ಮೈಸೂರು

ಮೃತ ವ್ಯಕ್ತಿಯ ಆಸ್ತಿ ಕಬಳಿಕೆ ಆರೋಪ ; ಮುಡಾ ಅಧಿಕಾರಿ ಅಮಾನತು

ಮೈಸೂರು: ಮೃತ ವ್ಯಕ್ತಿಯ ಹೆಸರಿನಲ್ಲಿದ್ದ ಮನೆಯನ್ನು ಲಪಟಾಯಿಸಲು ನಕಲಿ ದಾಖಲೆ ಸೃಷ್ಟಿಸಲು ವಂಚಕನ ಜೊತೆ ಕೈ ಜೋಡಿಸಿದ ಆರೋಪದ ಮೇಲೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ವ್ಯವಸ್ಥಾಪಕ ಸೋಮಸುಂದ್ರು ಅವರನ್ನು ಅಮಾನತ್ತು ಮಾಡಿ ಮುಡಾ ಆಯುಕ್ತ ಎ.ಎನ್.ರಘುನಂದನ್ ಆದೇಶ ಹೊರಡಿಸಿದ್ದಾರೆ.

ಆರ್‌ಟಿಜಿ ಕಾರ್ಯಕರ್ತ ಬಿ.ಎನ್.ನಾಗೇಂದ್ರ ದಾಖಲೆ ಸಮೇತ ನೀಡಿದ ದೂರಿನ ಹಿನ್ನಲೆ ಪರಿಶೀಲನೆ ನಡೆಸಿದ ಕಾರ್ಯದರ್ಶಿ ಪ್ರಸನ್ನ ಕುಮಾರ್ ನೀಡಿದ ವರದಿ ಆಧಾರದ ಮೇಲೆ ಆಯುಕ್ತರು ಈ ಕ್ರಮ ಕೈಗೊಂಡಿದ್ದಾರೆ.

ಗೋಕುಲಂ 3ನೇ ಹಂತ ಬಡಾವಣೆಯ ಮಾದರಿ ಮನೆ ನಂ 867 ರ 30*40 ವಿಸ್ತೀರ್ಣದ ಸ್ವತ್ತು ಲಿಲಿಯನ್ ಶಾರದಾ ಜೋಸೆಫ್ ರವರಿಗೆ 2-11-1982 ರಲ್ಲಿ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಿಂದ ಮಂಜೂರಾಗಿದ್ದು ಕರಾರು ಪತ್ರ ನೀಡಲಾಗಿದೆ. ಆದರೆ, ಹಕ್ಕುಪತ್ರ ವಿತರಣೆ ಆಗಿರುವುದಿಲ್ಲ. ಲಿಲಿಯನ್ ಶಾರದಾ ಜೋಸೆಫ್ ಅವರು 3-9-1983 ರಂದು ಮರಣ ಹೊಂದಿರುತ್ತಾರೆ. ಈ ಸ್ವತ್ತು 6-4-2025ರವರೆಗೂ ಪ್ರಾಧಿಕಾರದಿಂದ ಯಾರಿಗೂ ವರ್ಗಾವಣೆ ಆಗಿರುವುದಿಲ್ಲ. 26-03-2024 ರಂದು ಲಿಲಿಯನ್ ಶಾರದಾ ಜೋಸೆಫ್ ರವರ ಕ್ರಮಬದ್ದ ವಾರಸುದಾರರಲ್ಲದ ವ್ಯಕ್ತಿಗೆ ಅಂದರೆ ನೆವಿಲ್ ಮಾರ್ಕಸ್ ಜೋಸೆಫ್‌ಗೆ ಪೌತಿ ಖಾತೆ ಮಾಡಿಕೊಟ್ಟು ಗೋಲ್‌ಮಾಲ್ ನಡೆದಿದೆ. ಕ್ರಮಬದ್ದವಾಗಿ ವಂಶವೃಕ್ಷ ಪಡೆಯದೆ ನಕಲಿ ದಾಖಲೆ ಸೃಷ್ಟಿಸಿ ನಕಲಿ ವಾರಸುದಾರರಿಗೆ ಪೌತಿಖಾತೆ ಮಾಡಲಾಗಿದೆ. ಪೌತಿಖಾತೆ ಮಾಡಲು ಮನಸೋ ಇಚ್ಛೆ ಕಚೇರಿ ಟಿಪ್ಪಣಿಗಳನ್ನು ಸೃಷ್ಟಿಸಲಾಗಿದೆ. ಅಲ್ಲದೇ ಬಿಟ್ ಆಫ್ ಲ್ಯಾಂಡ್ ಸಹ ಮಂಜೂರು ಮಾಡಿ ಹಕ್ಕುಪತ್ರ ನೀಡಿದ್ದಾರೆ. ಅಕ್ರಮವಾಗಿ ಪಡೆದ ಮನೆಗೆ ನೆವಿಲ್ ಮಾರ್ಕಸ್ ಜೋಸೆಫ್ ರವರು ಈಗಾಗಲೇ ವಲಯ ಕಚೇರಿ ೪ರಲ್ಲಿ ಖಾತೆ ಮಾಡಿಸಿಕೊಂಡು ಮಮತ ಹಾಗೂ ಶ್ಯಾಂ ಎಂಬುವರಿಗೆ ಕೋಟ್ಯಾಂತರ ರೂ.ಗಳಿಗೆ ಮಾರಾಟ ಮಾಡಿದ್ದಾರೆ.

ಈ ಅಕ್ರಮದ ಬಗ್ಗೆ ಬಿ.ಎನ್.ನಾಗೇಂದ್ರ ರವರು ಲೋಕಾಯುಕ್ತ ಹಾಗೂ ಮುಡಾ ಆಯುಕ್ತರಿಗೆ ದೂರು ನೀಡಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು. ದಾಖಲೆಗಳನ್ನು ಪರಿಶೀಲಿಸಿದಾಗ ವ್ಯವಸ್ಥಾಪಕ ಸೋಮಸುಂದ್ರು ಹಾಗೂ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ರವರು ನಿವೇಶನಕ್ಕೆ ಆಯುಕ್ತರ ಆದೇಶ ಮೀರಿ ತಮ್ಮ ಹಂತದಲ್ಲಿಯೇ ತಿದ್ದುಪಡಿ ಕ್ರಯಪತ್ರ ನೀಡಿ ಅಽಕಾರ ದುರುಪಯೋಗ ಮಾಡಿಕೊಂಡಿರುವುದು ಸಾಬೀತಾಗಿದೆ. ತಪ್ಪೆಸಗಿದ ಅಽಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಮುಡಾ ಕಾರ್ಯದರ್ಶಿ ಪ್ರಸನ್ನಕುಮಾರ್ ರವರು ಆಯುಕ್ತರಿಗೆ ನೀಡಿರುವ ವರದಿ ಆಧಾರದ ಮೇಲೆ ಸೋಮಸುಂದ್ರು ಅವರನ್ನು ಅಮಾನತ್ತುಗೊಳಿಸಲಾಗಿದೆ. ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಮುಡಾ ಆಯುಕ್ತರು ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಂಡೀಪುರದಲ್ಲಿ ಏಪ್ರಿಲ್.1ರಿಂದ ಅರಣ್ಯ ಸಿಬ್ಬಂದಿ ಮುಷ್ಕರ: ಕಾರಣ ಇಷ್ಟೇ

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಏಪ್ರಿಲ್.‌1ರಿಂದ ವನ್ಯಜೀವಿ ವಿಭಾಗದ ಹಂಗಾಮಿ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಕುರಿತು ದಿನಗೂಲಿ…

30 mins ago

ಸಂಸದ ಯದುವೀರ್ ಒಡೆಯರ್ ಹುಟ್ಟುಹಬ್ಬದಂದು ‘ರಂಗೋಲಿ’ ಶುಭಾಶಯ

ಮೈಸೂರು: ಇಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರ ಹುಟ್ಟುಹಬ್ಬದ ಅಂಗವಾಗಿ ಮೈಸೂರಿನಲ್ಲಿ ಸಂಭ್ರಮ ಮನೆಮಾಡಿದೆ. ಅರಮನೆಯ…

44 mins ago

ಮಾರ್ಚ್.‌28ರಂದು ಐಪಿಎಲ್‌ ಉದ್ಘಾಟನಾ ಪಂದ್ಯ: ಆನ್‌ಲೈನ್‌ನಲ್ಲಿ ಮಾತ್ರ ಟಿಕೆಟ್‌ ಬುಕ್ಕಿಂಗ್‌

ಬೆಂಗಳೂರು: ಮಾರ್ಚ್.‌28ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್‌ ಉದ್ಘಾಟನಾ ಪಂದ್ಯ ನಡೆಯಲಿದೆ. ಈ ಬಗ್ಗೆ ಮಾತನಾಡಿದ ಕಮಿಷನರ್‌ ಸೀಮಂತ್‌ ಕುಮಾರ್‌…

50 mins ago

ಇಂದು ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಚಾಲನೆ

ಬೆಂಗಳೂರು: 11 ದಿನಗಳ ಕಾಲ ನಡೆಯುವ ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಇಂದು ಚಾಲನೆ ಸಿಗಲಿದೆ. ಇಂದು ಸಂಜೆ ತಿಗಳರಪೇಟೆಯ…

2 hours ago

ವಿಧಾನಮಂಡಲ ಅಧಿವೇಶನ ಒಂದು ದಿನ ಮೊಟಕು.?

ಬೆಂಗಳೂರು: ವಿಧಾನಮಂಡಲ ಅಧಿವೇಶನವನ್ನು ಒಂದು ದಿನ ಮೊಟಕುಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಾರ್ಚ್.‌27ರವರೆಗೆ ನಡೆಯಬೇಕಿದ್ದ ವಿಧಾನಮಂಡಲ ಅಧಿವೇಶನ ಮಾರ್ಚ್.‌26ರಂದು ಕೊನೆಗೊಳ್ಳಲಿದೆ.…

2 hours ago

ಕೊಲಂಬಿಯಾದಲ್ಲಿ 125 ಸೈನಿಕರಿದ್ದ ಮಿಲಿಟರಿ ವಿಮಾನ ಪತನ: 66 ಮಂದಿ ದುರ್ಮರಣ

ಬೊಗೋಟಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕಾಫ್‌ ಕೆಲ ಸಮಯದಲ್ಲಿ ಪತನಗೊಂಡು 66 ಜನರು ಸಾವನ್ನಪ್ಪಿರುವ ಘಟನೆ ಕೊಲಂಬಿಯಾದಲ್ಲಿ…

3 hours ago