ಮೈಸೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತ ತನಿಖೆಗೆ ಮುಡಾ ಮಾಜಿ ಅಧ್ಯಕ್ಷ ಎಚ್.ವಿ ರಾಜೀವ್ ಬುಧವಾರ ಲೋಕಾಯುಕ್ತ ಎಸ್.ಪಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದರು.
ಮಧ್ಯಾಹ್ನ 4ರಿಂದ ಸಂಜೆ 7ರವರೆಗೆ ರಾಜೀವ್ ಅವರನ್ನು ತನಿಖಾಧಿಕಾರಿಗಳ ತಂಡವು, ಸಿಎಂ ಸಿದ್ದರಾಮಯ್ಯ ಪತ್ನಿ ಬಿ.ಎಂ ಪಾರ್ವತಿ ಅವರಿಗೆ 14 ಬದಲಿ ನಿವೇಶನ ಸೇರಿದಂತೆ 50:50 ಅನುಪಾತದಲ್ಲಿ ನಿವೇಶನಗಳ ಹಂಚಿಕೆ ಸಂಬಂಧ ವಿಚಾರಣೆಗೆ ಒಳಪಡಿಸಿತು.
ವಿಚಾರಣೆ ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ರಾಜೀವ್, ಲೋಕಾಯುಕ್ತ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸಿದ್ದೇನೆ. ಪಾರ್ವತಿ ಅವರಿಗೆ ನಿವೇಶನ ಹಂಚಿಕೆ ಮಾಡುವಂತೆ ಅಧಿಕಾರಿಗಳು ಶಿಫಾರಸ್ಸು ಮಾಡಿದ್ದರು. ಅದನ್ನು ಮುಡಾ ಸಾಮಾನ್ಯ ಸಭೆಯಲ್ಲಿಟ್ಟು ನಿರ್ಣಯ ಕೈಗೊಳ್ಳಲಾಗಿತ್ತು. ಈ ಸಂಬಂಧ ಸಿದ್ದರಾಮಯ್ಯ ನನಗೆ ಕರೆ ಮಾಡಿರಲಿಲ್ಲ. ಯಾರ ಪ್ರಭಾವ ಬೀರಿರಲಿಲ್ಲ. ಅನವಶ್ಯಕವಾಗಿ ಸಿದ್ದರಾಮಯ್ಯ ಕುಟುಂಬವನ್ನು ತೇಜೋವಧೆ ಮಾಡುವುದು ಸರಿಯಲ್ಲ ಎಂದು ಹೇಳಿದರು.
ಹಿಂದಿನಿಂದಲೂ 50:50ಅನುಪಾತದಲ್ಲಿ ಬದಲಿ ನಿವೇಶನಗಳನ್ನು ನೀಡಲಾಗಿದೆ. ಬದಲಿ ನಿವೇಶನ ಹಂಚಿಕೆ ಸರಿಯೋ, ತಪ್ಪೋ ಎಂಬುದನ್ನು ನ್ಯಾಯಲಯವೇ ನಿರ್ಧರಿಸಬೇಕು. ಯಾರೋ ಹೇಳಿದರೆ ಒಪ್ಪಲಾಗದು ಎಂದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…