ಮೈಸೂರು : ಮೈಸೂರು-ಕೊಡಗು ಲೋಕಸಭಾ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮೈಸೂರು ಪ್ರವಾಸೋದ್ಯಮ ಕುರಿತಂತೆ ಎರಡು ಪ್ರಸ್ತಾವನೆಗಳನ್ನು ಸಲ್ಲಿಸಿದ್ದಾರೆ.
ಬುಧವಾರ ನವದೆಹಲಿಯ ಅವರ ಕಚೇರಿಯಲ್ಲಿ ಭೇಟಿಯಾದ ಸಂಸದರು, ದಸರಾ ಆನೆ ಅರ್ಜುನ ಹೆಸರಿನ ಸ್ಮಾರಕ ಹಾಗೂ ಯೋಗ ವಸ್ತುಸಂಗ್ರಹಾಲಯ ಸಂಬಂಧ ಪ್ರಸ್ತಾವನೆ ಸಲ್ಲಿಸಿದ್ದಾರೆ.
2012 ರಿಂದ 2019 ರವರೆಗೆ ಚಿನ್ನದ ಅಂಬಾರಿಯನ್ನು ಹೊತ್ತು ಮೈಸೂರು ದಸರಾ ಮೆರವಣಿಗೆಯನ್ನು ಮುನ್ನಡೆಸಿದ ದಸರಾ ಆನೆ “ಅರ್ಜುನ” ಗೆ ಗೌರವ ಸಲ್ಲಿಸುವ ದೃಷ್ಠಿಯಿಂದ ಬನ್ನಿಮಂಟಪದ ಎಲ್ಐಸಿ ವೃತ್ತದ ಬಳಿ ದಸರಾ ಆನೆ ಅರ್ಜುನ ಸ್ಮಾರಕ, ಭವ್ಯ ಪ್ರತಿಮೆ, ಮೈಸೂರಿನ ದಸರಾ ಆನೆಗಳೊಂದಿಗಿನ ಬಾಂಧವ್ಯವನ್ನು ವಿವರಿಸುವ ಐತಿಹಾಸಿಕ ಫಲಕಗಳು, ಸೌರ ಬೆಳಕು, ಮಳೆನೀರು ಕೊಯ್ಲು ಮತ್ತು ಭೂದೃಶ್ಯ ಉದ್ಯಾನಗಳಂತಹ ಪರಿಸರ ಸ್ನೇಹಿ ವೈಶಿಷ್ಟ್ಯಗಳನ್ನು ಅನಾವರಣಗೊಳಿಸಲು ಮನವಿ ಮಾಡಿದ್ದಾರೆ.
ಮೈಸೂರಿನ ಹಳೆಯ ಜಿಲ್ಲಾಧಿಕಾರಿ ಕಚೇರಿಯನ್ನು ಯೋಗ ವಸ್ತುಸಂಗ್ರಹಾಲಯವನ್ನಾಗಿ ಪರಿವರ್ತಿಸಲು ಉದ್ದೇಶಿಸಲಾಗಿದ್ದು, ಇದು ಯೋಗ ಕ್ಷೇತ್ರದಲ್ಲಿ ಮೈಸೂರಿನ ಜಾಗತಿಕ ಕೊಡುಗೆಗಳನ್ನು ಗುರುತಿಸುದಂತಾಗುತ್ತದೆ. ಈ ಮೂಲಕ ಶ್ರೀ ಕೃಷ್ಣಮಾಚಾರ್ಯ, ಪಟ್ಟಾಭಿ ಜೋಯಿಸ್ ಮತ್ತು ಬಿ.ಕೆ.ಎಸ್. ಅಯ್ಯಂಗಾರ್ ಅವರಂತಹ ಯೋಗಗುರುಗಳ ದಂತಕಥೆಗಳ ಕೊಡುಗೆಗಳನ್ನು ಒಳಗೊಂಡಂತೆ ಯೋಗದ ಇತಿಹಾಸ ಮತ್ತು ಮಹತ್ವವನ್ನು ಸಾರ ಬಹುದಾಗಿದೆ.
ಈ ಎರಡು ಪ್ರಸ್ತಾವನೆಗಳು ₹ 20 ಕೋಟಿ ವೆಚ್ಚದವಗಿದ್ದು, ಈ ಯೋಜನೆಗಳು, ಸಾಂಸ್ಕೃತಿಕ, ಐತಿಹಾಸಿಕ ಮತ್ತು ಪ್ರವಾಸಿ ಕೇಂದ್ರವಾಗಿ ಮೈಸೂರಿನ ಗುರುತನ್ನು ಹೆಚ್ಚಿಸುವ ಗುರಿಯನ್ನು ಹೊಂದಿವೆ ಎಂದು ಸಂಸದ ಯದುವೀರ್ ತಿಳಿಸಿದ್ದಾರೆ.
ಮಡಿಕೇರಿ: ರಾಜ್ಯದಲ್ಲಿ ಮಳೆಯ ನಡುವೆಯೇ ವಾಯು ಗುಣಮಟ್ಟದಲ್ಲಿ ಬದಲಾವಣೆ ಕಂಡಿದ್ದು, ಬೆಂಗಳೂರಿನಲ್ಲಿ ಇಂದು 75 AQI ನೊಂದಿಗೆ ಸಾಧಾರಣ ಗಾಳಿ…
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಸಾಧನೆಯನ್ನು ಸೂಪರ್ ಸ್ಟಾರ್ ರಜನಿಕಾಂತ್ ಮನಬಿಚ್ಚಿ ಹೊಗಳಿದ್ದಾರೆ. ಚನ್ನೈನ ತಮ್ಮ ನಿವಾಸದಲ್ಲಿ…
ಇಂದೋರ್ : ಕೇರಳದ ತಿರುವನಂತಪುರಂನಿಂದ ದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್ಪ್ರೆಸ್ ರೈಲಿನ ಎಸಿ ಕೋಚ್ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಭಾನುವಾರ…
ಬದಲಾವಣೆ ಎನ್ನುವುದು ಜಗದ ನಿಯಮ ಎನ್ನುವ ನಾಣ್ಣುಡಿ ಈಗ ರಾಜಕೀಯ ರಂಗದಲ್ಲಿ ನಿರಂತರವಾಗಿ ನಡೆಯುತ್ತಲೇ ಇದೆ. ಪಶ್ಚಿಮ ಬಂಗಾಳ, ತಮಿಳುನಾಡು…
ಚಂದ್ರಶೇಖರ್ ಮೂರ್ತಿ.ಕೆ.ಎಸ್ ಟೀ ಅಂದರೆ ಬೇರೆ, ಚಹ ಅಂದರೆ ಬೇರೆ ಎಂದು ಹೇಳಿ ಚಕಿತಗೊಳಿಸಿದವರು ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿ…
ಸಿರಿ ಮೈಸೂರು ಇದು ಬೇಸಿಗೆ ಕಾಲ. ಕೆಲ ದಿನಗಳ ಹಿಂದಷ್ಟೇ ಫ್ರಾನ್ಸ್ನಲ್ಲಿ ಕ್ಯಾನ್ಸ್ ಫಿಲಂ ಫೆಸ್ಟಿವಲ್ ನಡೆಯಿತು. ಜಗತ್ತಿನಾದ್ಯಂತದಿಂದ ಸುರಸುಂದರ…