ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಮೂಗಿನ ನೇರವಾಗಿಯೇ ಅಕ್ರಮ ನಡೆದಿದೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹೇಳಿದರು.
ಮೈಸೂರಿನಲ್ಲಿಂದು ಕಾಂಗ್ರೆಸ್ ಸರ್ಕಾರದ ಅವಧಿಯ ಹಗರಣಗಳ ವಿರುದ್ಧ ನಡೆಸಲಾದ ಮೈಸೂರು ಚಲೋ ಪಾದಯಾತ್ರೆ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಮುಡಾ ಸೈಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಿಶಿಣ ಕುಂಕುಮ ರೀತಿ ಭೂಮಿ ಧಾನ ಬಂದಿರುವುದಾಗಿ ಸಿಎಂ ಹೇಳುತ್ತಿದ್ದಾರೆ. ಅದು ಸಿಎಂ ಅವರಿಗೆ ಕಾನೂನು ಬದ್ಧವಾಗಿ ಬಂದಿದ್ದರೇ ನಾವು ಪ್ರಶ್ನೆ ಮಾಡುತ್ತಿರಲಿಲ್ಲ. ಸಿಎಂ ಸಿದ್ದರಾಮಯ್ಯ ಅವರಿಗೆ ಸಿಕ್ಕಿರುವುದು ಸರ್ಕಾರಿ ಜಮೀನು. ಇದು ಕಾನೂನು ಬಾಹಿರವಾಗಿದೆ. ಹಾಗಾಗಿ ನಾವು ಪ್ರಶ್ನೆ ಮಾಡುತ್ತಿದ್ದೇವೆ ಎಂದರು.
ಮುಂದುವರೆದು, ಸಿಎಂ ಅವರು ಈಗಲೂ ನಾನು ಹದಿನಾಲ್ಕು ಸೈಟ್ ಹಿಂತಿರುಗಿಸಲು ಸಿದ್ದ ಎನ್ನುತ್ತಿದ್ದಾರಂತೆ. ಅವರು ಎಲ್ಲವನ್ನು ಮುಡಾಗೆ ಹಿಂತಿರುಗಿಸಿದರೂ ಸಹಾ ಈ ಕಾನೂನ ಬಾಹಿತ ಚಟುವಟಿಕೆಯನ್ನು ಮುಚ್ಚಿಹಾಕಲು ಸಾಧ್ಯವಾ ಎಂದು ಎಚ್ಡಿಕೆ ಪ್ರಶ್ನಿಸಿದರು.
ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮದಲ್ಲಿ ಎಚ್ಡಿಕೆ ಹಾಗೂ ಬಿಎಸ್ವೈ ಅವರ ಆಡಳಿತಾವಧಿಯ ವಿಡಿಯೋ ತುಣುಕುಗಳನ್ನು ಪ್ರಸಾರ ಮಾಡಿರುವ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿ, ನನ್ನ ಹಾಗೂ ಬಿಎಸ್ವೈ ನಡುವೆ ಮಾತಿನ ಚಕಮಕಿ ನಡೆದಿದೆ. ಆದರೆ ಇಂದು ಅವೆಲ್ಲಕ್ಕೂ ಉತ್ತರ ಕೊಡುವ ನೈತಿಕತೆ ನಮಗಿದೆ ಎಂದು ಹೇಳುವ ಮೂಲಕ ಟಾಂಗ್ ಕೊಟ್ಟರು.
ಬೆಂಗಳೂರು: ಸೂಕ್ತ ಖಾತೆ ಸಿಗದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರಕ್ಕೆ ಮುಜುಗರ ಸೃಷ್ಟಿಸಿದ್ದ ಸಚಿವ ರಾಮಲಿಂಗ ರೆಡ್ಡಿ…
ರಾಯ್ಪುರ: ಇತ್ತೀಚೆಗೆ ಆಫ್ರಿಕಾದ ಹಲವೆಡೆ ಎಬೋಲಾ ವೈರಸ್ ಭೀತಿ ಸೃಷ್ಟಿಯಾಗಿರುವ ಬೆನ್ನಲ್ಲೇ ಇದೀಗ ಛತ್ತೀಸ್ಗಢದಲ್ಲಿ ಮೂವರು ಆಫ್ರಿಕಾ ಪ್ರಜೆಗಳನ್ನು 21…
ಭಾರತೀನಗರ: ಇಲ್ಲಿಗೆ ಸಮೀಪದ ಬೊಮ್ಮನದೊಡ್ಡಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮೂಡಿದೆ. ಗುರುದೇವರಹಳ್ಳಿ ಗ್ರಾಮದ ಚೇತನ್ಮಾದೇಗೌಡ ಎಂಬವರು ಬೊಮ್ಮನದೊಡ್ಡಿ…
ತಿರುವನಂತಪುರಂ: ನೆರೆಯ ಕೇರಳ ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಹಲವೆಡೆ ಭಾರೀ ಮಳೆಯಾಗುತ್ತಿದೆ. ಮಲ್ಲಪುರಂ, ಕೋಯಿಕ್ಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡಿನಲ್ಲಿ…
ಚೆನ್ನೈ: ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಬಿಜೆಪಿಗೆ ಗುಡ್ಬೈ ಹೇಳಿದ ಬೆನ್ನಲ್ಲೇ ಮತ್ತೆರಡು ವಿಕೆಟ್ ಪತನಗೊಂಡಿದೆ. ರಾಜ್ಯ…
ಬೆಂಗಳೂರು: ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ವಾಪಸ್ ಪಡೆದು ಸಚಿವ ಸಂಪುಟದಲ್ಲಿ ಮುಂದುವರೆಯಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್…