ಮೈಸೂರು: ದೇಶದ ಪ್ರಮುಖ ನಗರಗಳ ನಡುವೆ 50 ನಮೋ ಭಾರತ್ ರೈಲುಗಳ ಸಂಚಾರಕ್ಕೆ ಸೌಲಭ್ಯ ಕಲ್ಪಿಸಿದ್ದು, ಕರ್ನಾಟಕ ರಾಜ್ಯಕ್ಕೂ 2 ರೈಲುಗಳನ್ನು ಕೊಡುಗೆ ನೀಡಿದ್ದಾರೆ. ಈ ಕಾರಣಕ್ಕೆ ಕನ್ನಡಿಗರ ಪರವಾಗಿ ಕೇಂದ್ರ ಸರ್ಕಾರಕ್ಕೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಧನ್ಯವಾದ ಅರ್ಪಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ನಮ್ಮ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಪ್ರಮುಖ ನಗರಗಳ ನಡುವೆ 50 ನಮೋ ಭಾರತ್ ರೈಲುಗಳು ಸಂಚಾರ ಸೌಲಭ್ಯ ಕಲ್ಪಿಸಿದ್ದಾರೆ. ಇದರಲ್ಲಿ ನಮ್ಮ ಕರ್ನಾಟಕಕ್ಕೂ 2 ರೈಲುಗಳ ಕೊಡುಗೆ ನೀಡಿದ್ದಾರೆ. ಈ ಎರಡು 2 ನಮೋ ಭಾರತ್ ರೈಲುಗಳು ಬೆಂಗಳೂರು-ಮೈಸೂರು ಮತ್ತು ಹುಬ್ಬಳ್ಳಿ-ದಾವಣಗೆರೆ ನಡುವೆ ಪ್ರಸಕ್ತ ವರ್ಷದಿಂದಲೇ ಸಂಚರಿಸಲಿವೆ ಎಂದು ಹೇಳಿದ್ದಾರೆ.
ಇನ್ನೂ ಕರ್ನಾಟಕಕ್ಕೆ ಈ ರೈಲು ಸೌಲಭ್ಯ ನೀಡಿದ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಜಿ ಮತ್ತು ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರಿಗೆ ಕನ್ನಡಿಗರ ಪರವಾಗಿ ತುಂಬು ಹೃದಯದ ಧನ್ಯವಾದ ಅರ್ಪಿಸುತ್ತೇನೆ ಎಂದು ತಿಳಿಸಿದ್ದಾರೆ.
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…