ಮೈಸೂರು: ಮುಡಾ ಪ್ರಕರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಆಪ್ತ ರವಿಕುಮಾರ್ ಅವರಿಗೆ ಇಡಿ ತನಿಖಾ ಸಂಸ್ಥೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.
ಕೆಲ ದಿನಗಳ ಹಿಂದೆ ಸಿದ್ದರಾಮಯ್ಯ ಆಪ್ತ ರವಿಕುಮಾರ್ ಅವರನ್ನು ಇಡಿ ಅಧಿಕಾರಿಗಳು ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ ಸಹಿಯನ್ನು ನಕಲು ಮಾಡಿರುವ ಆರೋಪದ ವಿಚಾರವಾಗಿ ಸುಮಾರು 12 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದು, ಇದೀಗ ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈಗಾಗಲೇ ಇಡಿ ಅಧಿಕಾರಿಗಳು ರವಿಕುಮಾರ್ ಅವರನ್ನು ಮುಡಾದ 50:50 ಅನುಪಾತದ ಬದಲಿ ನಿವೇಶನಗಳಿಗೆ ಸಂಬಂಧಿಸಿದಂತೆ ಪಾರ್ವತಿ ಸಿದ್ದರಾಮಯ್ಯ ಅವರ ಸಹಿಯನ್ನು ನಕಲು ಮಾಡಿದ್ದರು ಎಂಬ ಆರೋಪದ ಮೇಲೆ ದಾಖಲೆ ಸಮೇತ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಅದರಂತೆಯೇ ರವಿಕುಮಾರ್ ಅವರು ದಾಖಲೆ ಸಮೇತ ವಿಚಾರಣೆಗೆ ಹಾಜರಾಗಿ ತನಿಖೆ ಎದುರಿಸಿದ್ದರು. ಆದರೆ ಇದೀಗ ಅಧಿಕ ಮಾಹಿತಿಗಾಗಿ ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಗುವಹಾಟಿ : ಆರಂಭದಲ್ಲಿ ಬೌಲರ್ಗಳ ಅಬ್ಬರ ನಂತರ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್ ಕಿಂಗ್ಸ್…
ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…
ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…
ಟೆಹ್ರಾನ್ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…
ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…