ಮೈಸೂರು: ಮುಡಾ ಪ್ರಕರಣದ 50;50 ಅನುಪಾತದ ನಿವೇಶನ ವಿಚಾರವಾಗಿ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಮುಡಾ ಮಾಜಿ ಆಯುಕ್ತ ಟಿ.ಬಿ.ನಟೇಶ್ ಕುಮಾರ್ ಅವರಿಗೆ ಮೈಸೂರು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳು ಮುಡಾ ಪ್ರಕರಣದಲ್ಲಿ ಭಾಗಿಯಾಗಿರುವ ಸರ್ಕಾರಿ ಅಧಿಕಾರಿಯನ್ನು ತನಿಖೆ ನಡೆಸಲು ರಾಜ್ಯ ಗೃಹ ಇಲಾಖೆ ಅನುಮತಿ ಪಡೆದಿದ್ದರು. ಈ ಅನುಮತಿಯ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತ ಅಧಿಕಾರಿಗಳು ನವೆಂಬರ್ 19 ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.
ಈಗಾಗಲೇ ಪ್ರಕರಣದಲ್ಲಿ ಎ1 ಆರೋಪಿ ಸಿಎಂ ಸಿದ್ದರಾಮಯ್ಯ, ಎ2 ಆರೋಪಿ ಪಾರ್ವತಿ ಸಿದ್ದರಾಮಯ್ಯ, ಎ3 ಆರೋಪಿ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಎ4 ಆರೋಪಿ ದೇವರಾಜು ಅವರನ್ನು ವಿಚಾರಣೆ ನಡೆಸಿದೆ. ಅಲ್ಲದೇ ವಿಚಾರಣೆಯೂ ಅಂತಿಮ ಘಟ್ಟಕ್ಕೆ ಬಂದಿದ್ದು, ಮುಡಾ ಮಾಜಿ ಆಯುಕ್ತ ಟಿ.ಬಿ.ನಟೇಶ್ ಅವರ ವಿಚಾರಣೆಯ ನಂತರ ಹೈಕೋರ್ಟ್ಗೆ ವರದಿಯನ್ನು ಸಲ್ಲಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ಹೇಳಿವೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…