ಮೈಸೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತ ತನಿಖೆಗೆ ಮುಡಾ ಮಾಜಿ ಅಧ್ಯಕ್ಷ ಎಚ್.ವಿ ರಾಜೀವ್ ಬುಧವಾರ ಲೋಕಾಯುಕ್ತ ಎಸ್.ಪಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದರು.
ಮಧ್ಯಾಹ್ನ 4ರಿಂದ ಸಂಜೆ 7ರವರೆಗೆ ರಾಜೀವ್ ಅವರನ್ನು ತನಿಖಾಧಿಕಾರಿಗಳ ತಂಡವು, ಸಿಎಂ ಸಿದ್ದರಾಮಯ್ಯ ಪತ್ನಿ ಬಿ.ಎಂ ಪಾರ್ವತಿ ಅವರಿಗೆ 14 ಬದಲಿ ನಿವೇಶನ ಸೇರಿದಂತೆ 50:50 ಅನುಪಾತದಲ್ಲಿ ನಿವೇಶನಗಳ ಹಂಚಿಕೆ ಸಂಬಂಧ ವಿಚಾರಣೆಗೆ ಒಳಪಡಿಸಿತು.
ವಿಚಾರಣೆ ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ರಾಜೀವ್, ಲೋಕಾಯುಕ್ತ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸಿದ್ದೇನೆ. ಪಾರ್ವತಿ ಅವರಿಗೆ ನಿವೇಶನ ಹಂಚಿಕೆ ಮಾಡುವಂತೆ ಅಧಿಕಾರಿಗಳು ಶಿಫಾರಸ್ಸು ಮಾಡಿದ್ದರು. ಅದನ್ನು ಮುಡಾ ಸಾಮಾನ್ಯ ಸಭೆಯಲ್ಲಿಟ್ಟು ನಿರ್ಣಯ ಕೈಗೊಳ್ಳಲಾಗಿತ್ತು. ಈ ಸಂಬಂಧ ಸಿದ್ದರಾಮಯ್ಯ ನನಗೆ ಕರೆ ಮಾಡಿರಲಿಲ್ಲ. ಯಾರ ಪ್ರಭಾವ ಬೀರಿರಲಿಲ್ಲ. ಅನವಶ್ಯಕವಾಗಿ ಸಿದ್ದರಾಮಯ್ಯ ಕುಟುಂಬವನ್ನು ತೇಜೋವಧೆ ಮಾಡುವುದು ಸರಿಯಲ್ಲ ಎಂದು ಹೇಳಿದರು.
ಹಿಂದಿನಿಂದಲೂ 50:50ಅನುಪಾತದಲ್ಲಿ ಬದಲಿ ನಿವೇಶನಗಳನ್ನು ನೀಡಲಾಗಿದೆ. ಬದಲಿ ನಿವೇಶನ ಹಂಚಿಕೆ ಸರಿಯೋ, ತಪ್ಪೋ ಎಂಬುದನ್ನು ನ್ಯಾಯಲಯವೇ ನಿರ್ಧರಿಸಬೇಕು. ಯಾರೋ ಹೇಳಿದರೆ ಒಪ್ಪಲಾಗದು ಎಂದರು.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…