ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿವೇಶನ ಹಂಚಿಕೆಯಲ್ಲಿ ನಡೆದಿರುವ ನೂರಾರು ಕೋಟಿ ರೂ. ಗಳ ಹಗರಣ ಬಗ್ಗೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಇಂದು(ಜೂ.30) ಕರ್ನಾಟಕ ಸೇನಾಪಡೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಮುಡಾ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಕೋಟ್ಯಂತರ ರೂಪಾಯಿ ಹಗರಣ ಮಾಡಿರುವ ಮುಡ ಆಯುಕ್ತರ ಕ್ರಮ ಖಂಡಿಸಿ ಆಕ್ರೋಶ ಹೊರಹಾಕಿದರು. ಜತೆ ಆಯುಕ್ತರನ್ನು ಈ ಕೂಡಲೇ ಬಂಧಿಸಿ ಎಂದು ಒತ್ತಾಯಿಸಿದರು.
ಸುಮಾರು ನಾಲ್ಕರಿಂದ ಐದು ಸಾವಿರಕ್ಕೂ ಹೆಚ್ಚು ನಿವೇಶನಗಳನ್ನು ಅಕ್ರಮವಾಗಿ ಹಂಚಿ, ಮೈಸೂರಿನ ಇತಿಹಾಸದಲ್ಲಿಯೇ ಭಾರೀ ಪ್ರಮಾಣದ ಭೂ ದರೋಡೆ ಮಾಡಿರುವುದು ಮುಡಾದಲ್ಲಿ ಬೆಳಕಿಗೆ ಬಂದಿರುವುದು ಅತ್ಯಂತ ಖಂಡನೀಯ. ಬದಲಿ ನಿವೇಶನ ನೀಡದಂತೆ ಎರಡು ವರ್ಷದ ಹಿಂದೆಯೇ ಸರ್ಕಾರ ಆದೇಶ ಮಾಡಿದೆ. ಬದಲಿ ನಿವೇಶನದ ಬಗ್ಗೆ ಅತಿ ಅಗತ್ಯ ಬಿದ್ದರೆ ಮಾತ್ರ ಸರ್ಕಾರದ ಅನುಮತಿ ಪಡೆದು ಹಂಚಿಕೆಗೆ ತಾಕೀತು ಮಾಡಿದೆ. ಸರ್ಕಾರದ ನಿಯಮಗಳನ್ನು ಉಲ್ಲಂಘನೆ ಮಾಡಿ ನಿಯಮ ಬಾಹಿರವಾಗಿ ಬದಲಿ ನಿವೇಶನ ಹಂಚಿಕೆ ಮಾಡಿ ಸುಮಾರು 3 ಸಾವಿರ ಕೋಟಿ ಹಗರಣ ಮಾಡಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಸರ್ಕಾರ ಈ ಬಗ್ಗೆ ಕೂಡಲೇ ತನಿಖೆ ಮಾಡಿ, ತಪ್ಪಿತಸ್ಥರನ್ನು ಜೈಲಿಗೆ ಕಳುಹಿಸಬೇಖು. ಜೊತೆಗೆ ಅಕ್ರಮ ಮಾರಾಟ ಮಾಡಿ ಬದಲಿ ನಿವೇಶನ ನೀಡಿರುವ ನಿವೇಶನಗಳನ್ನು ಹಿಂಪಡೆಯಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಕರ್ನಾಟಕ ಸೇನಾಪಡೆ ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ, ಪಧಾಧಿಕಾರಿಗಳಾದ ಪ್ರಭುಶಂಕರ್, ಎಂ ಬಿ, ಕೃಷ್ಣಪ್ಪ, ಕುಮಾರ್ ಗೌಡ, ಶಿವಲಿಂಗಯ್ಯ, ಅಂಬಾ ಅರಸ್, ನೇಹಾ, ಮಂಜುಳಾ, ಭಾಗ್ಯಮ್ಮ, ನಾರಾಯಣಗೌಡ, ಪರಿಸರ ಚಂದ್ರು, ವಿಜಯೇಂದ್ರ, ಆನಂದ್, ರಾಮಕೃಷ್ಣ, ರವಿ ಒಲಂಪಿಯ, ರಾಧಾಕೃಷ್ಣ, ಅಕ್ಬರ್, ರವೀಶ್, ಸ್ವಾಮಿ ಗೌಡ, ಆರ್ ಮಹದೇವ್, ದರ್ಶನ್ ಗೌಡ, ಪ್ರದೀಪ್, ದಿನೇಶ್, ರಘು ಅರಸ್, ವಿಷ್ಣು, ಬಸವರಾಜು, ಹನುಮಂತಯ್ಯ, ರಮೇಶ್, ಗಣೇಶ್, ಶಿವನಾಯಕ್, ಹಾಗೂ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…