ಮೈಸೂರು: ಮುಡಾ ಪ್ರಕರಣ ಕುರಿತು ನನ್ನ ಹೋರಾಟವನ್ನು ಆರಂಭದಿಂದಲೂ ಹತ್ತಿಕ್ಕುವ ಕೆಲಸ ನಡೆಯುತ್ತ ಇದೆ. ಕೆಲವರು ನನಗೆ ಕರೆ ಮಾಡಿ ಪ್ರತಿಭಟನೆಗೆ ಸಜ್ಜುಗೊಳ್ಳುವಂತೆ ಹೇಳುತ್ತಿದ್ದಾರೆ. ನಾನು ಪ್ರತಿಭಟನೆಗೆ ಒಂದು ಕರೆ ನೀಡಿದರೆ ಸಾಕು ರಾಜ್ಯಾದ್ಯಂತ ಹೋರಾಟ ಆರಂಭವಾಗುತ್ತದೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.
ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಅವರು ನೀಡಿದ್ದ ದೂರಿನನ್ವಯ ಇಂದು ದೇವರಾಜ ಪೊಲೀಸ್ ಠಾಣೆಯ ವಿಚಾರಣೆಗೆ ಸ್ನೇಹಮಯಿ ಕೃಷ್ಣ ಹಾಜರಾಗಿದ್ದರು. ಈ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎಂ.ಲಕ್ಷ್ಮಣ್ ಹಾಗೂ ಸಿಎಂ ಸಿದ್ದರಾಮಯ್ಯ ಅವರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದರು.
ಸಿಎಂ ಸಿದ್ದರಾಮಯ್ಯ ಅವರನ್ನು ಕಂಡರೆ ಎಂ.ಲಕ್ಷ್ಮಣ್ಗೆ ಕೋಪ. ಲೋಕಸಭೆ ಚುನಾವಣೆಯಲ್ಲಿ ಸೋತ ಕಾರಣ ಆ ಸೇಡನ್ನು ತೀರಿಸಿಕೊಳ್ಳಲು ಲಕ್ಷ್ಮಣ್ ದೂರು ನೀಡಿ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ತರುತ್ತಿದ್ದಾರೆ. ಚುನಾವಣೆಯಲ್ಲಿ ತನನ್ನು ಹರಿಕೆಯ ಕುರಿ ಮಾಡಿದರು ಅಂತ ಸಿಎಂ ವಿರುದ್ದ ಕುಪಿತಗೊಂಡಿರಬಹುದು. ಆಗಾಗಿ ಸಿದ್ದರಾಮಯ್ಯಗೆ ಸಂಕಷ್ಟು ತರುತ್ತಿದ್ದಾರೆ ಎಂದು ದೂರಿದರು.
ಪೊಲೀಸರ ವಿಚಾರಣೆಗೆ ಉತ್ತರ ನೀಡಿದ್ದೇನೆ. ಈ ಪ್ರಕರಣದಲ್ಲಿ ಲಕ್ಷ್ಮಣ್ ವಿರುದ್ಧವೇ ಕೇಸ್ ಬೀಳಲಿದೆ. ತಮ್ಮ ಹೋರಾಟವನ್ನು ಮೊದಲಿನಿಂದಲೂ ಹತ್ತಿಕ್ಕುವ ಕೆಲಸ ಆಗ್ತಿದೆ. ಜಾಲತಾಣದಲ್ಲಿ ನನ್ನ ಪರ ಅಭಿಮಾನ ಆರಂಭವಾಗಿದೆ. ಕೆಲವರು ಕರೆ ಮಾಡಿ ಪ್ರತಿಭಟನೆ ಮಾಡುವಂತೆ ಮನವಿ ಮಾಡಿದ್ರು. ಒಂದೇ ಒಂದು ಕರೆ ನೀಡದರೆ ರಾಜ್ಯದ್ಯಂತ ಹೋರಾಟ ಆರಂಭವಾಗಲಿದೆ. ನಾನೇ ಯಾವುದು ಬೇಡ ಅಂತ ಸುಮ್ಮನಿದ್ದೇನೆ ಎಂದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…