ಮೈಸೂರು

ಮುಡಾದ 50:50 ಪ್ರಕರಣ ವಿಚಾರ: ಸತ್ಯ ಮರೆ ಮಾಚಲು ಸಾಧ್ಯವಿಲ್ಲ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾದ 50:50 ಅನುಪಾತದ ಬದಲಿ ನಿವೇಶನ ಪ್ರಕರಣದಲ್ಲಿ ಯಾರಿಂದಲೂ ಸತ್ಯ ಮರೆ ಮಾಚಲು ಸಾಧ್ಯವಿಲ್ಲ ಎಂದು ದೂರುದಾರರ ಸ್ನೇಹಮಯಿ ಕೃಷ್ಣ ತಿಳಿಸಿದ್ದಾರೆ.

ಮೈಸೂರಿನಲ್ಲಿ ಇಂದು(ಮಾರ್ಚ್.19) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾದಿಂದ 50:50 ಅನುಪಾತದ ಬದಲಿ ನಿವೇಶನದಲ್ಲಿ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರಿಗೆ ಅಕ್ರಮವಾಗಿ ನಿವೇಶನಗಳನ್ನು ನೀಡಲಾಗಿದೆ. ಇದರಿಂದ ಮುಡಾಗೆ ಆರ್ಥಿಕ ನಷ್ಟವಾಗಿದೆ ಎಂದು ಲೋಕಾಯುಕ್ತ ವರದಿಯಲ್ಲಿ ಉಲ್ಲೇಖ ಮಾಡಿದ್ದಾರೆ. ಆದರೆ ಒಂದು ಕಡೆ ಪಾರ್ವತಿ ಸಿದ್ದರಾಮಯ್ಯ ಅವರಿಗೆ ಮುಡಾ ಕಚೇರಿಯೇ ನಿವೇಶನ ನೀಡಿದ್ದಾರೆ ಹೇಳದ್ದಾರೆ. ಮತ್ತೊಂದು ಕಡೆ ಈ ಪ್ರಕರಣದಲ್ಲಿ ಆರೋಪಿಗಳ ಪಾತ್ರವಿಲ್ಲವೆಂದು ಹೇಳಿದ್ದಾರೆ. ಹೀಗಾಗಿ ಸೋಮವಾರ(ಮಾರ್ಚ್.18) ನಾನೇ ಕೋರ್ಟ್‌ನಲ್ಲಿ ವಾದ ಮಂಡಿಸಿದ್ದೇನೆ ಎಂದು ಹೇಳಿದರು.

ಈ ಪ್ರಕರಣದ ಬಗ್ಗೆ ವಾದ ಮಂಡನೆ ಮಾಡುವ ವೇಳೆ ನಿಖಾಧಿಕಾರಿ ಹೇಳಿದ್ದು, ವರದಿ ನೀಡಿದ್ದು ನಿಜವಲ್ಲ. ಅವರು ಸಿಎಂ ಪ್ರಭಾವಕ್ಕೆ ಸಿದ್ದರಾಮಯ್ಯ ಒಳಗಾಗಿ ವರದಿ ನೀಡಿದ್ದಾರೆಂದು ಹೇಳಿದ್ದೇನೆ. ಆದ್ದರಿಂದಲೇ ಕೋರ್ಟ್‌, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಸ್ಪಷ್ಟೀಕರಣ ನೀಡುವಂತೆ ಆದೇಶ ಹೊರಡಿಸಿದೆ. ಅಲ್ಲದೇ ಈ ವಿಚಾರಣೆಯನ್ನು ಮಾರ್ಚ್.24ಕ್ಕೆ ಮುಂದೂಡಲಾಗಿದೆ. ಆ ದಿನ ಲೋಕಾಯುಕ್ತ ಅಧಿಕಾರಿಗಳು ಏನೂ ಸ್ಪಷ್ಟೀಕರಣ ನಿಡುತ್ತಾರೋ ನೀಡಲಿ. ಆದರೆ ಅಕ್ರಮ ಆಗಿರುವುದು ನಿಜವೆಂದು ನಾನು ಸಾಬೀತು ಮಾಡೇ ಮಾಡುತ್ತೇನೆ ಎಂದರು

ಅರ್ಚನ ಎಸ್‌ ಎಸ್

Recent Posts

ಪಾಕಿಸ್ತಾನದಲ್ಲಿ ಭೀಕರ ಬಾಂಬ್‌ ಸ್ಫೋಟ: 9 ಮಂದಿ ಸಾವು

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…

2 mins ago

ನಾಳೆಯಿಂದ ಎರಡು ದಿನ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…

3 mins ago

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…

3 mins ago

ನಾಗಮಲೆ ಗ್ರಾಮದಲ್ಲಿ ಎರಡು ಮೇಕೆ ಹೊತ್ತೊಯ್ದ ಚಿರತೆ: ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…

4 mins ago

ಮೇ.3ರಂದು ನಡೆದಿದ್ದ ನೀಟ್‌ ಪರೀಕ್ಷೆ ರದ್ದು

ನವದೆಹಲಿ: ಮೇ.3ರಂದು ನಡೆದಿದ್ದ ನೀಟ್‌ ಯುಜಿ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ರದ್ದುಗೊಳಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಎನ್‌ಜಿಎ…

1 hour ago

ಅಸ್ಸಾಂ ಸಿಎಂ ಆಗಿ ಹಿಮಂತ ಬಿಸ್ವಾ ಶರ್ಮಾ ಪ್ರಮಾಣವಚನ ಸ್ವೀಕಾರ

ಗುವಾಹಟಿ: ಹಿಮಂತ ಬಿಸ್ವಾ ಶರ್ಮಾ ಅವರು ಸತತ ಎರಡನೇ ಬಾರಿಗೆ ಅಸ್ಸಾಂನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಗುವಾಹಟಿಯ ಖಾನಾಪಾರಾದಲ್ಲಿರುವ ಪಶುವೈದ್ಯಕೀಯ…

3 hours ago