Categories: ಮೈಸೂರು

ಮುಡಾ: ಕಾನೂನು ಬಾಹಿರ ಖಾತೆಗಳ ಕಂದಾಯ ಕದ್ದು

ಮೈಸೂರು: ಮೈಸೂರು ನಗಾರಾಭಿವೃದ್ಧಿ ಪ್ರಾಧಿಕಾರ  (ಮುಡಾ) 50:50 ಅನುಪಾತದ ಬದಲಿ ನಿವೇಶನ ಪ್ರಕರಣ ದೇಶದ ಗಮನ ಸೆಳೆದಿದೆ. ಈ  ಮಧ್ಯೆ ಮುಡಾದಿಂದ ಮಹತ್ತರ ಬೆಳವಣಿಗೆಯಾಗಿದ್ದು, ಕಾನೂನು ಬಾಹಿರ ಖಾತೆಗಳನ್ನು ಹೊಂದಿರುವವರ ಕಂದಾಯವನ್ನು ರದ್ದುಗೊಳಿಸಲು ಜಿಲ್ಲಾಡಳಿತ ಆದೇಶಿಸಿದೆ.

ಜಿಲ್ಲಾಧಿಕಾರಿ ಹಾಗೂ ಮುಡಾದ ಅಧ್ಯಕ್ಷರು ಆದ ಜಿ.ಲಕ್ಷ್ಮಿಕಾಂತ ರೆಡ್ಡಿ ಅವರು ನಗಾರಾಭಿವೃದ್ಧಿ ಕಾಯ್ದೆಯ ಪ್ರಕಾರ ಕೆಲಸ ಮಾಡಲು ಮುಡಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗಾರಾಭಿವೃದ್ಧಿ ಕಾಯ್ದೆಯ ಪ್ರಕಾರ ಮುಡಾದಲ್ಲಿ ಖಾತೆ ಕಂದಾಯ ಮಾಡುವಂತಿಲ್ಲ. ಆದರೆ ಮುಡಾ ಅಧಿಕಾರಿಗಳು ಈ ನಿಯಮಾವಳಿಯನ್ನು ಗಾಳಿಗೆ ತೂರಿ ಖಾತೆ ಕಂದಾಯ ಮಾಡುತ್ತಿದ್ದರು. ಇದೀಗ ಅವುಗಳನ್ನು ರದ್ದುಗೊಳಿಸಲಾಗಿದೆ.

ಆದಾಗ್ಯೂ ಆಯಾ ವ್ಯಾಪ್ತಿಯ ಕಾರ್ಪೋರೇಷನ್‌, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗೆ ಖಾತೆ ತೆರೆಯುವ ಅಧಿಕಾರವನ್ನು ಹಸ್ತಾಂತರ ಮಾಡಲಾಗಿದೆ.

ಬಳಿಕ ಮುಡಾ ನಿವೇಶನಗಳನ್ನು ಖಾತೆ ಕಂದಾಯ ಮಾಡಲು ಸ್ಥಳೀಯ ಸಂಸ್ಥೆಗಳಿಗೆ ಆದೇಶ ಹೊರಡಿಸಲಾಗಿದೆ. ಈ ಮುಖಾಂತರ ಮುಡಾದಲ್ಲಿ ಮತ್ತಷ್ಟು ದಿನ ಖಾತೆ ಕಂದಾಯ ಸೇರಿ ಇನ್ನಿತರ ಸೇವೆಗಳನ್ನು ರದ್ದು ಮಾಡಲಾಗಿದ್ದು, ಕೇವಲ ಮುಡಾದಲ್ಲಿ ಅಭಿವೃದ್ಧಿ ಕೆಲಸ ಕಾರ್ಯಗಳ ಸೇವೆಯಷ್ಟೇ ಲಭ್ಯವಿರಲಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ?

ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್‌ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ…

31 mins ago

ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್‌ ಮನೆ ಮೇಲೆ ಇ.ಡಿ ದಾಳಿ

ತಿರುವನಂತಪುರ: ಸಿಎಂಆರ್‌ಎಲ್‌ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…

2 hours ago

ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ

ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯುವ…

3 hours ago

ಕಪಿಲಾ ತೀರದಲ್ಲಿ ಮುಂದುವರಿದ ಬಿಸಿ ನೀರಿನ ಸುಲಿಗೆ

ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್‌ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…

6 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಆಸಿಡ್ ದಾಳಿಯ ಸಂತ್ರಸ್ತೆಯರನ್ನು ಸಂತೈಸುವ ‘ದಿ ನೆಸ್ಟ್ ಸಲೂನ್’

ಬ್ಯೂಟಿ ಪಾರ್ಲರ್‌ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…

6 hours ago

ಜಿರಳೆಗಳು ಎದ್ದಿವೆ, ವ್ಯವಸ್ಥೆಯ ಗಟಾರ ತೊಳೆಯುವವರು ಯಾರು?

ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ  ಹಿಡಿದ…

6 hours ago