ಮೈಸೂರು

ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ

ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ

ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ ಕುರಿತು ವಿಷಯವನ್ನು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌  ಯಶಸ್ವಿಯಾಗಿದ್ದು, ಈ ನಿಟ್ಟಿನಲ್ಲಿ ತಂಬಾಕು ಮಾರಾಟಕ್ಕೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸದ ಯದುವೀರ್‌, ಸಂಬಂಧಪಟ್ಟ ಸಚಿವರನ್ನು, ಹಿರಿಯ ಅಧಿಕಾರಿಗಳನ್ನು, ತಂಬಾಕು ಮಂಡಳಿಯ ಅಧಿಕಾರಿಗಳನ್ನು ಭೇಟಿ ಮಾಡಿ, ತಂಬಾಕು ಬೆಳೆಗಾರರಿಗೆ ಅನುಕೂಲವಾಗುವ ತೀರ್ಮಾನ ಕೈಗೊಳ್ಳಬೇಕೆಂದು ಮನವಿ ಮಾಡಲಾಗಿತ್ತು, ಅದಕ್ಕೆ ಈಗ ಸೂಕ್ತ ಸ್ಪಂದನೆ ಸಿಕ್ಕಿದೆ ಎಂದರು.

ನೋಂದಾಯಿತ ಮತ್ತು ನೋಂದಾಯಿಸಿದ ಬೆಳೆಗಾರರ ​​ಹೆಚ್ಚುವರಿ FCV ತಂಬಾಕು ಬೆಳೆಯನ್ನು ತಂಬಾಕು ಮಂಡಳಿಯು ಅಧಿಕೃತಗೊಳಿಸಿದ ಹರಾಜು ವೇದಿಕೆಗಳಲ್ಲಿ ಮಾರಾಟ ಮಾಡಲು ಅನುಮತಿ ನೀಡಲಾಗಿದೆ ಎಂದು ಹೇಳಿದ್ದಾರೆ.

ಫ್ಲೂ ಕ್ಯೂರ್ಡ್ ವರ್ಜೀನಿಯಾ ತಂಬಾಕನ್ನು (FCV ತಂಬಾಕು) ತಂಬಾಕು ಮಂಡಳಿಯ ಅಧಿಕೃತ ಹರಾಜು ವೇದಿಕೆಗಳಲ್ಲಿ ವಿಲೇವಾರಿ ಮಾಡುವ ನಿಟ್ಟಿನಲ್ಲಿ 1975 ರ ತಂಬಾಕು ಮಂಡಳಿ ಕಾಯ್ದೆ ಅಡಿಯಲ್ಲಿ ವಿಧಿಸಲಾದ ನಿರ್ಬಂಧಗಳನ್ನು ಸಡಿಲಿಸಲಾಗಿದೆ ಎಂದು ಸಂಸದರು ವಿವರಿಸಿದ್ದಾರೆ.

2025-26 ಋತುವಿನಲ್ಲಿ ಉತ್ಪಾದಿಸಿದ ಎಫ್‌ಸಿವಿ ತಂಬಾಕಿಗೆ ಪ್ರತಿ ನೋಂದಾಯಿತ ಬೆಳೆಗಾರರು ಪ್ರತಿ ಕಿಲೋಗ್ರಾಂಗೆ ಒಂದು ರೂಪಾಯಿ ಮತ್ತು ಮಾರಾಟದ ಆದಾಯದಲ್ಲಿ ಶೇ. 5ರಷ್ಟು ಮೊತ್ತವನ್ನು ತಂಬಾಕು ನಿಧಿಗೆ ಕೊಡುಗೆ ನೀಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ ಎಂದು ಸಂಸದರು ವಿವರಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

42 mins ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

4 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

4 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

4 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

5 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago