ಮೈಸೂರು: ಮೈಸೂರು ನಗಾರಾಭಿವೃದ್ಧಿ ಪ್ರಾಧಿಕಾರದ 50;50ಅನುಪಾತದ ನಿವೇಶನ ಹಾಗೂ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ 14 ಬದಲಿ ನಿವೇಶನಗಳ ಸಂಬಂಧ ತನಿಖೆ ನಡೆಸುತ್ತಿರುವ ಮೈಸೂರು ಲೋಕಾಯುಕ್ತ ಪೊಲೀಸರು ಗುರುವಾರ ಬಿಜೆಪಿಯ ಮಾಜಿ ಶಾಸಕರಾದ ಎಸ್.ಎ.ರಾಮದಾಸ್ ಹಾಗೂ ಎಲ್.ನಾಗೇಂದ್ರ ಅವರನ್ನು ಕರೆಸಿ ಮಾಹಿತಿ ಸಂಗ್ರಹಿಸಿದ್ದಾರೆ.
ಗುರುವಾರ ಮಧ್ಯಾಹ್ನ ಕೆ.ಆರ್. ಕ್ಷೇತ್ರದ ಮಾಜಿ ಶಾಸಕ ಎಸ್.ಎ.ರಾಮದಾಸ್ ಅವರು ನಗರದ ಲೋಕಾಯುಕ್ತ ಕಚೇರಿಗೆ ಆಗಮಿಸಿದರು. ಸುಮಾರು ಒಂದು ತಾಸು ಅವರನ್ನು ವಿಚಾರಣೆ ನಡೆಸಿದ ಲೋಕಾ ಪೊಲೀಸರು ಅವರಿಂದ ಕೆಲ ಮಾಹಿತಿಗಳನ್ನು ಪಡೆದುಕೊಂಡರು.
ಲೋಕಾಯುಕ್ತ ವಿಚಾರಣೆ ಮುಗಿಸಿ ವಾಪಸ್ ತೆರಳುವ ವೇಳೆ ಮಾಧ್ಯಮದವರು ಅವರನ್ನು ಮಾತನಾಡಿಸಲು ಮುಂದಾದರು. ಈ ವೇಳೆ ನಾನು ಮುಡಾ ವಿಚಾರವಾಗಿ ಹಿಂದೆಯೂ ಕಾಮೆಂಟ್ ಮಾಡಿಲ್ಲ, ಈಗಲೂ ಕಾಮೆಂಟ್ ಮಾಡಲ್ಲ. ನೋ ರಿಯಾಕ್ಷನ್ ಎಂದು ಹೇಳಿ ರಾಮದಾಸ್ ತೆರಳಿದರು.
ರಾಮದಾಸ್ ಅವರಿಂದ ಮಾಹಿತಿ ಸಂಗ್ರಹಿಸಿದ ನಂತರ ಚಾಮರಾಜ ಕ್ಷೇತ್ರದ ಮಾಜಿ ಶಾಸಕ ಎಲ್.ನಾಗೇಂದ್ರ ಅವರು ಲೋಕಾ ಕಚೇರಿಗೆ ಆಗಮಿಸಿದರು. ಅವರು ಕೂಡ ಸುಮಾರು ಒಂದು ತಾಸು ಲೋಕಾ ಕಚೇರಿಯಲ್ಲಿ ಹಾಜರಿದ್ದು, ಪೊಲೀಸರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.
ಮೈಸೂರು : ಆಷಾಢ ಶುಕ್ರವಾರದ ಶ್ರೀ ಚಾಮುಂಡೇಶ್ವರಿ ಅಮ್ಮನವರ ವಿಶೇಷ ಪೂಜೆ ಪ್ರಯುಕ್ತ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ…
ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಮಂಡ್ಯ ವಿವಿ ಆರಂಭವಾದಾಗಿನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದ್ದು, ವಿವಿಗೆ ೧೨ಬಿ ಮಾನ್ಯತೆ ಸಿಕ್ಕಿಲ್ಲದಿರುವುದು ಹಲವು…
ನವೀನ್ ಡಿಸೋಜ ಮಂಗಳೂರು ವಿವಿ ಅಧೀನದಲ್ಲಿದ್ದ ಕೊಡಗು ಈಗ ಪ್ರತ್ಯೇಕ ವಿವಿಯಾಗಿ ರೂಪುಗೊಂಡಿದೆ. ಆದರೆ, ಆಡಳಿತಾತ್ಮಕ ಹುದ್ದೆ ಭರ್ತಿಯಾಗದಿರುವುದು ಮತ್ತು…
ಚಾಮರಾಜನಗರ ವಿವಿ ಪ್ರಾರಂಭವಾಗಿ ೩ ವರ್ಷಗಳನ್ನು ಪೂರೈಸಿದೆ. ಈ ಬಾರಿ ಪ್ರಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿದೆ. ಆದರೆ ಇನ್ನೂ ಅತಿಥಿ ಅಧ್ಯಾಪಕರು,…
ಗಿರೀಶ್ ಹುಣಸೂರು ರಾಜ್ಯದ ಮೊತ್ತ ಮೊದಲ ವಿವಿ ಎಂಬ ಹೆಗ್ಗಳಿಕೆಯ ಮೈಸೂರು ವಿವಿಗೆ ೧೧೦ ವರ್ಷಗಳಷ್ಟು ಹಿರಿತನವಿದೆ. ಆದರೆ, ಕೆಲವು…
ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…