ಮೈಸೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ತಿರುವು ಸಿಕ್ಕಿದ್ದು ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ದ ಇದೀಗ ಮತ್ತೊಂದು ಕೇಸ್ ದಾಖಲಾಗಿದೆ.
ಮುಡಾ ಪ್ರಕರಣದಲ್ಲಿ ಈಗಾಗಲೇ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿ ತನಿಖಾ ವರದಿ ಸಲ್ಲಿಸಿದ್ದಾರೆ. ಅಲ್ಲದೇ ಸಿಬಿಐ ತನಿಖೆಗೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ಈಗಾಗಲೇ ಹೈಕೋರ್ಟ್ ಡಿಸೆಂಬರ್.10ಕ್ಕೆ ಮುಂದೂಡಿದೆ. ಈ ಮಧ್ಯೆಯೇ ಜಮುನಾ ಅವರು ಸಿಎಂ ಕುಟುಂಬದ ವಿರುದ್ಧ ನೀಡಿ ಪ್ರಕರಣಕ್ಕೆ ಮತ್ತೊಂದು ತಿರುವು ಪಡೆಯುವಂತೆ ಮಾಡಿದ್ದಾರೆ.
ಮುಡಾ ಪ್ರಕರಣದ 50:50 ಅನುಪಾತದ ಬದಲಿ ನಿವೇಶನಗಳ ಸಂಬಂಧ ತಮ್ಮ ಗಮನಕ್ಕೆ ತರದೆ ಭೂಮಿಯನ್ನು ಮಾರಾಟ ಮಾಡಲಾಗಿದೆ ಎಂದು ಆರೋಪಿಸಿ A4 ಆರೋಪಿಯಾಗಿರುವ ಜೆ.ದೇವರಾಜು ಅವರ ಅಣ್ಣ ಮೈಲಾರಯ್ಯ ಅವರ ಮಗಳು ಜಮುನಾ ಎಂಬುವವರು ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ ವಿರುದ್ಧ ಮೈಸೂರಿನ 7ನೇ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ.
ಕೆಸರೆ ಗ್ರಾಮದ ಸರ್ವೆ ನಂಬರ್ ಸರ್ವೆ ನಂ.464ರ 3.16 ಎಕರೆ ಭೂಮಿ ಇದಾಗಿದ್ದು, ಸಿಎಂ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ವಿರುದ್ಧ ಕೂಡ ಪ್ರಕರಣ ದಾಖಲಿಸಿದ್ದಾರೆ. ಜಮೀನಿನಲ್ಲಿ ನಮಗೂ ಭಾಗ ಬರಬೇಕು. ಪಿತ್ರಾರ್ಜಿತ ಆಸ್ತಿಯಲ್ಲಿ ನನಗೂ ಪಾಲು ಕೊಡಿ ಎಂದು ದಾವೆಯಲ್ಲಿ ಉಲ್ಲೇಖಿಸಿದ್ದಾರೆ.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…