ಮೈಸೂರು : ಮೈಸೂರು-ಕೊಡಗು ಲೋಕಸಭಾ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮೈಸೂರು ಪ್ರವಾಸೋದ್ಯಮ ಕುರಿತಂತೆ ಎರಡು ಪ್ರಸ್ತಾವನೆಗಳನ್ನು ಸಲ್ಲಿಸಿದ್ದಾರೆ.
ಬುಧವಾರ ನವದೆಹಲಿಯ ಅವರ ಕಚೇರಿಯಲ್ಲಿ ಭೇಟಿಯಾದ ಸಂಸದರು, ದಸರಾ ಆನೆ ಅರ್ಜುನ ಹೆಸರಿನ ಸ್ಮಾರಕ ಹಾಗೂ ಯೋಗ ವಸ್ತುಸಂಗ್ರಹಾಲಯ ಸಂಬಂಧ ಪ್ರಸ್ತಾವನೆ ಸಲ್ಲಿಸಿದ್ದಾರೆ.
2012 ರಿಂದ 2019 ರವರೆಗೆ ಚಿನ್ನದ ಅಂಬಾರಿಯನ್ನು ಹೊತ್ತು ಮೈಸೂರು ದಸರಾ ಮೆರವಣಿಗೆಯನ್ನು ಮುನ್ನಡೆಸಿದ ದಸರಾ ಆನೆ “ಅರ್ಜುನ” ಗೆ ಗೌರವ ಸಲ್ಲಿಸುವ ದೃಷ್ಠಿಯಿಂದ ಬನ್ನಿಮಂಟಪದ ಎಲ್ಐಸಿ ವೃತ್ತದ ಬಳಿ ದಸರಾ ಆನೆ ಅರ್ಜುನ ಸ್ಮಾರಕ, ಭವ್ಯ ಪ್ರತಿಮೆ, ಮೈಸೂರಿನ ದಸರಾ ಆನೆಗಳೊಂದಿಗಿನ ಬಾಂಧವ್ಯವನ್ನು ವಿವರಿಸುವ ಐತಿಹಾಸಿಕ ಫಲಕಗಳು, ಸೌರ ಬೆಳಕು, ಮಳೆನೀರು ಕೊಯ್ಲು ಮತ್ತು ಭೂದೃಶ್ಯ ಉದ್ಯಾನಗಳಂತಹ ಪರಿಸರ ಸ್ನೇಹಿ ವೈಶಿಷ್ಟ್ಯಗಳನ್ನು ಅನಾವರಣಗೊಳಿಸಲು ಮನವಿ ಮಾಡಿದ್ದಾರೆ.
ಮೈಸೂರಿನ ಹಳೆಯ ಜಿಲ್ಲಾಧಿಕಾರಿ ಕಚೇರಿಯನ್ನು ಯೋಗ ವಸ್ತುಸಂಗ್ರಹಾಲಯವನ್ನಾಗಿ ಪರಿವರ್ತಿಸಲು ಉದ್ದೇಶಿಸಲಾಗಿದ್ದು, ಇದು ಯೋಗ ಕ್ಷೇತ್ರದಲ್ಲಿ ಮೈಸೂರಿನ ಜಾಗತಿಕ ಕೊಡುಗೆಗಳನ್ನು ಗುರುತಿಸುದಂತಾಗುತ್ತದೆ. ಈ ಮೂಲಕ ಶ್ರೀ ಕೃಷ್ಣಮಾಚಾರ್ಯ, ಪಟ್ಟಾಭಿ ಜೋಯಿಸ್ ಮತ್ತು ಬಿ.ಕೆ.ಎಸ್. ಅಯ್ಯಂಗಾರ್ ಅವರಂತಹ ಯೋಗಗುರುಗಳ ದಂತಕಥೆಗಳ ಕೊಡುಗೆಗಳನ್ನು ಒಳಗೊಂಡಂತೆ ಯೋಗದ ಇತಿಹಾಸ ಮತ್ತು ಮಹತ್ವವನ್ನು ಸಾರ ಬಹುದಾಗಿದೆ.
ಈ ಎರಡು ಪ್ರಸ್ತಾವನೆಗಳು ₹ 20 ಕೋಟಿ ವೆಚ್ಚದವಗಿದ್ದು, ಈ ಯೋಜನೆಗಳು, ಸಾಂಸ್ಕೃತಿಕ, ಐತಿಹಾಸಿಕ ಮತ್ತು ಪ್ರವಾಸಿ ಕೇಂದ್ರವಾಗಿ ಮೈಸೂರಿನ ಗುರುತನ್ನು ಹೆಚ್ಚಿಸುವ ಗುರಿಯನ್ನು ಹೊಂದಿವೆ ಎಂದು ಸಂಸದ ಯದುವೀರ್ ತಿಳಿಸಿದ್ದಾರೆ.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…