ಮೈಸೂರು: ಮುಡಾದಿಂದ ಪಾರ್ವತಿ ಸಿದ್ದರಾಮಯ್ಯ ಅವರಿಗೆ ಮಂಜೂರಾದ 14 ನಿವೇಶನಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದಿಂದ ವಿಚಾರಣೆ ನಡೆಸಿದ್ದು, ಅಂತಿಮ ವರದಿ ನಾಳೆಯೇ ಕರ್ನಾಟಕ ಲೋಕಾಯುಕ್ತ ಐಜಿಪಿ ಸುಬ್ರಮಣ್ಣೇಶ್ವರ ರಾವ್ ಅವರಿಗೆ ಸಲ್ಲಿಕೆಯಾಗಲಿದೆ.
ಲೋಕಾಯುಕ್ತ ಅಧಿಕಾರಿಗಳು ಮುಡಾ ಪ್ರಕರಣ ವಿಚಾರವಾಗಿ ಈಗಾಗಲೇ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸಿದ್ದರಾಮಯ್ಯ, ಬಾಮೈದ ಮಲ್ಲಿಕಾರ್ಜುನ ಹಾಗೂ ದೇವರಾಜ್ ಎಂಬುವವರನ್ನು ವಿಚಾರಣೆ ನಡೆಸಿದೆ. ಅಲ್ಲದೇ ಮುಡಾ ನಿವೇಶನಕ್ಕೆ ಸಂಬಂಧಿಸಿದಂತೆ ನಡೆಸಿದ ತನಿಖೆಯನ್ನು ಸೇರಿದಂತೆ ವಿಚಾರಣೆಯ ಎಲ್ಲಾ ಅಂಶಗಳನ್ನು ಒಟ್ಟು 3,000 ಪುಟಗಳ ವರದಿಯಲ್ಲಿ ದಾಖಲಿಸಿದೆ. ಹೀಗಾಗಿ ಈ ವರದಿಯನ್ನು ನಾಳೆಯೇ ಕರ್ನಾಟಕ ಲೋಕಾಯುಕ್ತ ಐಜಿಪಿ ಅವರಿಗೆ ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್ ಅವರು ಸಲ್ಲಿಸುವ ಸಾಧ್ಯತೆಗಳಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನೂ ಮುಡಾ ಪ್ರಕರಣದ ಬಗ್ಗೆ ಎಸ್ಪಿ ಉದೇಶ್ ಅವರು ನಾಳೆಯೇ(ಜನವರಿ.25) ತಮ್ಮ ಹಿರಿಯ ಅಧಿಕಾರಿಗಳಿಗೆ ವರದಿ ಸಲ್ಲಿಸಿದ್ದಾರೆ. ಬಳಿಕ ಲೋಕಾಯುಕ್ತ ಐಜಿಪಿ ಅವರು ಸೋಮವಾರ ಹೈಕೋರ್ಟ್ ಎದುರು ವರದಿ ಸಲ್ಲಿಕೆ ಮಾಡಲಿದ್ದಾರೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.
ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…
ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…
ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…
ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ.…
ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದಿಂದ ಅಂಡರ್ ಗ್ರೌಂಡ್ ಕೇಬಲ್ ಅನ್ನು ಅಳಡಿಸುತ್ತಿದ್ದು, ಕಾಮಗಾರಿಯ…
ಮೀಸಲಾತಿ ವ್ಯವಸ್ಥೆ ಜಾರಿ ಸಂಬಂಧ ಪರ ಮತ್ತು ವಿರೋಧದ ಚರ್ಚೆ ಹಾದಿ ಬೀದಿ, ಹಳ್ಳಿಯ ಪಂಚಾಯಿತಿ ಕಟ್ಟೆಗಳಲ್ಲಿ ಮತ್ತು ಖಾಸಗಿಯಾಗಿ…