ಮೈಸೂರು: ದಲಿತ ಕುಟುಂಬದಿಂದ ಜಮೀನು ಪಡೆದ ಸಿದ್ದರಾಮಯ್ಯ ಹಾಗೂ ಇದಕ್ಕೆ ಸಹಕರಿಸಿದ ಅಧಿಕಾರಿಗಳ ವಿರುದ್ಧ ದಲಿತ ದೌರ್ಜನ್ಯ ಕಾಯ್ದೆಯಡಿ ದೂರು ದಾಖಲಿಸುವಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ.
ದಲಿತರಿಗೆ ಹಾಗೂ ಜಮೀನು ಮಾಲೀಕ ನಿಂಗ ಎಂಬುವವರ ಕುಟುಂಬಕ್ಕೆ ವಂಚನೆ ಮಾಡಿ, ಅವರಿಗೆ ಸೇರಬೇಕಾದ ಕೋಟ್ಯಾಂತರ ರೂ. ಬೆಲೆ ಬಾಳುವ ನಿವೇಶನವನ್ನು ತಮ್ಮ ಪತ್ನಿ ಪಾರ್ವತಿ ಹೆಸರಿಗೆ ಪಡೆದುಕೊಳ್ಳುವ ಮೂಲಕ ಸಿದ್ದರಾಮಯ್ಯ ಅವರ ಕುಟುಂಬ ದಲಿತರಿಗೆ ವಂಚಿಸಿದೆ. ಹೀಗಾಗಿ ಸಿದ್ದರಾಮಯ್ಯ ಅವರ ಮೇಲೆ ದಲಿತ ದೌರ್ಜನ್ಯ ಕಾಯ್ದೆಯಡಿ ದೂರು ದಾಖಲಿಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಜಮೀನಿಗೆ ಸಂಬಂಧಿಸದ ಹಾಗೂ ಆ ಜಮೀನಿಗೆ ಯಾವುದೇ ಹಕ್ಕು ಬಾಧ್ಯತೆಗೆ ಒಳಪಡದವರಿಂದ ಸಿದ್ದರಾಮಯ್ಯ ಅವರ ಭಾಮೈದ ಮಲ್ಲಿಕಾರ್ಜುನ ಜಮೀನು ಬರೆಸಿಕೊಂಡಿದ್ದಾರೆ. ಅಲ್ಲದೇ ನಿಯಮ ಬಾಹಿರವಾಗಿ ದಲಿತರ ಜಮೀನನ್ನು ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ದಾನಪತ್ರ ಸೃಷ್ಟಿಸಿ ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ದಲಿತ ಕುಟುಂಬ ಹಾಗೂ ಮೂಲ ಜಮೀನಿನ ಮಾಲೀಕನಿಗೆ ಅನ್ಯಾಯವಾಗಿದೆ. ನಿಯಮ ಉಲ್ಲಂಘಿಸಿ ದಲಿತರಿಗೆ ಅನ್ಯಾಯ ಮಾಡಿರುವುದರಿಂದ ಸಿದ್ದರಾಮಯ್ಯ, ಬಾಮೈದ ಮಲ್ಲಿಕಾರ್ಜುನಸ್ವಾಮಿ, ಪತ್ನಿ ಪಾರ್ವತಿ ಹಾಗೂ ಸಹಕರಿಸಿದ ಅಧಿಕಾರಿಗಳ ವಿರುದ್ಧ ದಲಿತ ದೌರ್ಜನ್ಯ ಕಾಯ್ದೆ, ಭಾರತೀಯ ದಂಡ ಸಂಹಿತೆ ಸೂಕ್ತ ಕಾಲಂ ಪ್ರಕಾರ ಪ್ರಕರಣ ದಾಖಲಿಸಿ ತುರ್ತು ವಿಚಾರಣೆ ನಡೆಸುವಂತೆ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್ಬೋಟ್ಗಳಿಂದ…
ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್, ತನ್ನ ನಿರ್ಧಾರವನ್ನು…
ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…
ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…
ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…
ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…