ಮೈಸೂರು

ಶಾಸಕ ಜಿ.ಡಿ ದೇವೇಗೌಡಗೂ ಮುಡಾ ಸಂಕಷ್ಟ: ಸ್ನೇಹಮಯಿ ಕೃಷ್ಣ ದೂರು

ಮೈಸೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ)ದ ಮತ್ತೊಂದು ಅಕ್ರಮ ಬಯಲಾಗಿದ್ದು, ಜೆಡಿಎಸ್‌ ಶಾಸಕ ಜಿ.ಟಿ ದೇವೇಗೌಡ ತಮ್ಮ ಪ್ರಭಾವ ಬಳಸಿ ಪ್ರಾಧಿಕಾರದಿಂದ ಅಕ್ರಮವಾಗಿ ತಮ್ಮ ಪುತ್ರಿ ಹಾಗೂ ಅಳಿಯನಿಗೆ ನಿವೇಶನ ಕೋಡಿಸಿದ್ದಾರೆ ಎಂದು ಆರೋಪಿಸಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ದಾಖಲೆ ಸಮೇತ ದೂರು ನೀಡಿರುವ ಸ್ನೇಹಮಯಿ ಕೃಷ್ಣ, ಶಾಸಕ ಜಿ.ಟಿ ದೇವೇಗೌಡ ತಮ್ಮ ಪ್ರಭಾವವನ್ನು ಬಳಸಿಕೊಂಡು, ಸರ್ಕಾರದ ಆಸ್ತಿಗೆ ಸುಳ್ಳು ದಾಖಲೆಗಳನ್ನು ಸೃಷ್ಠಿ ಮಾಡಿಸಿದ್ದಾರೆ. ಪ್ರಾಧಿಕಾರದಿಂದ ಎರಡು ನಿವೇಶನಗಳನ್ನು ಅವರ ಮಗಳು ಮತ್ತು ಅಳಿಯಯ ಹೆಸರಿಗೆ ಮಾಡಿಸಿದ್ದಾರೆ ಎಂದು ದೂರು ನೀಡಿದ್ದಾರೆ.

ಕೋರ್ಟ್‌ನಲ್ಲಿ ವ್ಯಾಜ್ಯ ಇದ್ದ ಭೂಮಿಯನ್ನು ಜಿ.ಟಿ. ದೇವೇಗೌಡರು ತಮ್‌ ಪ್ರಭಾವ ಬಳಸಿ ಚೌಡಯ್ಯ ಎಂಬುವವರಿಗೆ 44,736 ಚದರ ಅಡಿ ಜಾಗದ 6 ನಿವೇಶನ ಕೊಡಿಸಿದ್ದಾರೆ. ಅದರಲ್ಲಿ ಕಿಕ್‌ಬ್ಯಾಕ್‌ ರೂಪದಲ್ಲಿ 2 ನಿವೇಶನ ತಮ್ಮ ಕುಟುಂಬಕ್ಕೆ ಬರೆಸಿಕೊಂಡಿದ್ದಾರೆ. ವಿಜಯನಗರ ಬಡಾವಣೆ 4ನೇ ಹಂತದಲ್ಲಿ 2 ನಿವೇಶನ ಪಡೆದು ಅದನ್ನು ತಮ್ಮ ಮಗಳು ಅನ್ನಪೂರ್ಣ ಹಾಗೂ ಅಳಿಯ ವಿಶ್ವೇಶ್ವರಯ್ಯ ಹೆಸರಿಗೆ ಮಾಡಿಸಿದ್ದಾರೆ.

ಈ ಭೂಮಿ ಮುಡಾ ವ್ಯಾಪ್ತಿಗೆ ಬರದಿದ್ದರೂ ದೇವನೂರು ಬಡಾವಣೆಗೆ ಪರಿಹಾರ ಕೊಟ್ಟಂತೆ ಜಿಟಿ ದೇವೇಗೌಡ ಅವರು ತಮ್ಮ ಪ್ರಭಾವ ಬೀರಿ ತಮ್ಮ ಕುಟುಂಬಕ್ಕೆ ಬರೆಸಿಕೊಂಡಿರುವ ಅನುಮಾನವಿದೆ. ಆದ್ದರಿಂದ ಇದೆಲ್ಲದರ ಬಗ್ಗೆ ಸಮಗ್ರವಾಗಿ ತನಿಖೆ ನಡೆಸುವಂತೆ ಸ್ನೇಹಮಯಿ ಕೃಷ್ಣ ಲೋಕಾ ಪೊಲೀಸರಿಗೆ ಮನವಿ ಮಾಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

9 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

10 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

10 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

12 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

15 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

16 hours ago