ಮೈಸೂರು: ಮುಡಾ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಲೋಕಾಯುಕ್ತ ಅಧಿಕಾರಿಗಳಿಂದ ತನಿಖೆ ನಡೆಯುತ್ತಿದೆ. ಪ್ರಕರಣ ಕೋರ್ಟ್ ಮೆಟ್ಟಿಲು ಹತ್ತಿದ ಪರಿಣಾಮ ಮೈಸೂರಿನ ಅಂದಿನ ಜಿಲ್ಲಾಧಿಕಾರಿ ಹಾಗೂ ಹಾಲಿ ಸಂಸದ ಜಿ.ಕುಮಾರನಾಯ್ಕ್ ಶನಿವಾರ ಲೋಕಾಯುಕ್ತ ಕಚೇರಿಗೆ ತೆರಳಿ ನಿವೇಶನ ಹಂಚಿಕೆ ಸಂಬಂಧ ಮಾಹಿತಿ ನೀಡಿದ್ದಾರೆ.
ಮುಡಾ ನಿವೇಶನ ಹಂಚಿಕೆ ಪ್ರಕರಣ ಸಂಬಂಧ, ಕೋರ್ಟ್ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸಿ ವಿಚಾರಣೆ ನಡೆಸುವಂತೆ ಮೈಸೂರು ಲೋಕಾಯುಕ್ತ ಪೊಲೀಸರಿಗೆ ಆದೇಶ ನೀಡಿತ್ತು. ಈ ಆದೇಶದ ಮೇರೆಗೆ ತನಿಖೆ ನಡೆಸಿ ವಿಚಾರಣೆ ನಡೆಸಿದ ಲೋಕಾಯುಕ್ತ ಎಸ್.ಪಿ.ಉದೇಶ್, ಮುಡಾ ನಿವೇಶನ ಹಂಚಿಕೆಯಾದ ಸಂದರ್ಭದಲ್ಲಿ ಅಂದಿನ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಕುಮಾರ್ ನಾಯ್ಕ್ ಅವರಿಂದ ಪ್ರಕರಣದ ಬಗ್ಗೆ ಮಾಹಿತಿ ಮತ್ತು ಹೇಳಿಕೆಗಳನ್ನು ಪಡೆದಿದ್ದಾರೆ.
ಜಿ.ಕುಮಾರನಾಯ್ಕ್ ಹೇಳಿದ್ದೇನು?
ಮುಡಾ ನಿವೇಶನ ಹಂಚಿಕೆ ವಿಷಯಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತ ತನಿಖೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಅಧಿಕಾರಿಗಳು ನನಗೆ ನೋಟಿಸ್ ನೀಡಿದ್ದರು. ಹೀಗಾಗಿ ನಾನು ಇಂದು ಬೆಳಿಗ್ಗೆ ಕಚೇರಿಗೆ ತೆರಳಿದ್ದೆ. ಸುಮಾರು ಎರಡೂ ಗಂಟೆಗಳ ಕಾಲ ಪ್ರಶ್ನಾವಳಿ ನಡೆಸಿ ನನ್ನಿಂದ ಮಾಹಿತಿ ಪಡೆದಿದ್ದಾರೆ. ಅಲ್ಲದೇ, ಈ ಘಟನೆ ನಡೆದು 20 ವರ್ಷಗಳೇ ಕಳೆದಿವೆ. ಆದರೂ, ಸಹ ನನಗೆ ತಿಳಿದಿರುವಷ್ಟು ನಾನು ಭೂಸ್ವಾಧೀನ ಪ್ರಕ್ರಿಯೆ ಬಗ್ಗೆ ಲೋಕಾಯುಕ್ತರಿಗೆ ಮಾಹಿತಿಯನ್ನು ಒದಗಿಸಿದ್ದೇನೆ ಎಂದು ಹೇಳಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…