ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಮೂಗಿನ ನೇರವಾಗಿಯೇ ಅಕ್ರಮ ನಡೆದಿದೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹೇಳಿದರು.
ಮೈಸೂರಿನಲ್ಲಿಂದು ಕಾಂಗ್ರೆಸ್ ಸರ್ಕಾರದ ಅವಧಿಯ ಹಗರಣಗಳ ವಿರುದ್ಧ ನಡೆಸಲಾದ ಮೈಸೂರು ಚಲೋ ಪಾದಯಾತ್ರೆ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಮುಡಾ ಸೈಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಿಶಿಣ ಕುಂಕುಮ ರೀತಿ ಭೂಮಿ ಧಾನ ಬಂದಿರುವುದಾಗಿ ಸಿಎಂ ಹೇಳುತ್ತಿದ್ದಾರೆ. ಅದು ಸಿಎಂ ಅವರಿಗೆ ಕಾನೂನು ಬದ್ಧವಾಗಿ ಬಂದಿದ್ದರೇ ನಾವು ಪ್ರಶ್ನೆ ಮಾಡುತ್ತಿರಲಿಲ್ಲ. ಸಿಎಂ ಸಿದ್ದರಾಮಯ್ಯ ಅವರಿಗೆ ಸಿಕ್ಕಿರುವುದು ಸರ್ಕಾರಿ ಜಮೀನು. ಇದು ಕಾನೂನು ಬಾಹಿರವಾಗಿದೆ. ಹಾಗಾಗಿ ನಾವು ಪ್ರಶ್ನೆ ಮಾಡುತ್ತಿದ್ದೇವೆ ಎಂದರು.
ಮುಂದುವರೆದು, ಸಿಎಂ ಅವರು ಈಗಲೂ ನಾನು ಹದಿನಾಲ್ಕು ಸೈಟ್ ಹಿಂತಿರುಗಿಸಲು ಸಿದ್ದ ಎನ್ನುತ್ತಿದ್ದಾರಂತೆ. ಅವರು ಎಲ್ಲವನ್ನು ಮುಡಾಗೆ ಹಿಂತಿರುಗಿಸಿದರೂ ಸಹಾ ಈ ಕಾನೂನ ಬಾಹಿತ ಚಟುವಟಿಕೆಯನ್ನು ಮುಚ್ಚಿಹಾಕಲು ಸಾಧ್ಯವಾ ಎಂದು ಎಚ್ಡಿಕೆ ಪ್ರಶ್ನಿಸಿದರು.
ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮದಲ್ಲಿ ಎಚ್ಡಿಕೆ ಹಾಗೂ ಬಿಎಸ್ವೈ ಅವರ ಆಡಳಿತಾವಧಿಯ ವಿಡಿಯೋ ತುಣುಕುಗಳನ್ನು ಪ್ರಸಾರ ಮಾಡಿರುವ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿ, ನನ್ನ ಹಾಗೂ ಬಿಎಸ್ವೈ ನಡುವೆ ಮಾತಿನ ಚಕಮಕಿ ನಡೆದಿದೆ. ಆದರೆ ಇಂದು ಅವೆಲ್ಲಕ್ಕೂ ಉತ್ತರ ಕೊಡುವ ನೈತಿಕತೆ ನಮಗಿದೆ ಎಂದು ಹೇಳುವ ಮೂಲಕ ಟಾಂಗ್ ಕೊಟ್ಟರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…