ಮೈಸೂರು

ಸಾಹಿತಿ ಭೈರಪ್ಪಗೆ ʼಕರ್ನಾಟಕ ರತ್ನʼ ಪ್ರಶಸ್ತಿ ನೀಡಲು ಒತ್ತಾಯಿಸಿ ಸಿಎಂ ಪತ್ರ ಬರೆದ ಸಂಸದ ಯದುವೀರ್‌

ಬೆಂಗಳೂರು : ಆನಾರೋಗ್ಯದ ಹಿನ್ನಲೆಯಲ್ಲಿ ಇತ್ತೀಚಿಗೆ ನಿಧನರಾದ ಖ್ಯಾತಿ ಕಾದಂಬರಿಕಾರ ಹಾಗೂ ಪ್ರತಿಷ್ಥಿತ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಎಸ್.ಎಲ್ ಭೈರಪ್ಪ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂದು ಮೈಸೂರು ಕ್ಷೇತ್ರದ ಸಂಸದ, ರಾಜವಂಶಸ್ಥ ಯದುವೀರ್ ಒಡೆಯರ್ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಂಸದ ಯದುವೀರ್ ಒಡೆಯರ್, ಕನ್ನಡದ ಜನಮನ್ನಣೆಯ ಮೇರು ಸಾಹಿತಿ, ಮಹಾನ್ ಕಾದಂಬರಿಕಾರರು ಹಾಗೂ ಸರಸ್ವತಿ ಸಮ್ಮಾನ್, ಪದ್ಮಭೂಷಣ ಡಾ. ಎಸ್. ಎಲ್. ಭೈರಪ್ಪ ಅವರ ಅಗಿಲಿಕೆಯು ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ.

ಅವರನ್ನು ಗೌರವಿಸಲು, ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡುವಂತೆ ಮತ್ತು ಮೈಸೂರು ನಗರ ಕೇಂದ್ರ ಗ್ರಂಥಾಲಯವನ್ನು ಅವರ ಸ್ಮರಣಾರ್ಥ ಮರುನಾಮಕರಣ ಮಾಡಬೇಕೆಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ ಎಂದು ತಿಳಿಸಿದ್ದಾರೆ.

ಇದನ್ನು ಓದಿ  : ಮನ್‌ ಕಿ ಬಾತ್‌ನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪಗೆ ಪ್ರಧಾನಿ ಮೋದಿ ನಮನ

ಇತ್ತೀಚಿಗಷ್ಟೇ ರಾಜ್ಯ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿಯನ್ನು ಖ್ಯಾತ ನಟ ಡಾ. ವಿಷ್ಣುರ್ವಧನ್ ಹಾಗೂ ಚಿತ್ರನಟಿ ಬಿ ಸರೋಜದೇವಿ ಅವರಿಗೆ ಮರಣೋತ್ತರವಾಗಿ ಈ ಪ್ರಶಸ್ತಿಯನ್ನು ಘೋಷಣೆ ಮಾಡಿತ್ತು. ಕರ್ನಾಟಕ ರತ್ನ ಪ್ರಶಸ್ತಿಯು ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾಗಿದೆ. ಕರ್ನಾಟಕ ರತ್ನ ಪ್ರಶಸ್ತಿಯನ್ನು ಪಡೆಯುವವರಿಗೆ 50 ಗ್ರಾಂ ತೂಕದ ಚಿನ್ನದ ಪದಕ, ನೆನಪಿನ ಕಾಣಿಕೆ ನೀಡಿ, ಶಾಲನ್ನು ಹೊದಿಸಿ ಗೌರವಿಸಲಾಗುತ್ತದೆ.

ಕರ್ನಾಟಕ ರತ್ನ ಪ್ರಶಸ್ತಿಯನ್ನ ಈವರೆಗೆ ಒಂಬತ್ತು ಸಾಧಕರಿಗೆ ನೀಡಲಾಗಿದೆ. ಕರ್ನಾಟಕ ರತ್ನ ಪ್ರಶಸ್ತಿಯನ್ನು ಮೊದಲ ಬಾರಿಗೆ 1991 ರಲ್ಲಿ ಆರಂಭಿಸಲಾಯಿತು. ಈ ಪ್ರಶಸ್ತಿಯನ್ನು ಯಾವುದೇ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆಯನ್ನು ನೀಡಿದ ವ್ಯಕ್ತಿಗಳಿಗೆ ನೀಡಲಾಗುತ್ತದೆ. ಕರ್ನಾಟಕ ಪ್ರಶಸ್ತಿಯನ್ನು ಮೊದಲ ಬಾರಿಗೆ 1992 ರಲ್ಲಿ ನೀಡಲಾಯಿತು.

ಮೊದಲ ಕರ್ನಾಟಕ ರತ್ನ ಪ್ರಶಸ್ತಿಯನ್ನು ರಾಷ್ಟ್ರಕವಿ ಕುವೆಂಪು ಅವರಿಗೆ ನೀಡಿ ಗೌರವಿಸಲಾಯಿತು. ಅಲ್ಲಿಂದ ಇಲ್ಲಿಯವರೆಗೂ ಹತ್ತು ವ್ಯಕ್ತಿಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ. ಈ ಬಾರಿ ಅಂದರೆ 2021ರ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಚಿತ್ರನಟ ದಿ. ಪುನೀತ್ ರಾಜ್ಕುಮಾರ್ ಅವರಿಗೆ ಮರಣೋತ್ತರ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ.

ಕರ್ನಾಟಕ ರತ್ನ ಪ್ರಶಸ್ತಿ ಪುರಸ್ಕೃತರ ಪಟ್ಟಿ
ಕುವೆಂಪು – ಸಾಹಿತ್ಯ – 1992
ಡಾ. ರಾಜ್ಕುಮಾರ್ – ಚಲನಚಿತ್ರ – 1992
ಎಸ್.ನಿಜಲಿಂಗಪ್ಪ – ರಾಜಕೀಯ – 1999
ಸಿ.ಎನ್.ಆರ್.ರಾವ್ – ವಿಜ್ಞಾನ – 2000
ದೇವಿಪ್ರಸಾದ್ ಶೆಟ್ಟಿ – ವೈದ್ಯಕೀಯ – 2001
ಭೀಮಸೇನ ಜೋಷಿ – ಸಂಗೀತ – 2005
ಶ್ರೀ ಶಿವಕುಮಾರ ಸ್ವಾಮೀಗಳು – ಸಾಮಾಜಿಕ ಸೇವೆ – 2007
ದೇ. ಜವರೇಗೌಡ – ಸಾಹಿತ್ಯ -2008
ಡಿ. ವೀರೇಂದ್ರ ಹೆಗ್ಗಡೆ – ಸಾಮಾಜಿಕ ಸೇವೆ – 2009.
ದಿ. ಪುನೀತ್ ರಾಜ್ಕುಮಾರ್- ಸಿನಿಮಾ ಹಾಗೂ ಸಾಮಾಜಿಕ ಸೇವೆ -2021

ಆಂದೋಲನ ಡೆಸ್ಕ್

Recent Posts

ಹನೂರು| ಪಾದಯಾತ್ರೆ ಮಾಡುವ ವೇಳೆ ಚಿರತೆ ದಾಳಿ: ವ್ಯಕ್ತಿ ಸಾವು

ಮಹಾದೇಶ್‌ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

32 seconds ago

ತೆಂಗಿನ ಮರದಿಂದ ಬಿದ್ದು ನರಳಾಡಿದ ಯುವಕನನ್ನು ಕೆರೆಯಲ್ಲಿ ಮುಳುಗಿಸಿ ಕೊಂದ ಸ್ನೇಹಿತರು

ರಾಮನಗರ: ತೆಂಗಿನ ಮರ ಹತ್ತಿ ಕೆಳಗೆ ಬಿದ್ದ ಸ್ನೇಹಿತನನ್ನು ಕೆರೆಯಲ್ಲಿ ಮುಳುಗಿಸಿ ಹತ್ಯೆ ಮಾಡಿದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ…

23 mins ago

ಭಣಗುಡುತ್ತಿದ್ದ ರಾಮನಗುಡ್ಡ ಕೆರೆಗೆ ಜೀವಕಳೆ: 30 ವರ್ಷಗಳ ಬಳಿಕ ರೈತರ ಮೊಗದಲ್ಲಿ ಹರ್ಷ

ಮಹಾದೇಶ್‌ ಎಂ ಗೌಡ ಹನೂರು: ಮಳೆಯನ್ನೇ ಆಶ್ರಯಿಸಿ ಬೆಳೆಯಬೇಕಿದ್ದ ಸ್ಥಿತಿ, ಕುಸಿಯುತ್ತಿರುವ ಅಂತರ್ಜಲದಿಂದ ಪಡಿಪಟಾಲು ಪಡುತ್ತಿದ್ದ ರೈತರ ಕಷ್ಟ ಕೊನೆಗೂ…

56 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಎವ್ಗನ್ ಬಾವ್ಚಾರ್ ಎಂಬ ಕಣ್ಣಿಲ್ಲದ ಫೋಟೋಗ್ರಾಫರ್!

ಪಂಜು ಗಂಗೊಳ್ಳಿ  ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…

4 hours ago

ಓದುಗರ ಪತ್ರ: ಕಳ್ಳಸಾಗಣೆ ಕಪಿಮುಷ್ಟಿಯಲ್ಲಿ ದೇಶದ ಆರ್ಥಿಕತೆ

ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…

4 hours ago

ಓದುಗರ ಪತ್ರ: ದ್ವಿಚಕ್ರವಾಹನಗಳಿಗೆ ದರ್ಪಣ(ಕನ್ನಡಿ) ಕಡ್ಡಾಯವಾಗಲಿ

ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…

4 hours ago