ಮೈಸೂರು: ಮುಡಾದಿಂದ ಪಾರ್ವತಿ ಸಿದ್ದರಾಮಯ್ಯ ಅವರಿಗೆ ಮಂಜೂರಾದ 14 ನಿವೇಶನಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದಿಂದ ವಿಚಾರಣೆ ನಡೆಸಿದ್ದು, ಅಂತಿಮ ವರದಿ ನಾಳೆಯೇ ಕರ್ನಾಟಕ ಲೋಕಾಯುಕ್ತ ಐಜಿಪಿ ಸುಬ್ರಮಣ್ಣೇಶ್ವರ ರಾವ್ ಅವರಿಗೆ ಸಲ್ಲಿಕೆಯಾಗಲಿದೆ.
ಲೋಕಾಯುಕ್ತ ಅಧಿಕಾರಿಗಳು ಮುಡಾ ಪ್ರಕರಣ ವಿಚಾರವಾಗಿ ಈಗಾಗಲೇ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸಿದ್ದರಾಮಯ್ಯ, ಬಾಮೈದ ಮಲ್ಲಿಕಾರ್ಜುನ ಹಾಗೂ ದೇವರಾಜ್ ಎಂಬುವವರನ್ನು ವಿಚಾರಣೆ ನಡೆಸಿದೆ. ಅಲ್ಲದೇ ಮುಡಾ ನಿವೇಶನಕ್ಕೆ ಸಂಬಂಧಿಸಿದಂತೆ ನಡೆಸಿದ ತನಿಖೆಯನ್ನು ಸೇರಿದಂತೆ ವಿಚಾರಣೆಯ ಎಲ್ಲಾ ಅಂಶಗಳನ್ನು ಒಟ್ಟು 3,000 ಪುಟಗಳ ವರದಿಯಲ್ಲಿ ದಾಖಲಿಸಿದೆ. ಹೀಗಾಗಿ ಈ ವರದಿಯನ್ನು ನಾಳೆಯೇ ಕರ್ನಾಟಕ ಲೋಕಾಯುಕ್ತ ಐಜಿಪಿ ಅವರಿಗೆ ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್ ಅವರು ಸಲ್ಲಿಸುವ ಸಾಧ್ಯತೆಗಳಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನೂ ಮುಡಾ ಪ್ರಕರಣದ ಬಗ್ಗೆ ಎಸ್ಪಿ ಉದೇಶ್ ಅವರು ನಾಳೆಯೇ(ಜನವರಿ.25) ತಮ್ಮ ಹಿರಿಯ ಅಧಿಕಾರಿಗಳಿಗೆ ವರದಿ ಸಲ್ಲಿಸಿದ್ದಾರೆ. ಬಳಿಕ ಲೋಕಾಯುಕ್ತ ಐಜಿಪಿ ಅವರು ಸೋಮವಾರ ಹೈಕೋರ್ಟ್ ಎದುರು ವರದಿ ಸಲ್ಲಿಕೆ ಮಾಡಲಿದ್ದಾರೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…