ಮೈಸೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ)ದ ಮತ್ತೊಂದು ಅಕ್ರಮ ಬಯಲಾಗಿದ್ದು, ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ತಮ್ಮ ಪ್ರಭಾವ ಬಳಸಿ ಪ್ರಾಧಿಕಾರದಿಂದ ಅಕ್ರಮವಾಗಿ ತಮ್ಮ ಪುತ್ರಿ ಹಾಗೂ ಅಳಿಯನಿಗೆ ನಿವೇಶನ ಕೋಡಿಸಿದ್ದಾರೆ ಎಂದು ಆರೋಪಿಸಿ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ದಾಖಲೆ ಸಮೇತ ದೂರು ನೀಡಿರುವ ಸ್ನೇಹಮಯಿ ಕೃಷ್ಣ, ಶಾಸಕ ಜಿ.ಟಿ ದೇವೇಗೌಡ ತಮ್ಮ ಪ್ರಭಾವವನ್ನು ಬಳಸಿಕೊಂಡು, ಸರ್ಕಾರದ ಆಸ್ತಿಗೆ ಸುಳ್ಳು ದಾಖಲೆಗಳನ್ನು ಸೃಷ್ಠಿ ಮಾಡಿಸಿದ್ದಾರೆ. ಪ್ರಾಧಿಕಾರದಿಂದ ಎರಡು ನಿವೇಶನಗಳನ್ನು ಅವರ ಮಗಳು ಮತ್ತು ಅಳಿಯಯ ಹೆಸರಿಗೆ ಮಾಡಿಸಿದ್ದಾರೆ ಎಂದು ದೂರು ನೀಡಿದ್ದಾರೆ.
ಕೋರ್ಟ್ನಲ್ಲಿ ವ್ಯಾಜ್ಯ ಇದ್ದ ಭೂಮಿಯನ್ನು ಜಿ.ಟಿ. ದೇವೇಗೌಡರು ತಮ್ ಪ್ರಭಾವ ಬಳಸಿ ಚೌಡಯ್ಯ ಎಂಬುವವರಿಗೆ 44,736 ಚದರ ಅಡಿ ಜಾಗದ 6 ನಿವೇಶನ ಕೊಡಿಸಿದ್ದಾರೆ. ಅದರಲ್ಲಿ ಕಿಕ್ಬ್ಯಾಕ್ ರೂಪದಲ್ಲಿ 2 ನಿವೇಶನ ತಮ್ಮ ಕುಟುಂಬಕ್ಕೆ ಬರೆಸಿಕೊಂಡಿದ್ದಾರೆ. ವಿಜಯನಗರ ಬಡಾವಣೆ 4ನೇ ಹಂತದಲ್ಲಿ 2 ನಿವೇಶನ ಪಡೆದು ಅದನ್ನು ತಮ್ಮ ಮಗಳು ಅನ್ನಪೂರ್ಣ ಹಾಗೂ ಅಳಿಯ ವಿಶ್ವೇಶ್ವರಯ್ಯ ಹೆಸರಿಗೆ ಮಾಡಿಸಿದ್ದಾರೆ.
ಈ ಭೂಮಿ ಮುಡಾ ವ್ಯಾಪ್ತಿಗೆ ಬರದಿದ್ದರೂ ದೇವನೂರು ಬಡಾವಣೆಗೆ ಪರಿಹಾರ ಕೊಟ್ಟಂತೆ ಜಿಟಿ ದೇವೇಗೌಡ ಅವರು ತಮ್ಮ ಪ್ರಭಾವ ಬೀರಿ ತಮ್ಮ ಕುಟುಂಬಕ್ಕೆ ಬರೆಸಿಕೊಂಡಿರುವ ಅನುಮಾನವಿದೆ. ಆದ್ದರಿಂದ ಇದೆಲ್ಲದರ ಬಗ್ಗೆ ಸಮಗ್ರವಾಗಿ ತನಿಖೆ ನಡೆಸುವಂತೆ ಸ್ನೇಹಮಯಿ ಕೃಷ್ಣ ಲೋಕಾ ಪೊಲೀಸರಿಗೆ ಮನವಿ ಮಾಡಿದ್ದಾರೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…