ಮೈಸೂರು: ಗ್ರಾಮೀಣ ಪ್ರದೇಶಗಳಲ್ಲಿ ಬ್ಯಾಂಕ್ ಬ್ಯಾಂಕ್ ವ್ಯವಹಾರಗಳ ಕುರಿತು ಹೆಚ್ಚು ಜಾಗೃತಿ ಮೂಡಿಸಿ ಸೈಬರ್ ಕ್ರೈಂ ನಂತಹ ಕೃತ್ಯಗಳ ಬಗ್ಗೆ ಪ್ರತಿಯೊಂದು ಬ್ಯಾಂಕ್ಗಳು ಗಮನ ಹರಿಸಬೇಕು ಎಂದು ಅಧಿಕಾರಿಗಳಿಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು(ಫೆಬ್ರವರಿ.21) ಡಿಸಿಸಿ ಮತ್ತು ಡಿಎಲ್ಆರ್ಸಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರತಿಯೊಂದು ಬ್ಯಾಂಕ್ಗಳು ಪ್ರತಿ ಕೇಂದ್ರಗಳಲ್ಲೂ ಕ್ಯಾಂಪೇನ್ಗಳನ್ನು ನಡೆಸಬೇಕು. ನೂತನ ಯೋಜನೆಗಳ ಮೂಲಕ ಸಾರ್ವಜನಿಕ ಕನಸುಗಳಿಗೆ ಜೀವವನ್ನು ತುಂಬಬೇಕು. ಅಲ್ಲದೇ ಅಧಿಕ ಸಮಯವನ್ನು ಬ್ಯಾಂಕ್ ವ್ಯವಹಾರಗಳನ್ನು ನೀಡುವ ಜೊತೆಗೆ ಹೆಚ್ಚು ಅಂಕಿ ಸಂಖ್ಯೆಗಳ ಡೇಟಾವನ್ನೂ ಸಂಗ್ರಹ ಮಾಡಬೇಕು ಎಂದು ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದರು.
ಇದೇ ವೇಳೆ ಜಿಲ್ಲಾ ಬ್ಯಾಂಕ್ವಾರು ಯಾವ ಯಾವ ಬ್ಯಾಂಕ್ಗಳು ಕೃಷಿಗೆ, ವಸತಿಗಳಿಗೆ, ಶಿಕ್ಷಣ, ವೈಯಕ್ತಿಕ ಲೋನ್ ಮತ್ತು ಇತರ ಲೋನ್ಗಳನ್ನು ನೀಡುವುದರ ಮೂಲಕ ಬ್ಯಾಂಕ್ಗಳು ಎಷ್ಟು ಗುರಿ ತಲುಪಿದೆ ಎಂಬುದನ್ನು ವಿವಿಧ ಜಿಲ್ಲಾ ಬ್ಯಾಂಕ್ಗಳ ಪ್ರಕಾರ ಮಾಹಿತಿ ಪಡೆದುಕೊಂಡಿದ್ದಾರೆ.
ಇನ್ನು ಶಿಕ್ಷಣ ಸಾಲಗಳ ಅಡಿಯಲ್ಲಿ ಕಾರ್ಯಕ್ಷಮತೆಯ ಬಗ್ಗೆ, ಜನ ಸುರಕ್ಷಾ ಯೋಜನೆಗಳ ಅಡಿಯಲ್ಲಿ ಪ್ರಗತಿ ಪರಿಶೀಲನೆ ನಡೆಸುವುದರ ಕುರಿತು ಜಿಲ್ಲೆಗಾಗಿ ಸಂಭಾವ್ಯ ಲಿಂಕ್ಡ್ ಯೋಜನೆ ಹಾಗೂ ಹಣಕಾಸು ಸೇರ್ಪಡೆ ಯೋಜನೆಯನ್ನು ಆರಂಭಿಸುವುದರ ಕುರಿತು ಸಭೆಯಲ್ಲಿ ಸಮಾಲೋಚನೆ ಮಾಡಲಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…