ಮೈಸೂರು: ಮೈಸೂರು ನಗಾರಾಭಿವೃದ್ಧಿ ಪ್ರಾಧಿಕಾರದ 50;50ಅನುಪಾತದ ನಿವೇಶನ ಹಾಗೂ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ 14 ಬದಲಿ ನಿವೇಶನಗಳ ಸಂಬಂಧ ತನಿಖೆ ನಡೆಸುತ್ತಿರುವ ಮೈಸೂರು ಲೋಕಾಯುಕ್ತ ಪೊಲೀಸರು ಗುರುವಾರ ಬಿಜೆಪಿಯ ಮಾಜಿ ಶಾಸಕರಾದ ಎಸ್.ಎ.ರಾಮದಾಸ್ ಹಾಗೂ ಎಲ್.ನಾಗೇಂದ್ರ ಅವರನ್ನು ಕರೆಸಿ ಮಾಹಿತಿ ಸಂಗ್ರಹಿಸಿದ್ದಾರೆ.
ಗುರುವಾರ ಮಧ್ಯಾಹ್ನ ಕೆ.ಆರ್. ಕ್ಷೇತ್ರದ ಮಾಜಿ ಶಾಸಕ ಎಸ್.ಎ.ರಾಮದಾಸ್ ಅವರು ನಗರದ ಲೋಕಾಯುಕ್ತ ಕಚೇರಿಗೆ ಆಗಮಿಸಿದರು. ಸುಮಾರು ಒಂದು ತಾಸು ಅವರನ್ನು ವಿಚಾರಣೆ ನಡೆಸಿದ ಲೋಕಾ ಪೊಲೀಸರು ಅವರಿಂದ ಕೆಲ ಮಾಹಿತಿಗಳನ್ನು ಪಡೆದುಕೊಂಡರು.
ಲೋಕಾಯುಕ್ತ ವಿಚಾರಣೆ ಮುಗಿಸಿ ವಾಪಸ್ ತೆರಳುವ ವೇಳೆ ಮಾಧ್ಯಮದವರು ಅವರನ್ನು ಮಾತನಾಡಿಸಲು ಮುಂದಾದರು. ಈ ವೇಳೆ ನಾನು ಮುಡಾ ವಿಚಾರವಾಗಿ ಹಿಂದೆಯೂ ಕಾಮೆಂಟ್ ಮಾಡಿಲ್ಲ, ಈಗಲೂ ಕಾಮೆಂಟ್ ಮಾಡಲ್ಲ. ನೋ ರಿಯಾಕ್ಷನ್ ಎಂದು ಹೇಳಿ ರಾಮದಾಸ್ ತೆರಳಿದರು.
ರಾಮದಾಸ್ ಅವರಿಂದ ಮಾಹಿತಿ ಸಂಗ್ರಹಿಸಿದ ನಂತರ ಚಾಮರಾಜ ಕ್ಷೇತ್ರದ ಮಾಜಿ ಶಾಸಕ ಎಲ್.ನಾಗೇಂದ್ರ ಅವರು ಲೋಕಾ ಕಚೇರಿಗೆ ಆಗಮಿಸಿದರು. ಅವರು ಕೂಡ ಸುಮಾರು ಒಂದು ತಾಸು ಲೋಕಾ ಕಚೇರಿಯಲ್ಲಿ ಹಾಜರಿದ್ದು, ಪೊಲೀಸರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.
ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…
ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…
ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…
ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…