ಮೈಸೂರು

ಸೈಬರ್‌ ಕ್ರೈಂ ಕೃತ್ಯಗಳ ಬಗ್ಗೆ ಪ್ರತಿಯೊಂದು ಬ್ಯಾಂಕ್‌ಗಳು ಗಮನ ಹರಿಸಬೇಕು: ಸಂಸದ ಯದುವೀರ್‌

ಮೈಸೂರು: ಗ್ರಾಮೀಣ ಪ್ರದೇಶಗಳಲ್ಲಿ ಬ್ಯಾಂಕ್‌ ಬ್ಯಾಂಕ್ ವ್ಯವಹಾರಗಳ ಕುರಿತು ಹೆಚ್ಚು ಜಾಗೃತಿ ಮೂಡಿಸಿ ಸೈಬರ್ ಕ್ರೈಂ ನಂತಹ ಕೃತ್ಯಗಳ ಬಗ್ಗೆ ಪ್ರತಿಯೊಂದು ಬ್ಯಾಂಕ್‌ಗಳು ಗಮನ ಹರಿಸಬೇಕು ಎಂದು ಅಧಿಕಾರಿಗಳಿಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ.

ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಇಂದು(ಫೆಬ್ರವರಿ.21) ಡಿಸಿಸಿ ಮತ್ತು ಡಿಎಲ್‌ಆರ್‌ಸಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರತಿಯೊಂದು ಬ್ಯಾಂಕ್‌ಗಳು ಪ್ರತಿ ಕೇಂದ್ರಗಳಲ್ಲೂ ಕ್ಯಾಂಪೇನ್‌ಗಳನ್ನು ನಡೆಸಬೇಕು. ನೂತನ ಯೋಜನೆಗಳ ಮೂಲಕ ಸಾರ್ವಜನಿಕ ಕನಸುಗಳಿಗೆ ಜೀವವನ್ನು ತುಂಬಬೇಕು. ಅಲ್ಲದೇ ಅಧಿಕ ಸಮಯವನ್ನು ಬ್ಯಾಂಕ್‌ ವ್ಯವಹಾರಗಳನ್ನು ನೀಡುವ ಜೊತೆಗೆ ಹೆಚ್ಚು ಅಂಕಿ ಸಂಖ್ಯೆಗಳ ಡೇಟಾವನ್ನೂ ಸಂಗ್ರಹ ಮಾಡಬೇಕು ಎಂದು ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದರು.

ಇದೇ ವೇಳೆ ಜಿಲ್ಲಾ ಬ್ಯಾಂಕ್‌ವಾರು ಯಾವ ಯಾವ ಬ್ಯಾಂಕ್‌ಗಳು ಕೃಷಿಗೆ, ವಸತಿಗಳಿಗೆ, ಶಿಕ್ಷಣ, ವೈಯಕ್ತಿಕ ಲೋನ್‌ ಮತ್ತು ಇತರ ಲೋನ್‌ಗಳನ್ನು ನೀಡುವುದರ ಮೂಲಕ ಬ್ಯಾಂಕ್‌ಗಳು ಎಷ್ಟು ಗುರಿ ತಲುಪಿದೆ ಎಂಬುದನ್ನು ವಿವಿಧ ಜಿಲ್ಲಾ ಬ್ಯಾಂಕ್‌ಗಳ ಪ್ರಕಾರ ಮಾಹಿತಿ ಪಡೆದುಕೊಂಡಿದ್ದಾರೆ.

ಇನ್ನು ಶಿಕ್ಷಣ ಸಾಲಗಳ ಅಡಿಯಲ್ಲಿ ಕಾರ್ಯಕ್ಷಮತೆಯ ಬಗ್ಗೆ, ಜನ ಸುರಕ್ಷಾ ಯೋಜನೆಗಳ ಅಡಿಯಲ್ಲಿ ಪ್ರಗತಿ ಪರಿಶೀಲನೆ ನಡೆಸುವುದರ ಕುರಿತು ಜಿಲ್ಲೆಗಾಗಿ ಸಂಭಾವ್ಯ ಲಿಂಕ್ಡ್ ಯೋಜನೆ ಹಾಗೂ ಹಣಕಾಸು ಸೇರ್ಪಡೆ ಯೋಜನೆಯನ್ನು ಆರಂಭಿಸುವುದರ ಕುರಿತು ಸಭೆಯಲ್ಲಿ ಸಮಾಲೋಚನೆ ಮಾಡಲಾಗಿದೆ.

ಅರ್ಚನ ಎಸ್‌ ಎಸ್

Recent Posts

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

17 seconds ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

6 mins ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

12 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

21 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

21 hours ago