ಮೈಸೂರು

ನಮೋ ಭಾರತ್‌ ರೈಲು ಸಂಚಾರ: ಕೇಂದ್ರ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದ ಸಂಸದ ಯದುವೀರ್‌

ಮೈಸೂರು: ದೇಶದ ಪ್ರಮುಖ ನಗರಗಳ ನಡುವೆ 50 ನಮೋ ಭಾರತ್‌ ರೈಲುಗಳ ಸಂಚಾರಕ್ಕೆ ಸೌಲಭ್ಯ ಕಲ್ಪಿಸಿದ್ದು, ಕರ್ನಾಟಕ ರಾಜ್ಯಕ್ಕೂ 2 ರೈಲುಗಳನ್ನು ಕೊಡುಗೆ ನೀಡಿದ್ದಾರೆ. ಈ ಕಾರಣಕ್ಕೆ ಕನ್ನಡಿಗರ ಪರವಾಗಿ ಕೇಂದ್ರ ಸರ್ಕಾರಕ್ಕೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಧನ್ಯವಾದ ಅರ್ಪಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ನಮ್ಮ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಪ್ರಮುಖ ನಗರಗಳ ನಡುವೆ 50 ನಮೋ ಭಾರತ್ ರೈಲುಗಳು ಸಂಚಾರ ಸೌಲಭ್ಯ ಕಲ್ಪಿಸಿದ್ದಾರೆ. ಇದರಲ್ಲಿ ನಮ್ಮ ಕರ್ನಾಟಕಕ್ಕೂ 2 ರೈಲುಗಳ ಕೊಡುಗೆ ನೀಡಿದ್ದಾರೆ. ಈ ಎರಡು 2 ನಮೋ ಭಾರತ್ ರೈಲುಗಳು ಬೆಂಗಳೂರು-ಮೈಸೂರು ಮತ್ತು ಹುಬ್ಬಳ್ಳಿ-ದಾವಣಗೆರೆ ನಡುವೆ ಪ್ರಸಕ್ತ ವರ್ಷದಿಂದಲೇ ಸಂಚರಿಸಲಿವೆ ಎಂದು ಹೇಳಿದ್ದಾರೆ.

ಇನ್ನೂ ಕರ್ನಾಟಕಕ್ಕೆ ಈ ರೈಲು ಸೌಲಭ್ಯ ನೀಡಿದ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಜಿ ಮತ್ತು ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರಿಗೆ ಕನ್ನಡಿಗರ ಪರವಾಗಿ ತುಂಬು ಹೃದಯದ ಧನ್ಯವಾದ ಅರ್ಪಿಸುತ್ತೇನೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮಕ್ಕಳ ಕಲಿಕಾ ಮಟ್ಟ ಸುಧಾರಣೆಗೆ ಓದು ಕರ್ನಾಟಕ ಕಾರ್ಯಕ್ರಮ

ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳಲ್ಲಿ ಕಲಿಕೆಯಲ್ಲಿ ಹಿಂದುಳಿದಿರುವ ಸರ್ಕಾರಿ ಶಾಲಾ ಮಕ್ಕಳಿಗೆ ತರಬೇತಿ ಕೆ.ಆರ್.ನಗರ: ಕಲಿಕೆಯಲ್ಲಿ ಹಿಂದೆ ಬಿದ್ದಿರುವ ಸರ್ಕಾರಿ…

2 mins ago

ಕೂಸು ಹುಟ್ಟುವ ಮುಂಚೆ ಕುಲಾವಿ ಹೊಲಿಸಿದ ಪಾಲಿಕೆ!!

ದಿನೇಶ್‌ಕುಮಾರ್ ಹೆಚ್.ಎಸ್. ಉದ್ಯಾನ ನಿರ್ಮಾಣಕ್ಕೂ ಮುನ್ನ ವ್ಯಾಯಾಮ ಪರಿಕರ ಅಳವಡಿಸಿದ ನಗರಪಾಲಿಕೆಯ ಅಧಿಕಾರಿಗಳು ಮೈಸೂರು: ಕೂಸು ಹುಟ್ಟುವ ಮುಂಚೆ ಕುಲಾವಿ…

6 mins ago

ಬೃಹತ್ ಮಹಾನಗರ ಪಾಲಿಕೆ ಬಜೆಟ್; ಹತ್ತಾರು ನಿರೀಕ್ಷೆ

ಕೆ.ಬಿ.ರಮೇಶನಾಯಕ ಈ ಬಾರಿಯೂ ಆಡಳಿತಾಧಿಕಾರಿಯಿಂದಲೇ ಬಜೆಟ್ ಮಂಡನೆ ಯಾವುದೇ ಕ್ಷಣದಲ್ಲಿ ಸರ್ಕಾರದಿಂದ ಅಧಿಕೃತ ಅಧಿಸೂಚನೆ ಜಾರಿ ಮೈಸೂರು: ರಾಜ್ಯ ಸರ್ಕಾರ…

10 mins ago

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

12 hours ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

13 hours ago