ಮೈಸೂರು : ಮೈಸೂರು-ಕೊಡಗು ಲೋಕಸಭಾ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮೈಸೂರು ಪ್ರವಾಸೋದ್ಯಮ ಕುರಿತಂತೆ ಎರಡು ಪ್ರಸ್ತಾವನೆಗಳನ್ನು ಸಲ್ಲಿಸಿದ್ದಾರೆ.
ಬುಧವಾರ ನವದೆಹಲಿಯ ಅವರ ಕಚೇರಿಯಲ್ಲಿ ಭೇಟಿಯಾದ ಸಂಸದರು, ದಸರಾ ಆನೆ ಅರ್ಜುನ ಹೆಸರಿನ ಸ್ಮಾರಕ ಹಾಗೂ ಯೋಗ ವಸ್ತುಸಂಗ್ರಹಾಲಯ ಸಂಬಂಧ ಪ್ರಸ್ತಾವನೆ ಸಲ್ಲಿಸಿದ್ದಾರೆ.
2012 ರಿಂದ 2019 ರವರೆಗೆ ಚಿನ್ನದ ಅಂಬಾರಿಯನ್ನು ಹೊತ್ತು ಮೈಸೂರು ದಸರಾ ಮೆರವಣಿಗೆಯನ್ನು ಮುನ್ನಡೆಸಿದ ದಸರಾ ಆನೆ “ಅರ್ಜುನ” ಗೆ ಗೌರವ ಸಲ್ಲಿಸುವ ದೃಷ್ಠಿಯಿಂದ ಬನ್ನಿಮಂಟಪದ ಎಲ್ಐಸಿ ವೃತ್ತದ ಬಳಿ ದಸರಾ ಆನೆ ಅರ್ಜುನ ಸ್ಮಾರಕ, ಭವ್ಯ ಪ್ರತಿಮೆ, ಮೈಸೂರಿನ ದಸರಾ ಆನೆಗಳೊಂದಿಗಿನ ಬಾಂಧವ್ಯವನ್ನು ವಿವರಿಸುವ ಐತಿಹಾಸಿಕ ಫಲಕಗಳು, ಸೌರ ಬೆಳಕು, ಮಳೆನೀರು ಕೊಯ್ಲು ಮತ್ತು ಭೂದೃಶ್ಯ ಉದ್ಯಾನಗಳಂತಹ ಪರಿಸರ ಸ್ನೇಹಿ ವೈಶಿಷ್ಟ್ಯಗಳನ್ನು ಅನಾವರಣಗೊಳಿಸಲು ಮನವಿ ಮಾಡಿದ್ದಾರೆ.
ಮೈಸೂರಿನ ಹಳೆಯ ಜಿಲ್ಲಾಧಿಕಾರಿ ಕಚೇರಿಯನ್ನು ಯೋಗ ವಸ್ತುಸಂಗ್ರಹಾಲಯವನ್ನಾಗಿ ಪರಿವರ್ತಿಸಲು ಉದ್ದೇಶಿಸಲಾಗಿದ್ದು, ಇದು ಯೋಗ ಕ್ಷೇತ್ರದಲ್ಲಿ ಮೈಸೂರಿನ ಜಾಗತಿಕ ಕೊಡುಗೆಗಳನ್ನು ಗುರುತಿಸುದಂತಾಗುತ್ತದೆ. ಈ ಮೂಲಕ ಶ್ರೀ ಕೃಷ್ಣಮಾಚಾರ್ಯ, ಪಟ್ಟಾಭಿ ಜೋಯಿಸ್ ಮತ್ತು ಬಿ.ಕೆ.ಎಸ್. ಅಯ್ಯಂಗಾರ್ ಅವರಂತಹ ಯೋಗಗುರುಗಳ ದಂತಕಥೆಗಳ ಕೊಡುಗೆಗಳನ್ನು ಒಳಗೊಂಡಂತೆ ಯೋಗದ ಇತಿಹಾಸ ಮತ್ತು ಮಹತ್ವವನ್ನು ಸಾರ ಬಹುದಾಗಿದೆ.
ಈ ಎರಡು ಪ್ರಸ್ತಾವನೆಗಳು ₹ 20 ಕೋಟಿ ವೆಚ್ಚದವಗಿದ್ದು, ಈ ಯೋಜನೆಗಳು, ಸಾಂಸ್ಕೃತಿಕ, ಐತಿಹಾಸಿಕ ಮತ್ತು ಪ್ರವಾಸಿ ಕೇಂದ್ರವಾಗಿ ಮೈಸೂರಿನ ಗುರುತನ್ನು ಹೆಚ್ಚಿಸುವ ಗುರಿಯನ್ನು ಹೊಂದಿವೆ ಎಂದು ಸಂಸದ ಯದುವೀರ್ ತಿಳಿಸಿದ್ದಾರೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…