ಮೈಸೂರು: ದಲಿತ ಕುಟುಂಬದಿಂದ ಜಮೀನು ಪಡೆದ ಸಿದ್ದರಾಮಯ್ಯ ಹಾಗೂ ಇದಕ್ಕೆ ಸಹಕರಿಸಿದ ಅಧಿಕಾರಿಗಳ ವಿರುದ್ಧ ದಲಿತ ದೌರ್ಜನ್ಯ ಕಾಯ್ದೆಯಡಿ ದೂರು ದಾಖಲಿಸುವಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ.
ದಲಿತರಿಗೆ ಹಾಗೂ ಜಮೀನು ಮಾಲೀಕ ನಿಂಗ ಎಂಬುವವರ ಕುಟುಂಬಕ್ಕೆ ವಂಚನೆ ಮಾಡಿ, ಅವರಿಗೆ ಸೇರಬೇಕಾದ ಕೋಟ್ಯಾಂತರ ರೂ. ಬೆಲೆ ಬಾಳುವ ನಿವೇಶನವನ್ನು ತಮ್ಮ ಪತ್ನಿ ಪಾರ್ವತಿ ಹೆಸರಿಗೆ ಪಡೆದುಕೊಳ್ಳುವ ಮೂಲಕ ಸಿದ್ದರಾಮಯ್ಯ ಅವರ ಕುಟುಂಬ ದಲಿತರಿಗೆ ವಂಚಿಸಿದೆ. ಹೀಗಾಗಿ ಸಿದ್ದರಾಮಯ್ಯ ಅವರ ಮೇಲೆ ದಲಿತ ದೌರ್ಜನ್ಯ ಕಾಯ್ದೆಯಡಿ ದೂರು ದಾಖಲಿಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಜಮೀನಿಗೆ ಸಂಬಂಧಿಸದ ಹಾಗೂ ಆ ಜಮೀನಿಗೆ ಯಾವುದೇ ಹಕ್ಕು ಬಾಧ್ಯತೆಗೆ ಒಳಪಡದವರಿಂದ ಸಿದ್ದರಾಮಯ್ಯ ಅವರ ಭಾಮೈದ ಮಲ್ಲಿಕಾರ್ಜುನ ಜಮೀನು ಬರೆಸಿಕೊಂಡಿದ್ದಾರೆ. ಅಲ್ಲದೇ ನಿಯಮ ಬಾಹಿರವಾಗಿ ದಲಿತರ ಜಮೀನನ್ನು ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ದಾನಪತ್ರ ಸೃಷ್ಟಿಸಿ ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ದಲಿತ ಕುಟುಂಬ ಹಾಗೂ ಮೂಲ ಜಮೀನಿನ ಮಾಲೀಕನಿಗೆ ಅನ್ಯಾಯವಾಗಿದೆ. ನಿಯಮ ಉಲ್ಲಂಘಿಸಿ ದಲಿತರಿಗೆ ಅನ್ಯಾಯ ಮಾಡಿರುವುದರಿಂದ ಸಿದ್ದರಾಮಯ್ಯ, ಬಾಮೈದ ಮಲ್ಲಿಕಾರ್ಜುನಸ್ವಾಮಿ, ಪತ್ನಿ ಪಾರ್ವತಿ ಹಾಗೂ ಸಹಕರಿಸಿದ ಅಧಿಕಾರಿಗಳ ವಿರುದ್ಧ ದಲಿತ ದೌರ್ಜನ್ಯ ಕಾಯ್ದೆ, ಭಾರತೀಯ ದಂಡ ಸಂಹಿತೆ ಸೂಕ್ತ ಕಾಲಂ ಪ್ರಕಾರ ಪ್ರಕರಣ ದಾಖಲಿಸಿ ತುರ್ತು ವಿಚಾರಣೆ ನಡೆಸುವಂತೆ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…