ಮೈಸೂರು

ಮುಡಾ ನಿವೇಶನದ ದಂಡ ತಪ್ಪಿಸಲು ಪ್ರತಾಪ್ ಸಿಂಹ ವಾಮಮಾರ್ಗ ಅನುಸರಿಸಿದ್ದಾರೆ – ಕೆ.ಮರೀಗೌಡ ಆರೋಪ

ಮೈಸೂರು : ಮುಡಾ ನಿವೇಶನದ ಶೇ ೨೫ ಮೊತ್ತದ ದಂಡವನ್ನ ತಪ್ಪಿಸಲು ಮಾಜಿ ಸಂಸದ ಪ್ರತಾಪ್‌ ಸಿಂಹ ವಾಮಮಾರ್ಗ ಅನುಸರಿಸಿದ್ದಾರೆಂದು ಮುಡಾ ಅಧ್ಯಕ್ಷ ಕೆ.ಮರಿಗೌಡ ಗಂಭೀರ ಆರೋಪ ಮಾಡಿದ್ದಾರೆ.

ಮುಡಾ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾತನಾಡಿದ್ದಕ್ಕೆ ಮಾಜಿ ಸಂಸದ ಪ್ರತಾಪ್‌ ಸಿಂಹಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ಅವರ ವಿರುದ್ಧ ಪ್ರತಾಪ್‌ ಸಿಂಹ ಮಾಡಿರುವ ಆರೋಪಗಳೆಲ್ಲಾ ಸತ್ಯಕ್ಕೆ ದೂರವಾಗಿದೆ. ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ , ಈ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡಲ್ಲ. ಆದರೆ ಮಾಜಿ ಸಂಸದ ಪ್ರತಾಪ ಸಿಂಹ ತಮ್ಮ ಪತ್ನಿಯ ಹೆಸರಿನಲ್ಲಿ ಜಿ ಕ್ಯಾಟೆಗೆರಿಯಲ್ಲಿ ನಿವೇನ ಪಡೆದಿದ್ದಾರೆ. ಸದರಿ ನಿವೇಶನದಲ್ಲಿ  ಮನೆ ನಿರ್ಮಿಸಬೇಕಾಗಿರುತ್ತದೆ. ತಪ್ಪಿದಲ್ಲಿ ಶೇ.೨೫ ರಷ್ಟು ನಿವೇಶನ ಮೌಲ್ಯದ ದಂಡ ಕಟ್ಟಬೇಕು. ಆದರೆ ಪ್ರತಾಪ್‌ ಸಿಂಹ ಮನೆ ನಿರ್ಮಿಸದೇ ಕೇವಲ ಶೀಟಿನ ರೂಮನ್ನೇ ಮನೆ ಎಂದು ಬಿಂಬಿಸಿ ದಂಡದಿಂದ ತಪ್ಪಿಸಿಕೊಳ್ಳಲು ವಾಮಮಾರ್ಗ ಅನುಸರಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಅಲ್ಲದೆ ೯-೮- ೨೦೨೦ ರಂದು ನಕ್ಷೆ ಮಂಜೂರಾತಿ ಪಡೆದು ನಿವೇಶನದಲ್ಲಿ ಎಸಿ ಶೀಟಿನ ರೂಮ್‌ ಮಾತ್ರ ನಿರ್ಮಿಸಿದ್ದಾರೆ. ಬಳಿಕ ಅಕ್ಟೋಬರ್‌ ೪ ೨೦೨೧ ರಂದು ಎಸಿ ಶೀಟಿನ ರೂಮ್‌ ಅನ್ನೆ ಮನೆ ಎಂದು ಬಿಂಬಿಸಿ ಕಟ್ಟಡ ಪೂರ್ಣಗೊಂಡ ವರದಿ ಪಡೆದಿದ್ದಾರೆ. ಆ ನಂತರ ಸದರಿ ಕಟ್ಟಡ ಮನೆ ಕಂದಾಯವನ್ನು ಅಕ್ಟೋಬರ್‌ ೨೧ ೨೦೨೧ ರಂದು ನಿಗದಿಪಡಿಸಿ ೧೦-೧೧-೩೧ ರಂದು ಕ್ರಯ ಪತ್ರ ಪಡೆದಿದ್ದಾರೆ. ಸದರಿ ಕಟ್ಟಡದ ಬಗ್ಗೆ ದೂರು ಸ್ವೀಕೃತವಾದ ಹಿನ್ನೆಲೆ ಈ ಹಿಂದೆ ನೀಡಲಾದ ಕಟ್ಟಡ ಪೂರ್ಣಗೊಂಡ ವರದಿಯನ್ನು ಸೆಪ್ಟೆಂಬರ್‌ ೨೭  ೨೦೨೩ ರಲ್ಲಿ ಮುಡಾ ರದ್ದು ಮಾಡಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

1 hour ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

1 hour ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

2 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

2 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

2 hours ago