ಮೈಸೂರು

ನಮೋ ಭಾರತ್‌ ರೈಲು ಸಂಚಾರ: ಕೇಂದ್ರ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದ ಸಂಸದ ಯದುವೀರ್‌

ಮೈಸೂರು: ದೇಶದ ಪ್ರಮುಖ ನಗರಗಳ ನಡುವೆ 50 ನಮೋ ಭಾರತ್‌ ರೈಲುಗಳ ಸಂಚಾರಕ್ಕೆ ಸೌಲಭ್ಯ ಕಲ್ಪಿಸಿದ್ದು, ಕರ್ನಾಟಕ ರಾಜ್ಯಕ್ಕೂ 2 ರೈಲುಗಳನ್ನು ಕೊಡುಗೆ ನೀಡಿದ್ದಾರೆ. ಈ ಕಾರಣಕ್ಕೆ ಕನ್ನಡಿಗರ ಪರವಾಗಿ ಕೇಂದ್ರ ಸರ್ಕಾರಕ್ಕೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಧನ್ಯವಾದ ಅರ್ಪಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ನಮ್ಮ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಪ್ರಮುಖ ನಗರಗಳ ನಡುವೆ 50 ನಮೋ ಭಾರತ್ ರೈಲುಗಳು ಸಂಚಾರ ಸೌಲಭ್ಯ ಕಲ್ಪಿಸಿದ್ದಾರೆ. ಇದರಲ್ಲಿ ನಮ್ಮ ಕರ್ನಾಟಕಕ್ಕೂ 2 ರೈಲುಗಳ ಕೊಡುಗೆ ನೀಡಿದ್ದಾರೆ. ಈ ಎರಡು 2 ನಮೋ ಭಾರತ್ ರೈಲುಗಳು ಬೆಂಗಳೂರು-ಮೈಸೂರು ಮತ್ತು ಹುಬ್ಬಳ್ಳಿ-ದಾವಣಗೆರೆ ನಡುವೆ ಪ್ರಸಕ್ತ ವರ್ಷದಿಂದಲೇ ಸಂಚರಿಸಲಿವೆ ಎಂದು ಹೇಳಿದ್ದಾರೆ.

ಇನ್ನೂ ಕರ್ನಾಟಕಕ್ಕೆ ಈ ರೈಲು ಸೌಲಭ್ಯ ನೀಡಿದ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಜಿ ಮತ್ತು ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರಿಗೆ ಕನ್ನಡಿಗರ ಪರವಾಗಿ ತುಂಬು ಹೃದಯದ ಧನ್ಯವಾದ ಅರ್ಪಿಸುತ್ತೇನೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

2 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

2 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

2 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

2 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

2 hours ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

2 hours ago