ಮೈಸೂರು : ಮೈಸೂರು-ಕೊಡಗು ಲೋಕಸಭಾ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮೈಸೂರು ಪ್ರವಾಸೋದ್ಯಮ ಕುರಿತಂತೆ ಎರಡು ಪ್ರಸ್ತಾವನೆಗಳನ್ನು ಸಲ್ಲಿಸಿದ್ದಾರೆ.
ಬುಧವಾರ ನವದೆಹಲಿಯ ಅವರ ಕಚೇರಿಯಲ್ಲಿ ಭೇಟಿಯಾದ ಸಂಸದರು, ದಸರಾ ಆನೆ ಅರ್ಜುನ ಹೆಸರಿನ ಸ್ಮಾರಕ ಹಾಗೂ ಯೋಗ ವಸ್ತುಸಂಗ್ರಹಾಲಯ ಸಂಬಂಧ ಪ್ರಸ್ತಾವನೆ ಸಲ್ಲಿಸಿದ್ದಾರೆ.
2012 ರಿಂದ 2019 ರವರೆಗೆ ಚಿನ್ನದ ಅಂಬಾರಿಯನ್ನು ಹೊತ್ತು ಮೈಸೂರು ದಸರಾ ಮೆರವಣಿಗೆಯನ್ನು ಮುನ್ನಡೆಸಿದ ದಸರಾ ಆನೆ “ಅರ್ಜುನ” ಗೆ ಗೌರವ ಸಲ್ಲಿಸುವ ದೃಷ್ಠಿಯಿಂದ ಬನ್ನಿಮಂಟಪದ ಎಲ್ಐಸಿ ವೃತ್ತದ ಬಳಿ ದಸರಾ ಆನೆ ಅರ್ಜುನ ಸ್ಮಾರಕ, ಭವ್ಯ ಪ್ರತಿಮೆ, ಮೈಸೂರಿನ ದಸರಾ ಆನೆಗಳೊಂದಿಗಿನ ಬಾಂಧವ್ಯವನ್ನು ವಿವರಿಸುವ ಐತಿಹಾಸಿಕ ಫಲಕಗಳು, ಸೌರ ಬೆಳಕು, ಮಳೆನೀರು ಕೊಯ್ಲು ಮತ್ತು ಭೂದೃಶ್ಯ ಉದ್ಯಾನಗಳಂತಹ ಪರಿಸರ ಸ್ನೇಹಿ ವೈಶಿಷ್ಟ್ಯಗಳನ್ನು ಅನಾವರಣಗೊಳಿಸಲು ಮನವಿ ಮಾಡಿದ್ದಾರೆ.
ಮೈಸೂರಿನ ಹಳೆಯ ಜಿಲ್ಲಾಧಿಕಾರಿ ಕಚೇರಿಯನ್ನು ಯೋಗ ವಸ್ತುಸಂಗ್ರಹಾಲಯವನ್ನಾಗಿ ಪರಿವರ್ತಿಸಲು ಉದ್ದೇಶಿಸಲಾಗಿದ್ದು, ಇದು ಯೋಗ ಕ್ಷೇತ್ರದಲ್ಲಿ ಮೈಸೂರಿನ ಜಾಗತಿಕ ಕೊಡುಗೆಗಳನ್ನು ಗುರುತಿಸುದಂತಾಗುತ್ತದೆ. ಈ ಮೂಲಕ ಶ್ರೀ ಕೃಷ್ಣಮಾಚಾರ್ಯ, ಪಟ್ಟಾಭಿ ಜೋಯಿಸ್ ಮತ್ತು ಬಿ.ಕೆ.ಎಸ್. ಅಯ್ಯಂಗಾರ್ ಅವರಂತಹ ಯೋಗಗುರುಗಳ ದಂತಕಥೆಗಳ ಕೊಡುಗೆಗಳನ್ನು ಒಳಗೊಂಡಂತೆ ಯೋಗದ ಇತಿಹಾಸ ಮತ್ತು ಮಹತ್ವವನ್ನು ಸಾರ ಬಹುದಾಗಿದೆ.
ಈ ಎರಡು ಪ್ರಸ್ತಾವನೆಗಳು ₹ 20 ಕೋಟಿ ವೆಚ್ಚದವಗಿದ್ದು, ಈ ಯೋಜನೆಗಳು, ಸಾಂಸ್ಕೃತಿಕ, ಐತಿಹಾಸಿಕ ಮತ್ತು ಪ್ರವಾಸಿ ಕೇಂದ್ರವಾಗಿ ಮೈಸೂರಿನ ಗುರುತನ್ನು ಹೆಚ್ಚಿಸುವ ಗುರಿಯನ್ನು ಹೊಂದಿವೆ ಎಂದು ಸಂಸದ ಯದುವೀರ್ ತಿಳಿಸಿದ್ದಾರೆ.
ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್ ಹೈಕೋರ್ಟ್ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…
ಮಂಡ್ಯ : ಬೋರ್ವೆಲ್, ಪಂಪ್ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…