ಮೈಸೂರು

ಪಕ್ಷದ ರಾಜ್ಯಾಧ್ಯಕ್ಷರಾಗಿ ಯಶಸ್ವಿ ಕಾರ್ಯಗಳನ್ನು ನಿಭಾಯಿಸಿದ್ದಾರೆ: ವಿಜಯೇಂದ್ರ ಪರ ಬ್ಯಾಟ್‌ ಬೀಸಿದ ಸಂಸದ ಯದುವೀರ್‌

ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರು ಪಕ್ಷದಲ್ಲಿ ಕಾರ್ಯಗಳನ್ನು ನಿಭಾಯಿಸಿದ್ದಾರೆ ಎಂದು ಅವರ ಪರ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಬೀಸಿದ್ದಾರೆ.

ಮೈಸೂರಿನಲ್ಲಿ ಇಂದು(ಜನವರಿ.31) ಬಿಜೆಪಿ ರಾಜ್ಯಾಧ್ಯಾಕ್ಷರ ಬದಲಾವಣೆ ವಿಚಾರದ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬಣ ರಾಜಕೀಯದಿಂದಾಗಿ ಪಕ್ಷಕ್ಕೆ ಹಿನ್ನೆಡೆಯಾಗುತ್ತಿದೆ. ಆದರೆ ವಿಜಯೇಂದ್ರರವರು ರಾಜ್ಯಾಧ್ಯಕ್ಷರಾಗಿ ಸಾಕಷ್ಟು ಕೆಲಸ ಮಾಡುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲೂ ಸಹ ಪಕ್ಷವನ್ನು ಗೆಲ್ಲಿಸಿದ್ದಾರೆ. ಅಲ್ಲದೇ ಅವರನ್ನೇ ಪಕ್ಷದ ಕೆಲ ನಾಯಕರು ವಿರೋಧಿಸುತ್ತಿದ್ದಾರೆ. ಈ ಎಲ್ಲವನ್ನೂ ಹೈಕಮಾಂಡ್‌ ಗಮನಿಸುತ್ತಿದ್ದು, ಮುಂದಿನ ದಿನಗಳಲ್ಲಿ ವರಿಷ್ಠರು ಸರಿ ಮಾಡುವ ಭರವಸೆ ಇದೆ ಎಂದು ಹೇಳಿದರು.

ಇದೇ ವೇಳೆ ಬೆಂಗಳೂರು ಅರಮನೆ ಆಸ್ತಿ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ ವಿಚಾರದ ಬಗ್ಗೆ ಮಾತನಾಡಿದ ಅವರು, ಈ ಪ್ರಕರಣ ಸುಪ್ರೀಂಕೋರ್ಟ್‌ನಲ್ಲಿದೆ. ಆದರೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಆಸ್ತಿ ನಿಯಂತ್ರಣಕ್ಕೆ ಮುಂದಾಗಿದೆ. ಹೀಗಾಗಿ ನಾವು ಕಾನೂನು ಮೂಲಕವೇ ಹೋರಾಟ ಮಾಡುತ್ತೇವೆ ಎಂದರು.

ಇನ್ನೂ ಮಹಾರಾಣಿ ಕಾಲೇಜು ಕುಸಿತ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ನಾವು ಮೊದಲಿನಿಂದಲೂ ನಾವು ಪಾರಂಪರಿಕ ಕಟ್ಟಡ ಸಂರಕ್ಷಣೆ ಮಾಡಿ ಎಂದು ಸರ್ಕಾರಕ್ಕೆ ಹೇಳಿದ್ದೇವು. ಈ ಕಾಲೇಜು ಕಟ್ಟಡವನ್ನು 15 ವರ್ಷಗಳ ಹಿಂದೆಯೇ ದುರಸ್ತಿ ಕಾರ್ಯ ಮಾಡಿದ್ದರೆ ಈ ರೀತಿ ಆಗುತ್ತಿರಲಿಲ್ಲ. ಆದರೆ ಇದೀಗ ಕಟ್ಟಡ ಕುಸಿದಾಗ ಒಡೆಯುವ ತೀರ್ಮಾನ ಒಳ್ಳೆಯದಲ್ಲ. ಅಲ್ಲದೇ ಈಗಾಗಲೇ ಲ್ಯಾಂಡ್‌ ಸ್ಟೋನ್‌ ಬಿಲ್ಡಿಂಗ್, ದೇವರಾಜ ಮಾರುಕಟ್ಟೆ ಎಲ್ಲವನ್ನೂ ದುರಸ್ತಿ ಮಾಡಿ ರಿನೋವೇಶನ್ ಮಾಡಬೇಕಿದೆ. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಅವು ಕೂಡ ಕುಸಿಯುತ್ತವೆ. ಸರ್ಕಾರ ಇನ್ನಾದರೂ ಪಾರಂಪರಿಕ ಕಟ್ಟಡಗಳ ರಕ್ಷಣೆಗೆ ಮುಂದಾಗಲಿ ಎಂದು ತಿಳಿಸಿದರು.

ಬನ್ನಿಮಂಟಪದ ಎಲ್‌ಐಸಿ ವೃತ್ತಕ್ಕೆ ಅರ್ಜುನನ ಹೆಸರು

ಬನ್ನಿಮಂಟಪದ ಎಲ್‌ಐಸಿ ವೃತ್ತಕ್ಕೆ ಅರ್ಜುನನ ಹೆಸರಿಡುವಂತೆ ಮೈಸೂರು ಮಹಾನಗರ ಪಾಲಿಕೆಗೆ ಪತ್ರ ಬರೆದಿದ್ದೇನೆ. ಜೊತೆಗೆ ಆ ಸ್ಥಳದಲ್ಲಿ ಅರ್ಜುನನ ಪ್ರತಿಮೆಯನ್ನು ಪ್ರತಿಷ್ಠಾಪಿಸಬೇಕು ಅನ್ನೋದೇ ನಮ್ಮ ಆಸೆಯಾಗಿದೆ. ಹೀಗಾಗಿ ಪಾಲಿಕೆ ಮುಂದಿನ ದಿನಗಳಲ್ಲಿ ಆ ಎಲ್ಲಾ ಕೆಲಸಗಳನ್ನು ಮಾಡಬೇಕು ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

17 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

17 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

17 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

17 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

17 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

17 hours ago