ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡನೆ ಮಾಡಿರುವ ಬಜೆಟ್ ಬಗ್ಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯ ಸರ್ಕಾರ ಕರ್ನಾಟಕವನ್ನು ಸಾಲದ ಸುಳಿಯಲ್ಲಿ ಸಿಲುಕಿಸಿದೆ. ಈ ಬಾರಿಯ ಬಜೆಟ್ನಲ್ಲಿ ಸುಮಾರು 19,262 ಕೋಟಿ ರೂ. ಆದಾಯದ ಕೊರತೆಯಿದೆ. ಅಲ್ಲದೇ 7.64 ಲಕ್ಷ ಕೋಟಿ ರೂ. ಒಟ್ಟು ಆರ್ಥಿಕ ಹೊಣೆಗಾರಿಕೆಗೆ ತಂದಿದೆ. ಹೀಗಾಗಿ ಜಿಎಸ್ಡಿಪಿ ಶೇ.24.91% ಆಗಿದೆ. ಆದರೆ ಎಫ್ಆರ್ಬಿಎಂ ಕಾಯ್ದೆಯ ಪ್ರಕಾರ ಶೇ.25% ರಷ್ಟು ಮಿತಿಯನ್ನು ಶೀಘ್ರದಲ್ಲೇ ಉಲ್ಲಂಘಿಸಲಿದೆ ಎಂದು ಆರೋಪಿಸಿದ್ದಾರೆ.
ಸಾಲ ಮರುಪಾವತಿಯನ್ನು ಬಜೆಟ್ ಹಂಚಿಕೆ ವಿಚಾರದಲ್ಲಿ 24,974 ಕೋಟಿ ರೂ.ಗಳಿಂದ 26,474 ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿದೆ. ಇದು ರಾಜ್ಯ ಸಾಲದ ಚಕ್ರದಲ್ಲಿ ಸಿಲುಕಿರುವುದಕ್ಕೆ ಸಾಕ್ಷಿಯಾಗಿದೆ. ಇನ್ನು ಗ್ಯಾರಂಟಿ ಯೋಜನೆಗಳ ಹೊರತಾಗಿ, ಸಮಾಜದ ಕೆಲವು ವರ್ಗಗಳನ್ನು ಸಮಾಧಾನಪಡಿಸುವ ಪ್ರಯತ್ನದಲ್ಲಿ ಕಾಂಗ್ರೆಸ್ ಸರ್ಕಾರವು ರಾಜ್ಯ ಹಾಗೂ ಅದರ ಹಣಕಾಸಿನ ಮೇಲೆ ಹೊರೆಯಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…
ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…
ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…
ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…