ಮೈಸೂರು: ಮೈಸೂರು ನಗಾರಾಭಿವೃದ್ಧಿ ಪ್ರಾಧಿಕಾರ (ಮುಡಾ) 50:50 ಅನುಪಾತದ ಬದಲಿ ನಿವೇಶನ ಪ್ರಕರಣ ದೇಶದ ಗಮನ ಸೆಳೆದಿದೆ. ಈ ಮಧ್ಯೆ ಮುಡಾದಿಂದ ಮಹತ್ತರ ಬೆಳವಣಿಗೆಯಾಗಿದ್ದು, ಕಾನೂನು ಬಾಹಿರ ಖಾತೆಗಳನ್ನು ಹೊಂದಿರುವವರ ಕಂದಾಯವನ್ನು ರದ್ದುಗೊಳಿಸಲು ಜಿಲ್ಲಾಡಳಿತ ಆದೇಶಿಸಿದೆ.
ಜಿಲ್ಲಾಧಿಕಾರಿ ಹಾಗೂ ಮುಡಾದ ಅಧ್ಯಕ್ಷರು ಆದ ಜಿ.ಲಕ್ಷ್ಮಿಕಾಂತ ರೆಡ್ಡಿ ಅವರು ನಗಾರಾಭಿವೃದ್ಧಿ ಕಾಯ್ದೆಯ ಪ್ರಕಾರ ಕೆಲಸ ಮಾಡಲು ಮುಡಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗಾರಾಭಿವೃದ್ಧಿ ಕಾಯ್ದೆಯ ಪ್ರಕಾರ ಮುಡಾದಲ್ಲಿ ಖಾತೆ ಕಂದಾಯ ಮಾಡುವಂತಿಲ್ಲ. ಆದರೆ ಮುಡಾ ಅಧಿಕಾರಿಗಳು ಈ ನಿಯಮಾವಳಿಯನ್ನು ಗಾಳಿಗೆ ತೂರಿ ಖಾತೆ ಕಂದಾಯ ಮಾಡುತ್ತಿದ್ದರು. ಇದೀಗ ಅವುಗಳನ್ನು ರದ್ದುಗೊಳಿಸಲಾಗಿದೆ.
ಆದಾಗ್ಯೂ ಆಯಾ ವ್ಯಾಪ್ತಿಯ ಕಾರ್ಪೋರೇಷನ್, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗೆ ಖಾತೆ ತೆರೆಯುವ ಅಧಿಕಾರವನ್ನು ಹಸ್ತಾಂತರ ಮಾಡಲಾಗಿದೆ.
ಬಳಿಕ ಮುಡಾ ನಿವೇಶನಗಳನ್ನು ಖಾತೆ ಕಂದಾಯ ಮಾಡಲು ಸ್ಥಳೀಯ ಸಂಸ್ಥೆಗಳಿಗೆ ಆದೇಶ ಹೊರಡಿಸಲಾಗಿದೆ. ಈ ಮುಖಾಂತರ ಮುಡಾದಲ್ಲಿ ಮತ್ತಷ್ಟು ದಿನ ಖಾತೆ ಕಂದಾಯ ಸೇರಿ ಇನ್ನಿತರ ಸೇವೆಗಳನ್ನು ರದ್ದು ಮಾಡಲಾಗಿದ್ದು, ಕೇವಲ ಮುಡಾದಲ್ಲಿ ಅಭಿವೃದ್ಧಿ ಕೆಲಸ ಕಾರ್ಯಗಳ ಸೇವೆಯಷ್ಟೇ ಲಭ್ಯವಿರಲಿದೆ.
ಬೆಂಗಳೂರು: ನಾವು ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ವಿಜಯೇಂದ್ರ ಹಾಗೂ ಆರ್.ಅಶೋಕ್ ಹೇಳಲಿ…
ಬೆಂಗಳೂರು: ಮನರೇಗಾ ಯೋಜನೆಯ ಹೆಸರನ್ನು ವಿಬಿ ಜೀ ರಾಮ್ ಜೀ ಎಂದು ಬದಲಾವಣೆ ಮಾಡಿದ ಕೇಂದ್ರ ಸರ್ಕಾರದ ನಡೆ ವಿರುದ್ಧ…
ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದ ದಿನದಂದು ರಾಜ್ಯಪಾಲರ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರ ನಡೆದುಕೊಂಡ ಕ್ರಮ ಕರ್ನಾಟಕದ ಇತಿಹಾಸದಲ್ಲೇ ನಡೆದ…
ಮ್ಯಾನ್ಮಾರ್ ಗಡಿಯಲ್ಲಿ ಭಾರತೀಯ ಸೇನೆ ನಡೆಸಿದ ಅತ್ಯಂತ ಸಾಹಸಮಯ ಕೋವರ್ಟ್ ಆಪರೇಷನ್ ವಿವರಗಳು ಈಗ ಬೆಳಕಿಗೆ ಬಂದಿವೆ. ಕಳೆದ ವರ್ಷ…
ಡಾಕಾ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ಕುಟುಂಬವು ಇದನ್ನು ಯೋಜಿತ ಕೊಲೆ ಎಂದು ಆರೋಪಿಸಿದೆ. ಬಾಂಗ್ಲಾದೇಶದ…
ಮೈಸೂರು: ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಮಕ್ಕಳನ್ನು ತಾಯಿ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು…