ಮೈಸೂರು

ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ

ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ

ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ ಕುರಿತು ವಿಷಯವನ್ನು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌  ಯಶಸ್ವಿಯಾಗಿದ್ದು, ಈ ನಿಟ್ಟಿನಲ್ಲಿ ತಂಬಾಕು ಮಾರಾಟಕ್ಕೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸದ ಯದುವೀರ್‌, ಸಂಬಂಧಪಟ್ಟ ಸಚಿವರನ್ನು, ಹಿರಿಯ ಅಧಿಕಾರಿಗಳನ್ನು, ತಂಬಾಕು ಮಂಡಳಿಯ ಅಧಿಕಾರಿಗಳನ್ನು ಭೇಟಿ ಮಾಡಿ, ತಂಬಾಕು ಬೆಳೆಗಾರರಿಗೆ ಅನುಕೂಲವಾಗುವ ತೀರ್ಮಾನ ಕೈಗೊಳ್ಳಬೇಕೆಂದು ಮನವಿ ಮಾಡಲಾಗಿತ್ತು, ಅದಕ್ಕೆ ಈಗ ಸೂಕ್ತ ಸ್ಪಂದನೆ ಸಿಕ್ಕಿದೆ ಎಂದರು.

ನೋಂದಾಯಿತ ಮತ್ತು ನೋಂದಾಯಿಸಿದ ಬೆಳೆಗಾರರ ​​ಹೆಚ್ಚುವರಿ FCV ತಂಬಾಕು ಬೆಳೆಯನ್ನು ತಂಬಾಕು ಮಂಡಳಿಯು ಅಧಿಕೃತಗೊಳಿಸಿದ ಹರಾಜು ವೇದಿಕೆಗಳಲ್ಲಿ ಮಾರಾಟ ಮಾಡಲು ಅನುಮತಿ ನೀಡಲಾಗಿದೆ ಎಂದು ಹೇಳಿದ್ದಾರೆ.

ಫ್ಲೂ ಕ್ಯೂರ್ಡ್ ವರ್ಜೀನಿಯಾ ತಂಬಾಕನ್ನು (FCV ತಂಬಾಕು) ತಂಬಾಕು ಮಂಡಳಿಯ ಅಧಿಕೃತ ಹರಾಜು ವೇದಿಕೆಗಳಲ್ಲಿ ವಿಲೇವಾರಿ ಮಾಡುವ ನಿಟ್ಟಿನಲ್ಲಿ 1975 ರ ತಂಬಾಕು ಮಂಡಳಿ ಕಾಯ್ದೆ ಅಡಿಯಲ್ಲಿ ವಿಧಿಸಲಾದ ನಿರ್ಬಂಧಗಳನ್ನು ಸಡಿಲಿಸಲಾಗಿದೆ ಎಂದು ಸಂಸದರು ವಿವರಿಸಿದ್ದಾರೆ.

2025-26 ಋತುವಿನಲ್ಲಿ ಉತ್ಪಾದಿಸಿದ ಎಫ್‌ಸಿವಿ ತಂಬಾಕಿಗೆ ಪ್ರತಿ ನೋಂದಾಯಿತ ಬೆಳೆಗಾರರು ಪ್ರತಿ ಕಿಲೋಗ್ರಾಂಗೆ ಒಂದು ರೂಪಾಯಿ ಮತ್ತು ಮಾರಾಟದ ಆದಾಯದಲ್ಲಿ ಶೇ. 5ರಷ್ಟು ಮೊತ್ತವನ್ನು ತಂಬಾಕು ನಿಧಿಗೆ ಕೊಡುಗೆ ನೀಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ ಎಂದು ಸಂಸದರು ವಿವರಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌, ಸ್ಟವ್‌ ಪತ್ತೆ

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…

9 mins ago

ತಮಿಳುನಾಡು ಚುನಾವಣೆ: ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ

ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್‍ಪಿಜಿ…

35 mins ago

ಮೈಸೂರು: ವಿನೂತನ ರೀತಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್‌ ಡಾ.ಬಿ.ಆರ್.‌ಅಂಬೇಡ್ಕರ್‌ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…

1 hour ago

ನಾಳೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…

2 hours ago

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…

3 hours ago

ಗುರುವಾರ ಅಮೇರಿಕಾ-ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆ

ಇಸ್ಲಾಮಾಬಾದ್:‌ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…

3 hours ago