ಮೈಸೂರು: ಮೃತ ವ್ಯಕ್ತಿಯ ಹೆಸರಿನಲ್ಲಿದ್ದ ಮನೆಯನ್ನು ಲಪಟಾಯಿಸಲು ನಕಲಿ ದಾಖಲೆ ಸೃಷ್ಟಿಸಲು ವಂಚಕನ ಜೊತೆ ಕೈ ಜೋಡಿಸಿದ ಆರೋಪದ ಮೇಲೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ವ್ಯವಸ್ಥಾಪಕ ಸೋಮಸುಂದ್ರು ಅವರನ್ನು ಅಮಾನತ್ತು ಮಾಡಿ ಮುಡಾ ಆಯುಕ್ತ ಎ.ಎನ್.ರಘುನಂದನ್ ಆದೇಶ ಹೊರಡಿಸಿದ್ದಾರೆ.
ಆರ್ಟಿಜಿ ಕಾರ್ಯಕರ್ತ ಬಿ.ಎನ್.ನಾಗೇಂದ್ರ ದಾಖಲೆ ಸಮೇತ ನೀಡಿದ ದೂರಿನ ಹಿನ್ನಲೆ ಪರಿಶೀಲನೆ ನಡೆಸಿದ ಕಾರ್ಯದರ್ಶಿ ಪ್ರಸನ್ನ ಕುಮಾರ್ ನೀಡಿದ ವರದಿ ಆಧಾರದ ಮೇಲೆ ಆಯುಕ್ತರು ಈ ಕ್ರಮ ಕೈಗೊಂಡಿದ್ದಾರೆ.
ಗೋಕುಲಂ 3ನೇ ಹಂತ ಬಡಾವಣೆಯ ಮಾದರಿ ಮನೆ ನಂ 867 ರ 30*40 ವಿಸ್ತೀರ್ಣದ ಸ್ವತ್ತು ಲಿಲಿಯನ್ ಶಾರದಾ ಜೋಸೆಫ್ ರವರಿಗೆ 2-11-1982 ರಲ್ಲಿ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಿಂದ ಮಂಜೂರಾಗಿದ್ದು ಕರಾರು ಪತ್ರ ನೀಡಲಾಗಿದೆ. ಆದರೆ, ಹಕ್ಕುಪತ್ರ ವಿತರಣೆ ಆಗಿರುವುದಿಲ್ಲ. ಲಿಲಿಯನ್ ಶಾರದಾ ಜೋಸೆಫ್ ಅವರು 3-9-1983 ರಂದು ಮರಣ ಹೊಂದಿರುತ್ತಾರೆ. ಈ ಸ್ವತ್ತು 6-4-2025ರವರೆಗೂ ಪ್ರಾಧಿಕಾರದಿಂದ ಯಾರಿಗೂ ವರ್ಗಾವಣೆ ಆಗಿರುವುದಿಲ್ಲ. 26-03-2024 ರಂದು ಲಿಲಿಯನ್ ಶಾರದಾ ಜೋಸೆಫ್ ರವರ ಕ್ರಮಬದ್ದ ವಾರಸುದಾರರಲ್ಲದ ವ್ಯಕ್ತಿಗೆ ಅಂದರೆ ನೆವಿಲ್ ಮಾರ್ಕಸ್ ಜೋಸೆಫ್ಗೆ ಪೌತಿ ಖಾತೆ ಮಾಡಿಕೊಟ್ಟು ಗೋಲ್ಮಾಲ್ ನಡೆದಿದೆ. ಕ್ರಮಬದ್ದವಾಗಿ ವಂಶವೃಕ್ಷ ಪಡೆಯದೆ ನಕಲಿ ದಾಖಲೆ ಸೃಷ್ಟಿಸಿ ನಕಲಿ ವಾರಸುದಾರರಿಗೆ ಪೌತಿಖಾತೆ ಮಾಡಲಾಗಿದೆ. ಪೌತಿಖಾತೆ ಮಾಡಲು ಮನಸೋ ಇಚ್ಛೆ ಕಚೇರಿ ಟಿಪ್ಪಣಿಗಳನ್ನು ಸೃಷ್ಟಿಸಲಾಗಿದೆ. ಅಲ್ಲದೇ ಬಿಟ್ ಆಫ್ ಲ್ಯಾಂಡ್ ಸಹ ಮಂಜೂರು ಮಾಡಿ ಹಕ್ಕುಪತ್ರ ನೀಡಿದ್ದಾರೆ. ಅಕ್ರಮವಾಗಿ ಪಡೆದ ಮನೆಗೆ ನೆವಿಲ್ ಮಾರ್ಕಸ್ ಜೋಸೆಫ್ ರವರು ಈಗಾಗಲೇ ವಲಯ ಕಚೇರಿ ೪ರಲ್ಲಿ ಖಾತೆ ಮಾಡಿಸಿಕೊಂಡು ಮಮತ ಹಾಗೂ ಶ್ಯಾಂ ಎಂಬುವರಿಗೆ ಕೋಟ್ಯಾಂತರ ರೂ.ಗಳಿಗೆ ಮಾರಾಟ ಮಾಡಿದ್ದಾರೆ.
ಈ ಅಕ್ರಮದ ಬಗ್ಗೆ ಬಿ.ಎನ್.ನಾಗೇಂದ್ರ ರವರು ಲೋಕಾಯುಕ್ತ ಹಾಗೂ ಮುಡಾ ಆಯುಕ್ತರಿಗೆ ದೂರು ನೀಡಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು. ದಾಖಲೆಗಳನ್ನು ಪರಿಶೀಲಿಸಿದಾಗ ವ್ಯವಸ್ಥಾಪಕ ಸೋಮಸುಂದ್ರು ಹಾಗೂ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ರವರು ನಿವೇಶನಕ್ಕೆ ಆಯುಕ್ತರ ಆದೇಶ ಮೀರಿ ತಮ್ಮ ಹಂತದಲ್ಲಿಯೇ ತಿದ್ದುಪಡಿ ಕ್ರಯಪತ್ರ ನೀಡಿ ಅಽಕಾರ ದುರುಪಯೋಗ ಮಾಡಿಕೊಂಡಿರುವುದು ಸಾಬೀತಾಗಿದೆ. ತಪ್ಪೆಸಗಿದ ಅಽಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಮುಡಾ ಕಾರ್ಯದರ್ಶಿ ಪ್ರಸನ್ನಕುಮಾರ್ ರವರು ಆಯುಕ್ತರಿಗೆ ನೀಡಿರುವ ವರದಿ ಆಧಾರದ ಮೇಲೆ ಸೋಮಸುಂದ್ರು ಅವರನ್ನು ಅಮಾನತ್ತುಗೊಳಿಸಲಾಗಿದೆ. ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಮುಡಾ ಆಯುಕ್ತರು ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…