ಮೈಸೂರು: ಮೈಸೂರು ನಗಾರಾಭಿವೃದ್ಧಿ ಪ್ರಾಧಿಕಾರದಲ್ಲಿ(ಮುಡಾ) ಇಷ್ಟೊಂದು ಅಕ್ರಮ ನಡೆದಿದೆ ಎಂದು ಕೊಂಡಿರಲಿಲ್ಲ. ಇದೊಂದು ಜನಪ್ರತಿನಿಧಿಗಳು ತಲೆ ತಗ್ಗಿಸುವ ವಿಚಾರ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದರು.
ಮಂಗಳವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ಈ ಹಿಂದೆ ಮೈಸೂರು ಜಿಲ್ಲಾ ಸಚಿವನಾಗಿದ್ದಾಗ. ನಾನು ಮಾಜಿ ಸಂಸದ ಪ್ರತಾಪ್ ಸಿಂಹ ಎಲ್ಲರೂ ಸೇರಿ ಮುಡಾದ ಸೈಟುಗಳ ಬಗ್ಗೆ ಮಾಹಿತಿ ಪಡೆದಿದ್ದೊ. 7200 ಸೈಟುಗಳನು ಪತ್ತೆ ಹಚ್ಚಿ ಹರಾಜು ಹಾಕಲು ತೀರ್ಮಾನ ಮಾಡಿದ್ದವು ಎಂದರು.
ಈ ಹಿಂದೆ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅಭಿರಾಮ್ ಜಿ.ಶಂಕರ್, ಮುಡಾ ಆಯುಕ್ತ ಕಾಂತರಾಜ್ ಎಲ್ಲರೂ ಜನ ಪರ ಕೆಲಸ ಮಾಡಲು ನಿರ್ಧಾರ ಮಾಡಿದ್ದವು. ಆದರೆ ಅದು ಆಗಲಿಲ್ಲ. ಈಗ ತನಿಖೆ ನಡೆಯುತ್ತಿದೆ, ನಡೆಯಲಿ ಎಲ್ಲಾ ಅಕ್ರಮ ಹೊರ ಬರಲಿ ಎಂದರು.
ಮುಡಾ ತನಿಖೆಯನ್ನು ಜಾರಿ ನಿರ್ದೇಶಾಲಯವು ಕೈಗೆತ್ತಿಕೊಂಡಿದ್ದು, ಇದರಿಂದ ಮುಡಾ ಸ್ವಚ್ಛವಾಗಲಿದೆ ಎಂದು ಹೇಳಿದರು.
ಶೋಭಾ ಕರಂದ್ಲಾಜೆ ಚಿನ್ನವಿದ್ದಂತೆ…
ಶೋಭಾ ಕರಂದ್ಲಾಜೆ ಪುಟವಿಟ್ಟ ಚಿನ್ನವಿದ್ದಂತೆ. ಒಬ್ಬ ಹೆಣ್ಣುಮಗಳ ಬಗ್ಗೆ ಮತಾನಾಡುವುದು ಅವರು ಕೀಳುಮಟ್ಟ ಭಾವನೆಯನ್ನು ತೋರಿಸುತ್ತದೆ. ಅವರ ಘನತೆಗೆ ಇದು ತಕ್ಕದ್ದಲ್ಲ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರ ವಿರುದ್ಧ ಸೋಮಣ್ಣ ಕಿಡಿಕಾರಿದರು.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲಿ ಅತಿ ಹೆಚ್ಚು ಕಾಲ ಸರ್ಕಾರದ ಮುಖ್ಯಸ್ಥರಾದ ದಾಖಲೆ ಬರೆದಿದ್ದಾರೆ. ಈ ಮೂಲಕ ಸಿಕ್ಕಿಂನ…
ತುಮಕೂರು: ಏಪ್ರಿಲ್.1ರಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು…
ಬೆಂಗಳೂರು: ಏಪ್ರಿಲ್.9ರಂದು ನಡೆಯಲಿರುವ ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಬಾಗಲಕೋಟೆ…
ಬೆಂಗಳೂರು: ಅಮೇರಿಕಾದಲ್ಲಿರುವ ಕನ್ನಡಿಗರ ಅತಿ ದೊಡ್ಡ ಸಾಂಸ್ಕೃತಿಕ ಸಂಭ್ರಮವಾಗಿರುವ ಅಕ್ಕ ವಿಶ್ವ ಕನ್ನಡ ಸಮ್ಮೇಳನ ರಾಯಭಾರಿಯಾಗಿ ನಟ ರಿಷಬ್ ಶೆಟ್ಟಿ…
ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯನ್ನು 48 ಗಂಟೆಯೊಳಗೆ ಸಂಪೂರ್ಣ ಓಪನ್ ಮಾಡಬೇಕು ಎಂದು ಇರಾನ್ಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಡುವು…
ಮೈಸೂರಿನ ಶಾರದಾದೇವಿ ನಗರದ ಸರ್ಕಲ್ನಲ್ಲಿ ಒಂದು ವರ್ಷದ ಹಿಂದೆ ಲಕ್ಷಾಂತರ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಆದರೆ…