂಕ್‌ಗಳು ಗಮನ ಹರಿಸಬೇಕು ಎಂದು ಅಧಿಕಾರಿಗಳಿಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ.

ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಇಂದು(ಫೆಬ್ರವರಿ.21) ಡಿಸಿಸಿ ಮತ್ತು ಡಿಎಲ್‌ಆರ್‌ಸಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರತಿಯೊಂದು ಬ್ಯಾಂಕ್‌ಗಳು ಪ್ರತಿ ಕೇಂದ್ರಗಳಲ್ಲೂ ಕ್ಯಾಂಪೇನ್‌ಗಳನ್ನು ನಡೆಸಬೇಕು. ನೂತನ ಯೋಜನೆಗಳ ಮೂಲಕ ಸಾರ್ವಜನಿಕ ಕನಸುಗಳಿಗೆ ಜೀವವನ್ನು ತುಂಬಬೇಕು. ಅಲ್ಲದೇ ಅಧಿಕ ಸಮಯವನ್ನು ಬ್ಯಾಂಕ್‌ ವ್ಯವಹಾರಗಳನ್ನು ನೀಡುವ ಜೊತೆಗೆ ಹೆಚ್ಚು ಅಂಕಿ ಸಂಖ್ಯೆಗಳ ಡೇಟಾವನ್ನೂ ಸಂಗ್ರಹ ಮಾಡಬೇಕು ಎಂದು ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದರು.

ಇದೇ ವೇಳೆ ಜಿಲ್ಲಾ ಬ್ಯಾಂಕ್‌ವಾರು ಯಾವ ಯಾವ ಬ್ಯಾಂಕ್‌ಗಳು ಕೃಷಿಗೆ, ವಸತಿಗಳಿಗೆ, ಶಿಕ್ಷಣ, ವೈಯಕ್ತಿಕ ಲೋನ್‌ ಮತ್ತು ಇತರ ಲೋನ್‌ಗಳನ್ನು ನೀಡುವುದರ ಮೂಲಕ ಬ್ಯಾಂಕ್‌ಗಳು ಎಷ್ಟು ಗುರಿ ತಲುಪಿದೆ ಎಂಬುದನ್ನು ವಿವಿಧ ಜಿಲ್ಲಾ ಬ್ಯಾಂಕ್‌ಗಳ ಪ್ರಕಾರ ಮಾಹಿತಿ ಪಡೆದುಕೊಂಡಿದ್ದಾರೆ.

ಇನ್ನು ಶಿಕ್ಷಣ ಸಾಲಗಳ ಅಡಿಯಲ್ಲಿ ಕಾರ್ಯಕ್ಷಮತೆಯ ಬಗ್ಗೆ, ಜನ ಸುರಕ್ಷಾ ಯೋಜನೆಗಳ ಅಡಿಯಲ್ಲಿ ಪ್ರಗತಿ ಪರಿಶೀಲನೆ ನಡೆಸುವುದರ ಕುರಿತು ಜಿಲ್ಲೆಗಾಗಿ ಸಂಭಾವ್ಯ ಲಿಂಕ್ಡ್ ಯೋಜನೆ ಹಾಗೂ ಹಣಕಾಸು ಸೇರ್ಪಡೆ ಯೋಜನೆಯನ್ನು ಆರಂಭಿಸುವುದರ ಕುರಿತು ಸಭೆಯಲ್ಲಿ ಸಮಾಲೋಚನೆ ಮಾಡಲಾಗಿದೆ.

ಅರ್ಚನ ಎಸ್‌ ಎಸ್

Recent Posts

ಮಾನವ ಹಕ್ಕುಗಳನ್ನು ಪೋಷಿಸುವ ಸಾಮಾಜಿಕ ನ್ಯಾಯದ ಪರಿಕಲ್ಪನೆ

ಯಾವುದೋ ಒಂದು ಹಕ್ಕು ಹೆಚ್ಚಿನ ಆದ್ಯತೆ ಹೊಂದಲು ಸಾಧ್ಯವೇ? ಕೆಲವು ಹಕ್ಕುಗಳು ಹೆಚ್ಚು ಮುಖ್ಯವಾಗುವವೇ? ಒಂದು ರೀತಿಯ ಹಕ್ಕಿನಿಂದ ಇನ್ನೊಂದು…

5 mins ago

ಅವೈಜ್ಞಾನಿಕ ಚರಂಡಿ ಕಾಮಗಾರಿಯಿಂದ ಕಿರಿಕಿರಿ

ಮನೆ ಮುಂಭಾಗ ತ್ಯಾಜ್ಯ ನೀರು ನಿಂತು ಗಬ್ಬುನಾರುತ್ತಿರುವ ಚರಂಡಿ ; ಸಾಂಕ್ರಾಮಿಕ ರೋಗ ಹರಡುವ ಭೀತಿ, ಚುನಾವಣೆ ಬಹಿಷ್ಕಾರಕ್ಕೆ ಸ್ಥಳೀಯರ…

32 mins ago

ಅಂಗನವಾಡಿಗಳಿಗೆ ೬ ತಿಂಗಳಿಂದ ಬಾರದ ಮೊಟ್ಟೆ ಹಣ!

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…

3 hours ago

‘ತ್ಯಾಜ್ಯ ಸಂಸ್ಕರಣೆ, ವಿಲೇವಾರಿಗೆ ಕ್ರಮಕೈಗೊಳ್ಳಬೇಕು’

ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…

3 hours ago

ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿಗೆ ಪರದಾಟ

ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…

3 hours ago

ವರ್ಷಾಂತ್ಯ: ಗರಿಗೆದರದ ಮೈಸೂರು ಪ್ರವಾಸೋದ್ಯಮ

ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…

3 hours ago