ಮೈಸೂರು : ಮುಡಾ ನಿವೇಶನದ ಶೇ ೨೫ ಮೊತ್ತದ ದಂಡವನ್ನ ತಪ್ಪಿಸಲು ಮಾಜಿ ಸಂಸದ ಪ್ರತಾಪ್ ಸಿಂಹ ವಾಮಮಾರ್ಗ ಅನುಸರಿಸಿದ್ದಾರೆಂದು ಮುಡಾ ಅಧ್ಯಕ್ಷ ಕೆ.ಮರಿಗೌಡ ಗಂಭೀರ ಆರೋಪ ಮಾಡಿದ್ದಾರೆ.
ಮುಡಾ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾತನಾಡಿದ್ದಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ಅವರ ವಿರುದ್ಧ ಪ್ರತಾಪ್ ಸಿಂಹ ಮಾಡಿರುವ ಆರೋಪಗಳೆಲ್ಲಾ ಸತ್ಯಕ್ಕೆ ದೂರವಾಗಿದೆ. ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ , ಈ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡಲ್ಲ. ಆದರೆ ಮಾಜಿ ಸಂಸದ ಪ್ರತಾಪ ಸಿಂಹ ತಮ್ಮ ಪತ್ನಿಯ ಹೆಸರಿನಲ್ಲಿ ಜಿ ಕ್ಯಾಟೆಗೆರಿಯಲ್ಲಿ ನಿವೇನ ಪಡೆದಿದ್ದಾರೆ. ಸದರಿ ನಿವೇಶನದಲ್ಲಿ ಮನೆ ನಿರ್ಮಿಸಬೇಕಾಗಿರುತ್ತದೆ. ತಪ್ಪಿದಲ್ಲಿ ಶೇ.೨೫ ರಷ್ಟು ನಿವೇಶನ ಮೌಲ್ಯದ ದಂಡ ಕಟ್ಟಬೇಕು. ಆದರೆ ಪ್ರತಾಪ್ ಸಿಂಹ ಮನೆ ನಿರ್ಮಿಸದೇ ಕೇವಲ ಶೀಟಿನ ರೂಮನ್ನೇ ಮನೆ ಎಂದು ಬಿಂಬಿಸಿ ದಂಡದಿಂದ ತಪ್ಪಿಸಿಕೊಳ್ಳಲು ವಾಮಮಾರ್ಗ ಅನುಸರಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಅಲ್ಲದೆ ೯-೮- ೨೦೨೦ ರಂದು ನಕ್ಷೆ ಮಂಜೂರಾತಿ ಪಡೆದು ನಿವೇಶನದಲ್ಲಿ ಎಸಿ ಶೀಟಿನ ರೂಮ್ ಮಾತ್ರ ನಿರ್ಮಿಸಿದ್ದಾರೆ. ಬಳಿಕ ಅಕ್ಟೋಬರ್ ೪ ೨೦೨೧ ರಂದು ಎಸಿ ಶೀಟಿನ ರೂಮ್ ಅನ್ನೆ ಮನೆ ಎಂದು ಬಿಂಬಿಸಿ ಕಟ್ಟಡ ಪೂರ್ಣಗೊಂಡ ವರದಿ ಪಡೆದಿದ್ದಾರೆ. ಆ ನಂತರ ಸದರಿ ಕಟ್ಟಡ ಮನೆ ಕಂದಾಯವನ್ನು ಅಕ್ಟೋಬರ್ ೨೧ ೨೦೨೧ ರಂದು ನಿಗದಿಪಡಿಸಿ ೧೦-೧೧-೩೧ ರಂದು ಕ್ರಯ ಪತ್ರ ಪಡೆದಿದ್ದಾರೆ. ಸದರಿ ಕಟ್ಟಡದ ಬಗ್ಗೆ ದೂರು ಸ್ವೀಕೃತವಾದ ಹಿನ್ನೆಲೆ ಈ ಹಿಂದೆ ನೀಡಲಾದ ಕಟ್ಟಡ ಪೂರ್ಣಗೊಂಡ ವರದಿಯನ್ನು ಸೆಪ್ಟೆಂಬರ್ ೨೭ ೨೦೨೩ ರಲ್ಲಿ ಮುಡಾ ರದ್ದು ಮಾಡಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…
ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…
ಮೈಸೂರಿನ ಶಾರದಾದೇವಿ ನಗರದಲ್ಲಿ ಹೊಸ ಬಸ್ ನಿಲ್ದಾಣವನ್ನು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಈ ಬಸ್…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ರಾಷ್ಟ್ರೀಯ ಸ್ವಯಂ ಸೇವಾ ಸಂಘವು ಆರಂಭವಾಗಿ ನೂರು ವರ್ಷ ತುಂಬಿದ ಸ್ಮರಣಾರ್ಥವಾಗಿ ಸಂಘದ ಉದ್ದೇಶ…
ಅಕ್ಷತಾ ‘ಹವ್ಯಾಸ ಮನುಷ್ಯನ ಕನಸುಗಳಿಗೆ ಗರಿ ಮೂಡಿಸುತ್ತದೆ. ಕನಸು ಕಾಣುವ ವ್ಯಕ್ತಿಗೆ ಅವಕಾಶಗಳ ದಾರಿ ತೆರೆದುಕೊಳ್ಳುತ್ತವೆ’ ಇದು ಬೆಂಗಳೂರಿನಲ್ಲಿ ನೆಲೆಸಿರುವ…
ಸಿರಿ ಮೈಸೂರು ಆ ದಿನ ನಾನು ಸಾಮಾನ್ಯವಾಗಿ ಹೋಗದಂತಹ ಒಂದು ಅಪರೂಪದ ಸ್ಥಳಕ್ಕೆ ಹೋಗಿದ್ದೆ. ಮೈಸೂರಿನಿಂದ ಐದಾರು ಗಂಟೆಗಳ ಪ್ರಯಾಣದ…