ಮೈಸೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ)ದ ಮತ್ತೊಂದು ಅಕ್ರಮ ಬಯಲಾಗಿದ್ದು, ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ತಮ್ಮ ಪ್ರಭಾವ ಬಳಸಿ ಪ್ರಾಧಿಕಾರದಿಂದ ಅಕ್ರಮವಾಗಿ ತಮ್ಮ ಪುತ್ರಿ ಹಾಗೂ ಅಳಿಯನಿಗೆ ನಿವೇಶನ ಕೋಡಿಸಿದ್ದಾರೆ ಎಂದು ಆರೋಪಿಸಿ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ದಾಖಲೆ ಸಮೇತ ದೂರು ನೀಡಿರುವ ಸ್ನೇಹಮಯಿ ಕೃಷ್ಣ, ಶಾಸಕ ಜಿ.ಟಿ ದೇವೇಗೌಡ ತಮ್ಮ ಪ್ರಭಾವವನ್ನು ಬಳಸಿಕೊಂಡು, ಸರ್ಕಾರದ ಆಸ್ತಿಗೆ ಸುಳ್ಳು ದಾಖಲೆಗಳನ್ನು ಸೃಷ್ಠಿ ಮಾಡಿಸಿದ್ದಾರೆ. ಪ್ರಾಧಿಕಾರದಿಂದ ಎರಡು ನಿವೇಶನಗಳನ್ನು ಅವರ ಮಗಳು ಮತ್ತು ಅಳಿಯಯ ಹೆಸರಿಗೆ ಮಾಡಿಸಿದ್ದಾರೆ ಎಂದು ದೂರು ನೀಡಿದ್ದಾರೆ.
ಕೋರ್ಟ್ನಲ್ಲಿ ವ್ಯಾಜ್ಯ ಇದ್ದ ಭೂಮಿಯನ್ನು ಜಿ.ಟಿ. ದೇವೇಗೌಡರು ತಮ್ ಪ್ರಭಾವ ಬಳಸಿ ಚೌಡಯ್ಯ ಎಂಬುವವರಿಗೆ 44,736 ಚದರ ಅಡಿ ಜಾಗದ 6 ನಿವೇಶನ ಕೊಡಿಸಿದ್ದಾರೆ. ಅದರಲ್ಲಿ ಕಿಕ್ಬ್ಯಾಕ್ ರೂಪದಲ್ಲಿ 2 ನಿವೇಶನ ತಮ್ಮ ಕುಟುಂಬಕ್ಕೆ ಬರೆಸಿಕೊಂಡಿದ್ದಾರೆ. ವಿಜಯನಗರ ಬಡಾವಣೆ 4ನೇ ಹಂತದಲ್ಲಿ 2 ನಿವೇಶನ ಪಡೆದು ಅದನ್ನು ತಮ್ಮ ಮಗಳು ಅನ್ನಪೂರ್ಣ ಹಾಗೂ ಅಳಿಯ ವಿಶ್ವೇಶ್ವರಯ್ಯ ಹೆಸರಿಗೆ ಮಾಡಿಸಿದ್ದಾರೆ.
ಈ ಭೂಮಿ ಮುಡಾ ವ್ಯಾಪ್ತಿಗೆ ಬರದಿದ್ದರೂ ದೇವನೂರು ಬಡಾವಣೆಗೆ ಪರಿಹಾರ ಕೊಟ್ಟಂತೆ ಜಿಟಿ ದೇವೇಗೌಡ ಅವರು ತಮ್ಮ ಪ್ರಭಾವ ಬೀರಿ ತಮ್ಮ ಕುಟುಂಬಕ್ಕೆ ಬರೆಸಿಕೊಂಡಿರುವ ಅನುಮಾನವಿದೆ. ಆದ್ದರಿಂದ ಇದೆಲ್ಲದರ ಬಗ್ಗೆ ಸಮಗ್ರವಾಗಿ ತನಿಖೆ ನಡೆಸುವಂತೆ ಸ್ನೇಹಮಯಿ ಕೃಷ್ಣ ಲೋಕಾ ಪೊಲೀಸರಿಗೆ ಮನವಿ ಮಾಡಿದ್ದಾರೆ.
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…