ಮೈಸೂರು

ಅಧಿಕಾರಿಗಳಿಗೆ ಸಂಸದ ಯದುವೀರ್‌ ಕ್ಲಾಸ್‌

ಮೈಸೂರು : ಕೇಂದ್ರ ಸರ್ಕಾರದ ಯೋಜನೆಗಳ ಕುರಿತಾಗಿ ಮಾಹಿತಿ ಕೇಳಿದರೂ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅತೃಪ್ತಿ ವ್ಯಕ್ತಪಡಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ದಿಶಾ ಸಭೆಯಲ್ಲಿ ಹುಣಸೂರು ತಾಲ್ಲೂಕಿನ ಲಕ್ಷ್ಮಣತೀರ್ಥ ಸೇತುವೆ ಮತ್ತು ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಮಾರ್ಗದ ಕಾಮಗಾರಿ ಬಗ್ಗೆ ಪ್ರಶ್ನಿಸಿದಾಗ ಅಧಿಕಾರಿ ವಿವರಣೆ ನೀಡಲು ಮುಂದಾದರು. ಈ ವೇಳೆ ನಾನು ಅನೇಕ ಬಾರಿ ಮಾಹಿತಿ ಕೇಳಿದರೂ ಕೊಡುತ್ತಿಲ್ಲ. ಕಾಮಗಾರಿ ಬಗ್ಗೆ ಚರ್ಚೆಯನ್ನೇ ಮಾಡಿಲ್ಲ. ಪ್ರವಾಸೋದ್ಯಮ ಇಲಾಖೆಯಿಂದ ಕೈಗೆತ್ತಿಕೊಂಡಿ ರುವ ಯೋಜನೆಗಳ ಬಗ್ಗೆ ಮಾಹಿತಿ ನೀಡಿಲ್ಲ. ಕೆರೆಗಳ ಅಭಿವೃದ್ಧಿ ಮತ್ತು ಉದ್ಯಾನವನ ಅಭಿವೃದ್ಧಿ ಬಗ್ಗೆ ಡಿಪಿಆರ್ ತಯಾರಿಸುವ ಮುನ್ನ ಸಮಾಲೋಚನೆ ಮಾಡಿಲ್ಲ ಎಂದು ಅಸಮಾಧಾನ ಹೊರ ಹಾಕಿದರು.

ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸುವ ಮುನ್ನ ನೀವು ಒಂದು ಬಾರಿ ಚರ್ಚೆ ನಡೆಸಬೇಕು. ನಮಗೆ ಮಾಹಿತಿ ಇದ್ದರೆ ಸಂಬಂಧಪಟ್ಟ ಕೇಂದ್ರ ಸಚಿವರನ್ನು ಸಂಪರ್ಕಿಸಿ ಒತ್ತಡ ತರಬಹುದು ಎಂದು ಅಧಿಕಾರಿಗಳಿಗೆ ಚುರುಕು ಮುಟ್ಟಿಸಿದರು.

ಈ ವೇಳೆ ಶಾಸಕ ಟಿ.ಎಸ್.ಶ್ರೀವತ್ಸ ಅವರು, ಸಂಸದರು ಮೃದುವಾಗಿದ್ದಾರೆ ಅಂತಲೋ ಅಥವಾ ಬೇರೆ ಕಾರಣಕ್ಕಾಗಿ ನೀವು ಹೀಗೆ ಮಾಡುತ್ತಿದ್ದೀರಾ? ನಿಮಗೆ ಎಷ್ಟು ಬಾರಿ ಕೇಳಬೇಕು ಎಂದು ಪ್ರಶ್ನಿಸಿದರು. ಈ ವೇಳೆ ಶಾಸಕ ಜಿ.ಡಿ.ಹರೀಶ್‌ಗೌಡ ಅವರು, ಸಂಸದರು ಮತ್ತು ನನ್ನೊಂದಿಗೆ ಚರ್ಚೆಯನ್ನೇ ಮಾಡಿಲ್ಲ. ಯುಜಿಡಿ ಸಮಸ್ಯೆ ಇದೆ. ಒಂದು ಕಡೆಯಿಂದ ಮತ್ತೊಂದು ಮಾರ್ಗಕ್ಕೆ ಹೋಗುವುದನ್ನು ತಪ್ಪಿಸಬೇಕಿದೆ. ನಮಗೆ ಬರುತ್ತಿರುವ ದೂರುಗಳಿಗೆ ಸ್ಪಂದಿಸುವ ಕೆಲಸವಾಗಬೇಕು ಎಂದು ಒತ್ತಾಯಿಸಿದರು.

ಪ್ರವಾಸೋದ್ಯಮ ಇಲಾಖೆಯಿಂದ ನಡೆಯುತ್ತಿರುವ ಸ್ವದೇಶಿ ದರ್ಶನ್ ಮತ್ತು ಚಾಮುಂಡಿಬೆಟ್ಟದ ಪ್ರಸಾದ್ ಯೋಜನೆಯ ಅನುಷ್ಠಾನದ ಸ್ಥಿತಿಗತಿಯ ಬಗ್ಗೆ ಇಲಾಖೆಯ ಅಽಕಾರಿಗಳು ಮಾಹಿತಿ ನೀಡದೇ ಇರುವುದಕ್ಕೆ ಸಂಸದ ಯದುವೀರ್, ಇಲಾಖೆಯ ಅಽಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಇದರೊಂದಿಗೆ ಗುಂಡ್ಲುಪೇಟೆಯಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಅಧಿಕಾರಿಗಳು ನನ್ನ ಗಮನಕ್ಕೆ ತಾರದೇ ಕೈಗೊಂಡಿದ್ದಾರೆ ಎಂದು ಸಂಸದ ಸುನಿಲ್ ಬೋಸ್ ಸಹ ಆಕ್ಷೇಪ ವ್ಯಕ್ತಪಡಿಸಿದರು.

ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಅವರು, ಕೇಂದ್ರ ಪುರಸ್ಕೃತ ಯೋಜನೆಗಳ ಬಗ್ಗೆ ಸಂಸದರಿಗೆ ಮಾಹಿತಿ ನೀಡಬೇಕು. ಯಾವುದೇ ಡಿಪಿಆರ್ ಅಂತಿಮವಾಗುವ ಮುನ್ನ ಒಮ್ಮೆ ಭೇಟಿ ಮಾಡಿ ಚರ್ಚಿಸಿ ಸಲಹೆ ಪಡೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಈ ಹಂತದಲ್ಲಿ ನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಅಸಿಫ್ ಮಾತನಾಡಿ, ಕೆರೆ ಅಭಿವೃದ್ಧಿ ಕ್ರಿಯಾ ಯೋಜನೆ ರೂಪಿಸಿರುವುದು ಹೊಸದಲ್ಲ. ಚುನಾವಣೆ ಮುನ್ನವೇ ಕೇಂದ್ರಕ್ಕೆ ಕಳುಹಿಸಲಾಗಿತ್ತು. ಈಗ ಮತ್ತೆ ಹೊಸದಾಗಿ ಕೆಲವು ಕೆರೆಗಳ ಪಟ್ಟಿಯನ್ನು ಮಾಡಲಾಗಿದ್ದು, ಶೀಘ್ರದಲ್ಲೇ ಪ್ರಸ್ತಾವನೆ ಕಳುಹಿಸಲಾಗುವುದು. ಅದೇ ರೀತಿ ಹಳೆಯ ಜಿಲ್ಲಾಧಿಕಾರಿ ಕಚೇರಿ ಕಟ್ಟಡವನ್ನು ಮ್ಯೂಸಿಯಂ ಮಾಡಲು ಡಿಪಿಆರ್ ಸಲ್ಲಿಸಲಾಗಿದೆ ಎಂದು ಸಭೆಯ ಗಮನಕ್ಕೆ ತಂದರು.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

8 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

12 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

16 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

18 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

19 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

20 hours ago