ಮೈಸೂರು

ಸೈಬರ್‌ ಕ್ರೈಂ ಕೃತ್ಯಗಳ ಬಗ್ಗೆ ಪ್ರತಿಯೊಂದು ಬ್ಯಾಂಕ್‌ಗಳು ಗಮನ ಹರಿಸಬೇಕು: ಸಂಸದ ಯದುವೀರ್‌

ಮೈಸೂರು: ಗ್ರಾಮೀಣ ಪ್ರದೇಶಗಳಲ್ಲಿ ಬ್ಯಾಂಕ್‌ ಬ್ಯಾಂಕ್ ವ್ಯವಹಾರಗಳ ಕುರಿತು ಹೆಚ್ಚು ಜಾಗೃತಿ ಮೂಡಿಸಿ ಸೈಬರ್ ಕ್ರೈಂ ನಂತಹ ಕೃತ್ಯಗಳ ಬಗ್ಗೆ ಪ್ರತಿಯೊಂದು ಬ್ಯಾಂಕ್‌ಗಳು ಗಮನ ಹರಿಸಬೇಕು ಎಂದು ಅಧಿಕಾರಿಗಳಿಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ.

ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಇಂದು(ಫೆಬ್ರವರಿ.21) ಡಿಸಿಸಿ ಮತ್ತು ಡಿಎಲ್‌ಆರ್‌ಸಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರತಿಯೊಂದು ಬ್ಯಾಂಕ್‌ಗಳು ಪ್ರತಿ ಕೇಂದ್ರಗಳಲ್ಲೂ ಕ್ಯಾಂಪೇನ್‌ಗಳನ್ನು ನಡೆಸಬೇಕು. ನೂತನ ಯೋಜನೆಗಳ ಮೂಲಕ ಸಾರ್ವಜನಿಕ ಕನಸುಗಳಿಗೆ ಜೀವವನ್ನು ತುಂಬಬೇಕು. ಅಲ್ಲದೇ ಅಧಿಕ ಸಮಯವನ್ನು ಬ್ಯಾಂಕ್‌ ವ್ಯವಹಾರಗಳನ್ನು ನೀಡುವ ಜೊತೆಗೆ ಹೆಚ್ಚು ಅಂಕಿ ಸಂಖ್ಯೆಗಳ ಡೇಟಾವನ್ನೂ ಸಂಗ್ರಹ ಮಾಡಬೇಕು ಎಂದು ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದರು.

ಇದೇ ವೇಳೆ ಜಿಲ್ಲಾ ಬ್ಯಾಂಕ್‌ವಾರು ಯಾವ ಯಾವ ಬ್ಯಾಂಕ್‌ಗಳು ಕೃಷಿಗೆ, ವಸತಿಗಳಿಗೆ, ಶಿಕ್ಷಣ, ವೈಯಕ್ತಿಕ ಲೋನ್‌ ಮತ್ತು ಇತರ ಲೋನ್‌ಗಳನ್ನು ನೀಡುವುದರ ಮೂಲಕ ಬ್ಯಾಂಕ್‌ಗಳು ಎಷ್ಟು ಗುರಿ ತಲುಪಿದೆ ಎಂಬುದನ್ನು ವಿವಿಧ ಜಿಲ್ಲಾ ಬ್ಯಾಂಕ್‌ಗಳ ಪ್ರಕಾರ ಮಾಹಿತಿ ಪಡೆದುಕೊಂಡಿದ್ದಾರೆ.

ಇನ್ನು ಶಿಕ್ಷಣ ಸಾಲಗಳ ಅಡಿಯಲ್ಲಿ ಕಾರ್ಯಕ್ಷಮತೆಯ ಬಗ್ಗೆ, ಜನ ಸುರಕ್ಷಾ ಯೋಜನೆಗಳ ಅಡಿಯಲ್ಲಿ ಪ್ರಗತಿ ಪರಿಶೀಲನೆ ನಡೆಸುವುದರ ಕುರಿತು ಜಿಲ್ಲೆಗಾಗಿ ಸಂಭಾವ್ಯ ಲಿಂಕ್ಡ್ ಯೋಜನೆ ಹಾಗೂ ಹಣಕಾಸು ಸೇರ್ಪಡೆ ಯೋಜನೆಯನ್ನು ಆರಂಭಿಸುವುದರ ಕುರಿತು ಸಭೆಯಲ್ಲಿ ಸಮಾಲೋಚನೆ ಮಾಡಲಾಗಿದೆ.

ಅರ್ಚನ ಎಸ್‌ ಎಸ್

Recent Posts

ಇರಾನ್‌ ಮೇಲೆ ಅಮೇರಿಕಾ ಭೀಕರ ದಾಳಿ: ಟಾಪ್‌ ಕಮಾಂಡರ್‌ಗಳ ಹತ್ಯೆ

ಟೆಹರಾನ್:‌ ಟೆಹರಾನ್‌ ಮೇಲೆ ಅಮೇರಿಕಾ ನಡೆಸಿದ ಬೃಹತ್‌ ದಾಳಿಯಲ್ಲಿ ಇರಾನಿನ ಮಿಲಿಟರಿ ಪಡೆಯ ಉನ್ನತ ಕಮಾಂಡರ್‌ಗಳನ್ನು ಹತ್ಯೆ ಮಾಡಲಾಗಿದೆ. ಈ…

23 mins ago

ಮಡಿಕೇರಿ: ಶರಣ್ಯಾಳಿಗಾಗಿ ಇಂದು ಕೂಡ ತೀವ್ರಗೊಂಡ ಶೋಧ ಕಾರ್ಯಾಚರಣೆ

ಮಡಿಕೇರಿ: ತಡಿಯಂಡಮೋಳ್‌ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯಾ ನಾಪತ್ತೆಯಾಗಿ ಮೂರು ದಿನಗಳು ಕಳೆದರೂ ಈವರೆಗೂ…

36 mins ago

ಓದುಗರ ಪತ್ರ: ರೈಲು ಟಿಕೆಟ್ ರದ್ದತಿ ಹೊಸ ನಿಯಮದ ಬಗ್ಗೆ ಅರಿವಿರಲಿ

ಭಾರತೀಯ ರೈಲ್ವೆ ಇಲಾಖೆಯು ಕಾಯ್ದಿರಿಸುವ ಮುಂಗಡ ಟಿಕೆಟ್ ರದ್ದತಿಯ ಬಗ್ಗೆ ಹೊಸ ನಿಯಮವನ್ನು ಏಪ್ರಿಲ್ ೧ರಿಂದ ಜಾರಿಗೆ ತಂದಿದೆ. ಪ್ರಯಾಣಿಸುವ…

1 hour ago

ಓದುಗರ ಪತ್ರ: ಅಂಚೆ ಕಚೇರಿಯಲ್ಲಿ ಹೆಚ್ಚುವರಿ ಕೌಂಟರ್ ತೆರೆಯಿರಿ

ಮೈಸೂರು ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಕೌಂಟರ್‌ಗಳ ಸಂಖ್ಯೆ ಕಡಿಮೆ ಇರುವುದರಿಂದ ನಿಧಾನಗತಿಯಲ್ಲಿ ಕೆಲಸ ಸಾಗುತ್ತಿದೆ. ಹಿರಿಯ…

1 hour ago

ಓದುಗರ ಪತ್ರ: ಇರುವುದರಲ್ಲೇ ತೃಪ್ತಿ ಕಾಣಬೇಕು

ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೇ ಜೀವನ! ಜನಪ್ರಿಯ ಕವಿ ಗೋಪಾಲಕೃಷ್ಣ ಅಡಿಗರ ಕವನದ ಈ ಸಾಲು ಇಂದಿನ ಕಾಲಮಾನದ ಜನಮಾನಸಕ್ಕೆ…

1 hour ago

ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್

ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…

4 hours ago