ಮೈಸೂರು: ಮುಡಾ ಪ್ರಕರಣ ಕುರಿತು ನನ್ನ ಹೋರಾಟವನ್ನು ಆರಂಭದಿಂದಲೂ ಹತ್ತಿಕ್ಕುವ ಕೆಲಸ ನಡೆಯುತ್ತ ಇದೆ. ಕೆಲವರು ನನಗೆ ಕರೆ ಮಾಡಿ ಪ್ರತಿಭಟನೆಗೆ ಸಜ್ಜುಗೊಳ್ಳುವಂತೆ ಹೇಳುತ್ತಿದ್ದಾರೆ. ನಾನು ಪ್ರತಿಭಟನೆಗೆ ಒಂದು ಕರೆ ನೀಡಿದರೆ ಸಾಕು ರಾಜ್ಯಾದ್ಯಂತ ಹೋರಾಟ ಆರಂಭವಾಗುತ್ತದೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.
ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಅವರು ನೀಡಿದ್ದ ದೂರಿನನ್ವಯ ಇಂದು ದೇವರಾಜ ಪೊಲೀಸ್ ಠಾಣೆಯ ವಿಚಾರಣೆಗೆ ಸ್ನೇಹಮಯಿ ಕೃಷ್ಣ ಹಾಜರಾಗಿದ್ದರು. ಈ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎಂ.ಲಕ್ಷ್ಮಣ್ ಹಾಗೂ ಸಿಎಂ ಸಿದ್ದರಾಮಯ್ಯ ಅವರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದರು.
ಸಿಎಂ ಸಿದ್ದರಾಮಯ್ಯ ಅವರನ್ನು ಕಂಡರೆ ಎಂ.ಲಕ್ಷ್ಮಣ್ಗೆ ಕೋಪ. ಲೋಕಸಭೆ ಚುನಾವಣೆಯಲ್ಲಿ ಸೋತ ಕಾರಣ ಆ ಸೇಡನ್ನು ತೀರಿಸಿಕೊಳ್ಳಲು ಲಕ್ಷ್ಮಣ್ ದೂರು ನೀಡಿ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ತರುತ್ತಿದ್ದಾರೆ. ಚುನಾವಣೆಯಲ್ಲಿ ತನನ್ನು ಹರಿಕೆಯ ಕುರಿ ಮಾಡಿದರು ಅಂತ ಸಿಎಂ ವಿರುದ್ದ ಕುಪಿತಗೊಂಡಿರಬಹುದು. ಆಗಾಗಿ ಸಿದ್ದರಾಮಯ್ಯಗೆ ಸಂಕಷ್ಟು ತರುತ್ತಿದ್ದಾರೆ ಎಂದು ದೂರಿದರು.
ಪೊಲೀಸರ ವಿಚಾರಣೆಗೆ ಉತ್ತರ ನೀಡಿದ್ದೇನೆ. ಈ ಪ್ರಕರಣದಲ್ಲಿ ಲಕ್ಷ್ಮಣ್ ವಿರುದ್ಧವೇ ಕೇಸ್ ಬೀಳಲಿದೆ. ತಮ್ಮ ಹೋರಾಟವನ್ನು ಮೊದಲಿನಿಂದಲೂ ಹತ್ತಿಕ್ಕುವ ಕೆಲಸ ಆಗ್ತಿದೆ. ಜಾಲತಾಣದಲ್ಲಿ ನನ್ನ ಪರ ಅಭಿಮಾನ ಆರಂಭವಾಗಿದೆ. ಕೆಲವರು ಕರೆ ಮಾಡಿ ಪ್ರತಿಭಟನೆ ಮಾಡುವಂತೆ ಮನವಿ ಮಾಡಿದ್ರು. ಒಂದೇ ಒಂದು ಕರೆ ನೀಡದರೆ ರಾಜ್ಯದ್ಯಂತ ಹೋರಾಟ ಆರಂಭವಾಗಲಿದೆ. ನಾನೇ ಯಾವುದು ಬೇಡ ಅಂತ ಸುಮ್ಮನಿದ್ದೇನೆ ಎಂದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…