ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ
ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ ಕುರಿತು ವಿಷಯವನ್ನು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಯಶಸ್ವಿಯಾಗಿದ್ದು, ಈ ನಿಟ್ಟಿನಲ್ಲಿ ತಂಬಾಕು ಮಾರಾಟಕ್ಕೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸದ ಯದುವೀರ್, ಸಂಬಂಧಪಟ್ಟ ಸಚಿವರನ್ನು, ಹಿರಿಯ ಅಧಿಕಾರಿಗಳನ್ನು, ತಂಬಾಕು ಮಂಡಳಿಯ ಅಧಿಕಾರಿಗಳನ್ನು ಭೇಟಿ ಮಾಡಿ, ತಂಬಾಕು ಬೆಳೆಗಾರರಿಗೆ ಅನುಕೂಲವಾಗುವ ತೀರ್ಮಾನ ಕೈಗೊಳ್ಳಬೇಕೆಂದು ಮನವಿ ಮಾಡಲಾಗಿತ್ತು, ಅದಕ್ಕೆ ಈಗ ಸೂಕ್ತ ಸ್ಪಂದನೆ ಸಿಕ್ಕಿದೆ ಎಂದರು.
ನೋಂದಾಯಿತ ಮತ್ತು ನೋಂದಾಯಿಸಿದ ಬೆಳೆಗಾರರ ಹೆಚ್ಚುವರಿ FCV ತಂಬಾಕು ಬೆಳೆಯನ್ನು ತಂಬಾಕು ಮಂಡಳಿಯು ಅಧಿಕೃತಗೊಳಿಸಿದ ಹರಾಜು ವೇದಿಕೆಗಳಲ್ಲಿ ಮಾರಾಟ ಮಾಡಲು ಅನುಮತಿ ನೀಡಲಾಗಿದೆ ಎಂದು ಹೇಳಿದ್ದಾರೆ.
ಫ್ಲೂ ಕ್ಯೂರ್ಡ್ ವರ್ಜೀನಿಯಾ ತಂಬಾಕನ್ನು (FCV ತಂಬಾಕು) ತಂಬಾಕು ಮಂಡಳಿಯ ಅಧಿಕೃತ ಹರಾಜು ವೇದಿಕೆಗಳಲ್ಲಿ ವಿಲೇವಾರಿ ಮಾಡುವ ನಿಟ್ಟಿನಲ್ಲಿ 1975 ರ ತಂಬಾಕು ಮಂಡಳಿ ಕಾಯ್ದೆ ಅಡಿಯಲ್ಲಿ ವಿಧಿಸಲಾದ ನಿರ್ಬಂಧಗಳನ್ನು ಸಡಿಲಿಸಲಾಗಿದೆ ಎಂದು ಸಂಸದರು ವಿವರಿಸಿದ್ದಾರೆ.
2025-26 ಋತುವಿನಲ್ಲಿ ಉತ್ಪಾದಿಸಿದ ಎಫ್ಸಿವಿ ತಂಬಾಕಿಗೆ ಪ್ರತಿ ನೋಂದಾಯಿತ ಬೆಳೆಗಾರರು ಪ್ರತಿ ಕಿಲೋಗ್ರಾಂಗೆ ಒಂದು ರೂಪಾಯಿ ಮತ್ತು ಮಾರಾಟದ ಆದಾಯದಲ್ಲಿ ಶೇ. 5ರಷ್ಟು ಮೊತ್ತವನ್ನು ತಂಬಾಕು ನಿಧಿಗೆ ಕೊಡುಗೆ ನೀಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ ಎಂದು ಸಂಸದರು ವಿವರಿಸಿದ್ದಾರೆ.
ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…
ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು…
ಗುಣಮಟ್ಟದ ಕನ್ನಡ ಮತ್ತು ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಸರ್ಕಾರ ನೀಡುತ್ತಿರುವ ಸಹಾಯಧನವನ್ನು ೨೦೨೬ನೇ ಸಾಲಿನಿಂದ ರದ್ದುಪಡಿಸಲು ಸರ್ಕಾರ ನಿರ್ಧರಿಸಿದೆ ಎನ್ನುವುದು…
ಎಸ್.ಎ. ಹುಸೇನ್ ಶೀಘ್ರದಲ್ಲೇ ಹೊಸ ಪೈಪ್ಲೈನ್ ಮೂಲಕ ನೀರು ಸರಬರಾಜು ೪೭.೪೧ ಕೋಟಿ ರೂ. ವೆಚ್ಚದ ೨ ಹಂತಗಳ ಕಾಮಗಾರಿ…
ಸಫಾರಿ ಪುನಾರಂಭಕ್ಕೆ ಸರ್ಕಾರದ ಆದೇಶ ಹೊರ ಬಿದ್ದ ಬಳಿಕ ರೈತ ಸಂಘಟನೆಗಳ ಆಕ್ರೋಶ ಭುಗಿಲೆದಿದ್ದೆ. ಅಧಿಕಾರಿಗಳು, ಸರ್ಕಾರದ ವಿರುದ್ಧ ರೈತ…
ಮಂಜು ಕೋಟೆ ಆದೇಶ ಬಂದ ತಕ್ಷಣ ಸಫಾರಿ ಪುನರ್ ಆರಂಭಿಸಲಾಗುವುದು: ಅರಣ್ಯಾಧಿಕಾರಿ ಎಚ್.ಡಿ.ಕೋಟೆ: ರಾಜ್ಯ ಸರ್ಕಾರವು ಸಫಾರಿ ಆರಂಭಕ್ಕೆ ಆದೇಶ…